ಶಿವಮೊಗ್ಗ: ಉತ್ತರ ಪ್ರದೇಶದ ಹುಲಿ ಮೀಸಲು ಅರಣ್ಯಕ್ಕೆ ಸಕ್ರೆಬೈಲಿನ ಸೂರ್ಯ ಆನೆ

ಕೊನೆಯ ಫೋಟೊ ಕ್ಲಿಕ್ಕಿಸಿಕೊಂಡು ಸಿಬ್ಬಂದಿಯಿಂದ ಬೀಳ್ಕೊಡುಗೆ

Team Udayavani, Nov 2, 2022, 11:22 AM IST

aneಉತ್ತರ ಪ್ರದೇಶದ ಹುಲಿ ಮೀಸಲು ಅರಣ್ಯಕ್ಕೆ ಸಕ್ರೆಬೈಲಿನ ಸೂರ್ಯ ಆನೆ

ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದ ಸೂರ್ಯ ಆನೆಯನ್ನು ಉತ್ತರ ಪ್ರದೇಶದ ಹುಲಿ ಮೀಸಲು ಅರಣ್ಯಕ್ಕೆ ವರ್ಗಾಯಿಸಲಾಗುತ್ತಿದೆ. ಬಿಡಾರದ ಸಿಬ್ಬಂದಿ ಸೂರ್ಯನೊಂದಿಗೆ ಕೊನೆಯ ಫೋಟೊ ಕ್ಲಿಕ್ಕಿಸಿಕೊಂಡು ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದರು.

ಸೂರ್ಯ ಆನೆಯನ್ನು ಉತ್ತರ ಪ್ರದೇಶದ ಫಿಲಿಬಿಟ್ ಹುಲಿ ಮೀಸಲು ಅರಣ್ಯಕ್ಕೆ ವರ್ಗಾಯಿಸಲಾಗುತ್ತಿದೆ. ಈಗಾಗಲೆ ಅಲ್ಲಿಂದ ಲಾರಿ ಆಗಮಿಸಿದ್ದು ಸೂರ್ಯ ಆನೆಯನ್ನು ಲಾರಿ ಹತ್ತಿಸಲಾಗಿದೆ.

ಸರ್ಕಾರದ ಸೂಚನೆ ಮೇರೆಗೆ ಸೂರ್ಯ ಅನೆಯನ್ನು ಉತ್ತರ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ. ಈ ಹಿನ್ನಲೆ ಸಕ್ರೆಬೈಲು ಬಿಡಾರದ ಸಿಬ್ಬಂದಿ ಸೂರ್ಯನಿಗೆ ಬೀಳ್ಕೊಡುಗೆ ನೀಡಿದರು. ಸೂರ್ಯ ಆನೆಯ ಮಾವುತ, ಕಾವಾಡಿ, ಬಿಡಾರದ ಉಳಿದ ಸಿಬ್ಬಂದಿ ಆನೆಯೊಂದಿಗೆ ನಿಂತು ಫೋಟೊ ಕ್ಲಿಕ್ಕಿಸಿಕೊಂಡರು. ಸುರಕ್ಷಿತವಾಗಿ ಲಾರಿ ಹತ್ತಿಸಿ ಕಳುಹಿಸಿಕೊಟ್ಟಿದ್ದಾರೆ.

12 ವರ್ಷದ ಸೂರ್ಯ ಆನೆಯು ಸಕ್ರೆಬೈಲು ಬಿಡಾರದ ನೇತ್ರಾಳ ಮಗ. ಬಿಡಾರದ ಸಿಬ್ಬಂದಿಯೊಂದಿಗೆ ಚನ್ನಾಗಿ ಹೊಂದಿಕೊಂಡಿದ್ದ ಸೂರ್ಯ ಇನ್ಮುಂದೆ ಉತ್ತರ ಪ್ರದೇಶದ ಫಿಲಿಬಿಟ್ ಕಾಡಿನಲ್ಲೆ ಕಳೆಯಬೇಕಾಗುತ್ತದೆ. ಉತ್ತರ ಪ್ರದೇಶ ಸರ್ಕಾರ ಆನೆಗಳಿಗಾಗಿ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆ ವಿವಿಧೆಡೆಯ ಆಯ್ದ ಕೆಲವು ಆನೆಗಳನ್ನು ಉತ್ತರ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ. ಸಕ್ರೆಬೈಲಿನಿಂದ ಸೂರ್ಯ ಆನೆಯನ್ನು ಕಳುಹಿಸಲಾಗುತ್ತಿದೆ.

ಆನೆಗಳ ಆಯ್ಕೆ ಮಾಡಲು ಉತ್ತರ ಪ್ರದೇಶದಿಂದಲೆ ವೈದ್ಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯ ತಂಡ ರಾಜ್ಯಕ್ಕೆ ಆಗಮಿಸಿತ್ತು. ವಿವಿಧ ಬಿಡಾರಗಳಿಗೆ ತೆರಳಿ ನಾಲ್ಕು ಆನೆಗಳನ್ನು ಆಯ್ಕೆ ಮಾಡಿದ್ದಾರೆ. ಉತ್ತರ ಪ್ರದೇಶದ ಹವಾಮಾನಕ್ಕೆ ಹೊಂದಿಕೊಳ್ಳಲು ಸಾಧ್ಯವಿರುವ ಆನೆಗಳನ್ನು ಗುರುತಿಸಲಾಗಿತ್ತು. ಅದರಂತೆ ಸರ್ಕಾರಗಳ ನಡುವೆ ಒಪ್ಪಂದವಾಗಿದ್ದು ಆನೆಗಳನ್ನು ವರ್ಗಾಯಿಸಲಾಗುತ್ತಿದೆ. ಸಕ್ರೆಬೈಲಿನ ಸೂರ್ಯ, ದುಬಾರೆಯ ರಾಮಪುರ ಕ್ಯಾಂಪ್ ಮತ್ತು ಕೊಡಗಿನ ತಿತಿಮತಿಯ ಇನ್ನು ಮೂರು ಆನೆಗಳು ಉತ್ತರ ಪ್ರದೇಶದತ್ತ ಹೊರಟಿವೆ.

ರಾಜ್ಯದಿಂದ ಹೊರಟಿರುವ ಆನೆಗಳು ಉತ್ತರ ಪ್ರದೇಶದ ಫಿಲಿಬಿಟ್ ಆರಣ್ಯ ತಲುಪುವ ತನಕ ಅನೇಕ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆನೆ ಸಾಗುವ ಮಾರ್ಗವನ್ನು ಈಗಾಗಲೆ ಗುರುತಿಸಲಾಗಿದೆ. ಆನೆಗಳು ಇರುವ ಲಾರಿ ತೆರಳುತ್ತಿದ್ದಂತೆ ಆಯಾ ಜಿಲ್ಲೆಯ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಎಸ್ಕಾರ್ಟ್ ಮಾಡಬೇಕಿದೆ. ನಿತ್ಯ 250 ಕಿ.ಮೀ ಮಾತ್ರ ಆನೆಯನ್ನು ಕೊಂಡೊಯ್ಯಬೇಕಿದೆ. ನಿತ್ಯ ಉಳಿದುಕೊಳ್ಳಲು ಆಯಾ ಜಿಲ್ಲೆಯಲ್ಲಿ ನಿಗದಿತ ಸ್ಥಳವನ್ನು ಒದಗಿಸಬೇಕಿದೆ. ಇನ್ನು ಪ್ರತಿ ಮೂರು ಗಂಟೆಗೆ ಒಮ್ಮೆ ಆನೆಗೆ ಸ್ನಾನ ಮಾಡಿಸಬೇಕಾಗುತ್ತದೆ.

ಇದನ್ನೂ ಓದಿ : ಚಿಕ್ಕಮಗಳೂರು: ಮೋಟಮ್ಮ ಪುತ್ರಿಗೆ ಕೈ ಟಿಕೆಟ್‌ ನೀಡಿದ್ದಕ್ಕೆ ಮುಖಂಡರ ಆಕ್ರೋಶ

ಸಕ್ರೆಬೈಲಿನ ವೈದ್ಯಾಧಿಕಾರಿ ಡಾ. ವಿನಯ್, ಕಾವಾಡಿಗಳಾದ ರಾಜೇಶ್, ಅಮ್ಜದ್ ಅವರು ಸೂರ್ಯ ಅನೆಯೊಂದಿಗೆ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದಾರೆ. ಅಲ್ಲಿಯ ವಾತಾವರಣಕ್ಕೆ ಆನೆ ಹೊಂದಿಕೊಂಡ ಬಳಿಕ ಇವರು ಹಿಂತಿರುಗಲಿದ್ದಾರೆ.

ಉತ್ತರ ಪ್ರದೇಶದ ಆರಣ್ಯಗಳಿಗೆ ರಾಜ್ಯದ ಆನೆಗಳ ವರ್ಗಾವಣೆ ಇದೆ ಮೊದಲಲ್ಲ. 2017ರಲ್ಲಿ ರಾಜ್ಯದ ವಿವಿಧ ಬಿಡಾರಗಳಿಂದ 10 ಆನೆಗಳನ್ನು ಅಲ್ಲಿಯ ದೂದ್ವ ರಾಷ್ಟ್ರೀಯ ಉದ್ಯಾನಕ್ಕೆ ಆನೆಗಳನ್ನು ಕಳುಹಿಸಲಾಗಿತ್ತು. ಆಗ ಸಕ್ರೆಬೈಲು ಬಿಡಾರದಿಂದ 4 ಆನೆಗಳನ್ನ ಕಳುಹಿಸಲಾಗಿತ್ತು.

ಟಾಪ್ ನ್ಯೂಸ್

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.