ಹಿಜಾಬ್ ವಿವಾದದ ಹಿಂದೆ ಯಾವುದೋ ಕಾಣದ ಶಕ್ತಿ ಕೆಲಸ ಮಾಡುತ್ತಿದೆ: ಆರಗ ಜ್ಞಾನೇಂದ್ರ
Team Udayavani, Feb 7, 2022, 2:13 PM IST
ಶಿವಮೊಗ್ಗ: ಹಿಜಾಬ್ ಬಗ್ಗೆ ಯಾವಾಗಲೂ ಇಲ್ಲದಿರುವ ಒಲವು ಈಗ ಬಂದಿದೆ. ಕಡ್ಡಾಯವಾಗಿ ನಾವು ಹಿಜಾಬ್ ಧರಿಸಿಬರುತ್ತೇವೆ. ಇಲ್ಲದಿದ್ದರೆ ಕಾಲೇಜು ಬಿಡುತ್ತೇವೆ ಎನ್ನುತ್ತಿದ್ದಾರೆ. ಯಾವಾಗಲೂ ಮಕ್ಕಳು ಹೀಗೆ ಹೇಳುತ್ತಿರಲಿಲ್ಲ. ಇದರ ಹಿಂದೆ ಯಾವುದೋ ಕಾಣದ ಶಕ್ತಿ ಕೆಲಸ ಮಾಡುತ್ತಿದೆ ಎಂಬ ಅನುಮಾನ ಬರುತ್ತಿದೆ. ಇದರ ಹಿಂದೆ ಯಾರಿದ್ದಾರೆಂಬ ಬಗ್ಗೆ ತನಿಖೆ ನಡೆಸಬೇಕೆಂದು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವುದು ಕಾಲೇಜು ಆವರಣದಲ್ಲಿ ಸಾಧ್ಯವಿಲ್ಲ. ಕಾಲೇಜು ಆಡಳಿತ ನಿರ್ಧರಿಸಿರುವ ಸಮವಸ್ತ್ರವನ್ನೇ ಕಾಲೇಜಿನಲ್ಲಿ ಧರಿಸಬೇಕು. ಇದನ್ನು ಕಡ್ಡಾಯ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದರು.
ಏನೇನೋ ವೇಷ ಧರಿಸಿಕೊಂಡು ಬರುತ್ತೇವೆ. ನನ್ನ ಧರ್ಮ ಇದು, ನನ್ನ ಧರ್ಮ ಅದು ಎಂದು ಹೇಳಲಾಗುವುದಿಲ್ಲ. ಧರ್ಮವನ್ನು ಮೀರಿ ಭಾರತ ಮಾತೆಯ ಮಕ್ಕಳು ನಾವೆಲ್ಲ ಒಂದೇ ಎಂಬ ಭಾವನೆ ನಿರ್ಮಾಣವಾಗಬೇಕು. ಇಂಥ ಸಂಸ್ಕಾರ ಸಿಗುವ ಒಂದೇ ಒಂದು ವೇದಿಕೆ ಶಾಲೆ ಮತ್ತು ಕಾಲೇಜುಗಳು. ಸಮವಸ್ತ್ರ ಸಮಾನತೆಯ ಸಂಕೇತ, ಶಾಲಾ ಕಾಲೇಜುಗಳಲ್ಲಿ ಸಮಾನತೆ ಸಾರುವ ಕೆಲಸ ಆಗಬೇಕು ಎಂದರು.
ಇದನ್ನೂ ಓದಿ:ಹಿಜಾಬ್-ಕೇಸರಿ ಶಾಲು ವಿವಾದ ನಡುವೆ ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು!
ಕಾಲೇಜುಗಳ ಆಡಳಿತ ಮಂಡಳಿಗೆ ಎಲ್ಲ ರೀತಿಯ ಪೊಲೀಸ್ ರಕ್ಷಣೆ ನೀಡುವಂತೆ ಸೂಚಿಸಿದ್ದೇನೆ. ಕೆಲ ತಿಂಗಳಲ್ಲೇ ಪರೀಕ್ಷೆ ಆರಂಭವಾಗಲಿದೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಮಕ್ಕಳನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು ಎಂದು ಗೃಹ ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ