ಮುರುಘಾಮಠಕ್ಕೆ ಸಚಿವ ಬಿ.ಸಿ. ಪಾಟೀಲ್ ಭೇಟಿ
Team Udayavani, May 6, 2020, 6:15 PM IST
ಸೊರಬ: ಮುರುಘಾ ಮಠದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಜಡೆ ಸಂಸ್ಥಾನ ಮಠ ಹಾಗೂ ಸೊರಬ ಮುರುಘಾ ಮಠದ ಡಾ| ಮಹಾಂತ ಸ್ವಾಮೀಜಿ ಅವರನ್ನು ಸನ್ಮಾನಿಸಿದರು.
ಸೊರಬ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಡಾ| ಮಹಾಂತ ಸ್ವಾಮೀಜಿಯ ಆಹ್ವಾನದ ಮೇರೆಗೆ, ಕೃಷಿ ಖಾತೆಗೆ ಸಂಬಂಧಪಟ್ಟ ಕಾರವಾರ ಜಿಲ್ಲಾ ಪ್ರವಾಸದ ಮಾರ್ಗ ಮಧ್ಯೆ ಸೊರಬದ ಮುರುಘಾಮಠಕ್ಕೆ ಭೇಟಿ ನೀಡಿದರು.
ಡಾ| ಮಹಾಂತ ಸ್ವಾಮೀಜಿ ಅವರು ಮಠದ ವತಿಯಿಂದ ಸಚಿವರನ್ನು ಸನ್ಮಾನಿಸಿ ಮಾತ ನಾಡಿ, ಮೂಲತಃ ಸೊರಬ ತಾಲೂಕಿನವರೇ ಆದ ಬಿ.ಸಿ. ಪಾಟೀಲ್ ಅವರು ಕೃಷಿ ಸಚಿವರಾಗಿದ್ದು ಸಂತೋಷವಾಗಿದೆ. ಅವರು ಕೃಷಿ ಕ್ಷೇತ್ರಕ್ಕೆ ವಿಶೇಷ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ನೀಡಲಿ ಎಂದು ಹಾರೈಸಿದರು. ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಜಡೆ ಸಂಸ್ಥಾನ ಮಠ ಹಾಗೂ ಸೊರಬ ಮುರುಘಾ ಮಠದ ಡಾ| ಮಹಾಂತ ಸ್ವಾಮೀಜಿ ಅವರನ್ನು ಸನ್ಮಾನಿಸಿದರು.
ಅಖೀಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ವತಿಯಿಂದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಸನ್ಮಾನಿಸಲಾಯಿತು. ಬಸವರಾಜ್ ಬಾರಂಗಿ, ಇಂದೂಧರ್ ಒಡೆಯರ್, ಎಂ. ನಾಗಪ್ಪ, ಚಂದ್ರಶೇಖರ್, ಲಿಂಗರಾಜು, ನಾಗರಾಜ್ ಗುತ್ತಿ, ನಟರಾಜ್, ಲಕ್ಷ್ಮೀಕಾಂತ್, ರೇಣುಕಮ್ಮ ಗೌಳಿ, ಸಂಧ್ಯಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು