ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ


Team Udayavani, Apr 15, 2024, 5:26 PM IST

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಉದಯವಾಣಿ ಸಮಾಚಾರ
ಸೊರಬ: ಬಿದಿರಿನಿಂದ ಬುಟ್ಟಿ ಹೆಣೆದು ಮಾರಾಟ ಮಾಡುವ ಮೂಲಕ ಬದುಕು ಕಟ್ಟಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬಗಳು ಆಧುನಿಕ ತಂತ್ರಜ್ಞಾನದ ಪರಿಕರಗಳ ಮತ್ತು ಪ್ಲಾಸ್ಟಿಕ್‌ ಪರಿಕರಗಳ ನಡುವೆ ಪೈಪೋಟಿ ನಡೆಸಲಾಗದ ಸ್ಥಿತಿ ತಲುಪಿವೆ. ಪರಂಪರೆಯಿಂದ ಮಾಡಿಕೊಂಡು ಬಂದಿರುವ ವೃತ್ತಿ ಇಂದು ಸಂಕಷ್ಟವನ್ನು ಎದುರಿಸುವಂತಾಗಿದೆ.

‘ಬಿದಿರು ನಾನಾರಿಗಲ್ಲಾದವಳು’ ಎಂಬ ಜನಪದ ಹಾಡು ಹೆಚ್ಚು ಇವರ ಬದುಕಿಗೆ ಅನ್ವರ್ಥ ವಾಗುತ್ತದೆ. ರೈತೋಪಯೋಗಿ ಕೃಷಿಗೆ
ಅಗತ್ಯವಾದ ವಿವಿಧ ರೀತಿಯ ಬುಟ್ಟಿಗಳಾದ ಬಿತ್ತನೆ ಮಾಡುವ ಬಿದಿರಿನ ಸಡ್ಡೆ, ಗೊಬ್ಬರ ಬೀಸುವ ಅಗಲವಾದ ತಟ್ಟೆಗಳು, ಮಂಖರಿ, ಎತ್ತುಗಳ ಬಾಯಿಗೆ ಹಾಕುವ ಬಿದಿರಿನ ಹೊಡಲು, ಧಾನ್ಯವನ್ನು ಸಂಗ್ರಹಿಸಲು ಭತ್ತದ ಕಣಜ, ಬೆತ್ತದ ಬುಟ್ಟಿ, ಚಿಬುಲ, ಬಿದಿರಿನ ತೊಟ್ಟಿಲು, ಮೀನು ಹಿಡಿಯುವ ಕೂಣಿ, ಮಠಗಳ ಸ್ವಾಮೀಜಿಗಳಿಗೆ  ದಂಡಿಗೆ ಹೀಗೆ ವಿವಿಧ ಬಗೆಯ ಸಲಕರಣೆಗಳನ್ನು
ತಯಾರಿಸುತ್ತಿದ್ದ ಕುಟುಂಬಗಳ ಸ್ಥಿತಿ ಇದೀಗ ಅಯೋಮಯವಾಗಿದೆ.

ತಾಲೂಕಿನ ಜಡೆ, ಕಲ್ಕೊಪ್ಪ, ಗುಡವಿ, ಬಳ್ಳಿ ಬಯಲು, ಹುಲೆಮರಡಿ, ಕಂತನಹಳ್ಳಿ, ಜಡೆ ಯಡಗೊಪ್ಪ, ಪುರದೂರು, ಮನ್ಮನೆ,
ಹಿರೇಕಸವಿ, ಚಿಕ್ಕಕಸವಿ ಸೇರಿದಂತೆ ಇನ್ನೂ ಅನೇಕ ಹಳ್ಳಿಗಳಲ್ಲಿ ಬುಟ್ಟಿ ಹೆಣೆಯುವುದನ್ನೇ ಮೂಲ ವೃತ್ತಿ ಮಾಡಿಕೊಂಡು ಬಂದಿರುವ ಕುಟುಂಬಗಳು ಇವೆ. ಆಧುನಿಕ ತಂತ್ರಜ್ಞಾನದ ಪರಿಕರಗಳ ಉತ್ಪಾದನೆ ನಡುವೆ ಪೈಪೋಟಿ ನಡೆಸಲಾಗದ ಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಈ ವೃತ್ತಿ ಅಳಿವಿನ ಅಂಚಿಗೆ ಬಂದು ನಿಂತಿದೆ. ಪರ್ಯಾಯ ವೃತ್ತಿ ಕಡೆ ಒಲವು ತೋರಲು
ಬಯಸುವಂತಾಗಿದೆ.

ಪರಂಪರೆಯಿಂದ ಮಾಡಿಕೊಂಡು ಬಂದಿರುವ ಈ ವೃತ್ತಿಯ ಕಡೆ ಯುವಕರು ಆಸಕ್ತಿ ತೋರುತ್ತಿಲ್ಲ. ಇದರಿಂದಾಗುವ ದಿನದ ಸಂಪಾದನೆ ಅತ್ಯಂತ ಕಡಿಮೆ. ಆದ್ದರಿಂದ ಇತರೆ ಕೆಲಸದ ಕಡೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಇನ್ನೊಂದು ಕಡೆ ಇದರಿಂದ ಬರುವ ಆದಾಯದಲ್ಲಿ ಮಕ್ಕಳಿಗೆ ಶಿಕ್ಷಣ ಒದಗಿಸಲು, ಕುಟುಂಬ ನಿರ್ವಹಣೆ ಮಾಡಲು ಅತ್ಯಂತ ಕಷ್ಟವಾಗಿದೆ. ಸರ್ಕಾರ ಇಂತಹ ಕುಲಕಸುಬು ಮಾಡುವ ಕುಟುಂಬಗಳಿಗೆ ಆರ್ಥಿಕ ಸೌಲಭ್ಯ ಕಲ್ಪಿಸಲು ಮುಂದಾಗಬೇಕು.

ಬುಟ್ಟಿ ಹೆಣೆಯುವ ಕಾಯಕದಲ್ಲಿ ತೊಡಗಿರುವ ಕುಟುಂಬಗಳಿಗೆ ಅರ್ಥಿಕ ನೆರವು ನೀಡುವ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಪ್ರಗತಿಗೊಳಿಸಲು ಸರ್ಕಾರ ವಿವಿಧ ಜನಪರವಾದ ಯೋಜನೆಗಳನ್ನು ಜಾರಿಗೊಳಿಸಲು ಮುಂದಾಗಬೇಕು.
*ಮಂಜುನಾಥ್‌ ಸಿ.ಎಚ್‌.
ಗುಡವಿ ಗ್ರಾಪಂ ಉಪಾದ್ಯಕ್ಷ

ಪರಂಪರಾಗತವಾಗಿ ಮುಂದುವರಿಸಿಕೊಂಡು ಬಂದಿರುವ ಈ ವೃತ್ತಿಯನ್ನು ಬಿಟ್ಟು ಬೇರೆ ಯಾವ ವೃತ್ತಿ ಮಾಡಲು ಸಾಧ್ಯವಿಲ್ಲ. ಸರ್ಕಾರ ನಮ್ಮ ಜೀವನೋಪಾಯಕ್ಕೆ ವಿವಿಧ ಸಾಲ ಸೌಲಭ್ಯ ಕಲ್ಪಿಸಿದಾಗ ಮಾತ್ರ ಇತರ ಸಮುದಾಯದ ಹಾಗೆ ಪ್ರಗತಿ ಕಾಣಲು ಸಾಧ್ಯ.
*ಬಸವರಾಜಪ್ಪ
ಬುಟ್ಟಿ ಹೆಣೆಯುವ ಕೆಲಸಗಾರ

*ರವಿ ಕಲ್ಲಂಬಿ

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.