ಕುಡಿವ ನೀರಿನ ಸಮಸ್ಯೆ ಪರಿಹರಿಸಿ


Team Udayavani, Dec 1, 2020, 5:10 PM IST

ಕುಡಿವ ನೀರಿನ ಸಮಸ್ಯೆ ಪರಿಹರಿಸಿ

ಶಿವಮೊಗ್ಗ: ಕುಡಿಯುವ ನೀರಿನ ಸಮಸ್ಯೆ ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳುವ ಕುರಿತಂತೆ ಪಾಲಿಕೆ ಮೇಯರ್‌ ಸುವರ್ಣ ಶಂಕರ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಾಲಿಕೆ ಸದಸ್ಯರು ಪಕ್ಷಬೇಧ ಮರೆತು ಆಗ್ರಹಿಸಿದರು.

ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯವೈಖರಿ ಬಗ್ಗೆ ಪಾಲಿಕೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಒಂದು ವಾರದೊಳಗೆ ನೀರಿನಸಮಸ್ಯೆ ಸರಿಪಡಿಸಬೇಕು. ಇಲ್ಲದಿದ್ದರೆ ಇಲಾಖೆಯಾದರೂ ಏಕೆ ಬೇಕು ಎಂದು ಪ್ರಶ್ನಿಸಿದರು.

ಉಪಮೇಯರ್‌ ಸುರೇಖಾ ಮುರಳಿಧರ್‌ ನೀರು ಸರಬರಾಜು ಮತ್ತು ಅಧಿಕಾರಿಗಳ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿ, ಅನುದಾನ ಸೌಲಭ್ಯ ಸಮರ್ಪಕವಾಗಿಕಲ್ಪಿಸಿದ್ದರೂ ನೀರು ಪೂರೈಕೆಯಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ. ಪಾಲಿಕೆ ಆಡಳಿತಕ್ಕೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಚ್‌.ಸಿ. ಯೋಗೀಶ್‌ ಮಾತನಾಡಿ, ಹಬ್ಬದ ಸಂದರ್ಭದಲ್ಲೇ ಸಮರ್ಪಕವಾಗಿ ನೀರುಪೂರೈಕೆ ಮಾಡಿಲ್ಲ. ಬೇಜವಾಬ್ದಾರಿಯಿಂದ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಸದಸ್ಯರಾದ ನಾಗರಾಜ್‌ ಕಂಕಾರಿ, ಆರ್‌.ಸಿ. ನಾಯ್ಕ, ಯಮುನಾ ರಂಗೇಗೌಡ, ಇ.ವಿಶ್ವಾಸ್‌ ಮೊದಲಾದವರು ನೀರಿನ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಡಳಿತ ಪಕ್ಷದ ನಾಯಕ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, ಅಧಿಕಾರಿಗಳುಜವಾಬ್ದಾರಿಯಿಂದ ಕೆಲಸ ಮಾಡಬೇಕು. ನೀರು, ವಿದ್ಯುತ್‌ ಪೂರೈಕೆಯಲ್ಲಿವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು. ಒಂದು ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಸೂಚಿಸಿದರು. ಸುರೇಖಾ ಮುರಳೀಧರ್‌ ಒಂದು ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಹೊರಟು ಹೋಗಿ ಎಂದರು.

ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದ ಮೇಯರ್‌ ಸುವರ್ಣ ಶಂಕರ್‌, ಡಿ.10 ರಂದು ನೀರಿನ ಸಮಸ್ಯೆ ಕುರಿತಾಗಿವಿಶೇಷ ಸಭೆ ಕರೆಯುವುದಾಗಿ ತಿಳಿಸಿದರು. ವಿಧಾನ ಪರಿಷತ್‌ ಸದಸ್ಯ ಆರ್‌ .ಪ್ರಸನ್ನಕುಮಾರ್‌ ಮಾತನಾಡಿ, ಸ್ಮಾರ್ಟ್ ಸಿಟಿ ಕಾಮಗಾರಿಗಳ ಹೆಸರಲ್ಲಿ ನಗರವನ್ನು ಹಾಳು ಮಾಡಲಾಗುತ್ತಿದೆ. ಪಾಲಿಕೆ ಆಡಳಿತ ಬಿಗಿಯಿಲ್ಲದ ಕಾರಣ ಕಾಮಗಾರಿಗಳು ಕಳಪೆಯಾಗಿ ಸರ್ಕಾರದ ಹಣ ಪೋಲಾಗುತ್ತಿದೆ ಎಂದು ದೂರಿದರು.

ಈ ವೇಳೆ ಆಡಳಿತ ಪಕ್ಷದ ನಾಯಕ ಎಸ್‌. ಎನ್‌.ಚನ್ನಬಸಪ್ಪ, ಬಿಜೆಪಿ ಆಡಳಿತದಲ್ಲಿಶಿವಮೊಗ್ಗದ ಚಿತ್ರಣ ಬದಲಿಸಲಾಗುತ್ತಿದೆ. ಸ್ಮಾರ್ಟ್‌ಸಿಟಿ ಯೋಜನೆಯಡಿ ಗುಣಮಟ್ಟದ ಕಾಮಗಾರಿಗಳು ನಡೆಯುತ್ತಿವೆ ಎಂದು ಹೇಳಿದರು. ಕಸವನ್ನು ತುಂಗಾನಾಲೆಗೆ ಹಾಕಲಾಗುತ್ತಿದೆ ಎಂದು ಆರ್‌ .ಪ್ರಸನ್ನಕುಮಾರ್‌ ಹೇಳಿದ್ದು, ಕಸ ತೆಗೆಸದಿದ್ದರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

ನೀರು ಪೂರೈಕೆ, ವಿದ್ಯುತ್‌, ಸ್ಮಾರ್ಟ್‌ಸಿಟಿ ಕಾಮಗಾರಿ ಕುರಿತಾಗಿ ವ್ಯಾಪಕ ಚರ್ಚೆ ನಡೆದು ಮಧ್ಯಾಹ್ನದ ನಂತರವೂ ಸಭೆ ಮುಂದುವರಿದಿತ್ತು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.