ಸೊರಬ: ಸಂಭ್ರಮದ ಸೀಗೆ ಹುಣ್ಣಿಮೆ ಆಚರಣೆ


Team Udayavani, Oct 20, 2021, 7:31 PM IST

soraba news

ಸೊರಬ: ಭೂಮಿ ತಾಯಿಗೆ ಪೂಜೆ ಸಲ್ಲಿಸಿ, ಸಂಪ್ರದಾಯದಂತೆ ಭೂತಾಯಿಗೆ ಉಡಿ ತುಂಬುವ ಸೀಗೆಹುಣ್ಣಿಮೆಯನ್ನು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ರೈತರು ಸಂಭ್ರಮದಿಂದ ಆಚರಿಸಿದರು.

ಎತ್ತಿನ ಗಾಡಿ, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳನ್ನು ಶೃಂಗರಿಸಿ ಹೊಲಕ್ಕೆ ತೆರಳಿ ಅಲ್ಲಿ ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ನಂತರ ಭೂ ತಾಯಿಗೆ ಉಡಿ ತುಂಬಿ ನೈವೇದ್ಯ ಅರ್ಪಿಸಿದರು. ಮುಂಜಾನೆ ಗದ್ದೆ ಹೊಲಗಳಿಗೆ ತೆರಳಿ ಚರಗ ಚೆಲ್ಲಿದರು.

ಭೂಮಿಯನ್ನು ಹೆಣ್ಣಿನಂತೆ ಗೌರವಿಸಿ, ಗರ್ಭಿಣಿಗೆ ಸೀಮಂತಶಾಸ್ತ್ರ ಮಾಡುವಂತೆ, ತೆನೆಯೊಡೆಯುವ ಬೆಳೆಗೆ ಕೃಷಿ ಕುಟುಂಬಗಳು ಪೂಜೆ ಸಲ್ಲಿಸಿ ಎಡೆ ಅರ್ಪಿಸುವ ಸಂಪ್ರದಾಯ ಮಲೆನಾಡ ಭಾಗದಲ್ಲಿದೆ. ಮುಂಜಾನೆಯೇ ಅಲಂಕೃತ ಭೂಮಣ್ಣಿ ಬುಟ್ಟಿಯಲ್ಲಿ ಚರಗವನ್ನು ತುಂಬಿಕೊಂಡು ರೈತರು ’ಹಚ್ಚಂಬ್ಲಿ ಹರಬಿಸೊಪ್ಪು ಹಿತ್ತಲಾಗಿರೋ ದಾರಿರೆಕಾಯಿ ಭೂಂಕವ್ವನ ಬಯ್ಕೆಬಾನ ಎದ್ದೆದ್ ಉಣ್ಣೆ ಭೂಂಕವ್ವೋ.. ಹೋಯ್ ಹೋಯ್’ ಎಂದು ಕೂಗುತ್ತಾ ಹೊಲಕ್ಕೆಲ್ಲಾ ಚೆಲ್ಲಿದರು.

ಮಧ್ಯಾಹ್ನ 12 ಗಂಟೆ ನಂತರ ತಮ್ಮ ಕುಟುಂಬದವರೆಲ್ಲರೂ ತಮ್ಮ ಬೆಳೆಗೆ ಸೀರೆ-ಕುಬಸ, ತಾಳಿ, ಮೂಗುತಿ ತೊಡಿಸಿ ವಿಶೇಷ ಪೂಜೆ ಸಲ್ಲಿಸಿ ಅಲ್ಲಿಯೇ ಊಟ ಮಾಡಿದರು. ಬೆಳೆಗೆ, ಗೂಳಿ(ಕಾಗೆ)ಗೆ, ಇಲಿಗಳಿಗೆ ಒಂದೊಂದು ಎಡೆ ನೀಡಿದರು. ಒಂದು ಕೊಟ್ಟೆ ಕಡುಬನ್ನು ಜಮೀನಿನಲ್ಲಿ ಹೂತು, ಆ ಜಮೀನಿನ ಬೆಳೆಯನ್ನು ಒಕ್ಕಲು ಮಾಡುವ ಸಂದರ್ಭದಲ್ಲಿ ಕಿತ್ತು ತಿನ್ನುವ ಸಂಪ್ರದಾಯ ಮಲೆನಾಡಿನವರದ್ದಾಗಿದೆ.

ಸೀಗೆಹುಣ್ಣಿಮೆಗೆ ವಿಶೇಷವಾಗಿ ಹೋಳಿಗೆ, ಕೊಟ್ಟೆಕಡುಬು, ಸಿಹಿ ಕಡುಬು, ಸಾಂಬಾರು ಬುತ್ತಿ, ಕಜ್ಜಾಯ, ಹುಳಿ ಚಿತ್ರನ್ನ, ಮೊಸರಿನ ಬುತ್ತಿ, ಕರ್ಚಿಕಾಯಿ, ರೊಟ್ಟಿ, ಕಟಕಲು ರೊಟ್ಟಿ, ಪುಂಡಿ ಪಲ್ಯೆ, ಎಣಗಾಯಿ ಪಲ್ಯೆ, ಕಿಚಡಿ, ಅಕ್ಕಿಹುಗ್ಗಿ, ಚೆಟ್ನಿ, ಕರಿಂಡಿ, ಇತ್ಯಾದಿ ಭಕ್ಷ್ಯಗಳನ್ನು ತಯಾರಿಸಿ ಮನೆಯ ಮಂದಿಯ ಜೊತೆಗೆ ಸುತ್ತಮುತ್ತಲಿನ ಜನರನ್ನು ಕರೆದುಕೊಂಡು ಹೊಲಗಳಿಗೆ ತೆರಳಿ ಭೋಜನ ಮಾಡಿದರು.

ಹೊಲ, ಗದ್ದೆ, ತೋಟಗಳಲ್ಲಿ ಫಸಲು ಉತ್ತಮವಾಗಿ ಬರಲಿ, ನಾಡಿನಲ್ಲಿ ಸಮೃದ್ಧಿ ನೆಲೆಸಲಿ ಎಂದು ರೈತರು ಭೂ ತಾಯಿಯನ್ನು ಪ್ರಾರ್ಥಿಸಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.