ರಾಜಕೀಯ ದ್ವೇಷ ಕೊಲೆಯಲ್ಲಿ ಅಂತ್ಯ : ಪ್ರಕರಣದ ಹಾದಿ ತಪ್ಪಿಸಲು ಮಾಡಿದ ತಂತ್ರವೇ ಮುಳುವಾಯಿತು


Team Udayavani, May 2, 2022, 11:50 PM IST

ರಾಜಕೀಯ ದ್ವೇಷ ಕೊಲೆಯಲ್ಲಿ ಅಂತ್ಯ : ಪ್ರಕರಣದ ಹಾದಿ ತಪ್ಪಿಸಲು ಮಾಡಿದ ತಂತ್ರವೇ ಮುಳುವಾಯಿತು

ಸೊರಬ: ಮದುವೆಯಾಗಲು ಕನ್ಯೆಯ ಫೋಟೋ ತೋರಿಸುವುದಾಗಿ ಮನೆಗೆ ಕರೆಸಿ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ತಾಲೂಕಿನ ಮನ್ಮನೆ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಸೊರಬ ಪೊಲೀಸರು ಯಶಸ್ವಿಯಾಗಿದ್ದಾರೆ.

ಗ್ರಾಮದ ಲೇಖಪ್ಪ (36) ಎಂಬ ಕೊಲೆಯಾದ ವ್ಯಕ್ತಿ ಮತ್ತು ಆರೋಪಿ ಕೃಷ್ಣಪ್ಪ ನಡುವೆ ಮೊದಲಿನಿಂದಲೂ ರಾಜಕೀಯವಾಗಿ ಮತ್ತು ಮಹಿಳೆಯೊಬ್ಬರ ಸ್ನೇಹದ ಸಂಬಂಧ ದ್ವೇಷವಿತ್ತು. ಈ ಹಿನ್ನೆಲೆಯಲ್ಲಿ ಲೇಖಪ್ಪನಿಗೆ ಮದುವೆಯಾಗಲು ಕನ್ಯೆಯ ಫೋಟೋ ತೋರಿಸುವುದಾಗಿ ಮನೆಗೆ ಕರೆಸಿ ಲೇಖಪ್ಪನನ್ನು ಕೊಲೆ ಮಾಡಿ, ಮೃತ ದೇಹವನ್ನು ಕಡಸೂರು ಸಮೀಪದ ವರದಾ ಸೇತುವೆಯಿಂದ ಎಸೆದಿರುವುದು ತನಿಖೆಯಿಂದ ಪತ್ತೆಯಾಗಿದೆ.

ನಿಗೂಢವಾಗಿದ್ದ ಪ್ರಕರಣ: ಮನೆಯಿಂದ ಜಮೀನು ಕೆಲಸಕ್ಕೆ ಹೋದ ಲೇಖಪ್ಪ ಏ. 11ರಂದು ನಾಪತ್ತೆಯಾಗಿರುವ ಕುರಿತು ಏ. 14ರಂದು ಲೇಖಪ್ಪನ ಸಹೋದರ ಹುಚ್ಚಪ್ಪ ದೂರು ದಾಖಲಿಸಿದ್ದರು. ಪೊಲೀಸರು ಆರಂಭದಲ್ಲಿ ಇದೊಂದು ಸಹಜ ಪ್ರಕರಣವೆಂದೇ ಭಾವಿಸಿದ್ದರು. ಆದರೆ, ಎಡಿಟೆಡ್ ಫೋಟೋ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಪ್ರಕರಣದ ಹಾದಿ ತಪ್ಪಿಸಲು ಹಾಗೂ ಗ್ರಾಮಸ್ಥರು ಮತ್ತು ಪೊಲೀಸರ ಗಮನವನ್ನು ಬೇರೆಡೆಗೆ ಸೆಳೆಯಲು ಲೇಖಪ್ಪನ ಜೊತೆಗೆ ಯುವತಿಯೊಬ್ಬಳು ವಿವಾಹವಾಗಿರುವಂತೆ ಫೋಟೋವನ್ನು ಕೃಷ್ಣಪ್ಪ ಹರಿಬಿಟ್ಟಿದ್ದನು ಎನ್ನಲಾಗುತ್ತಿದ್ದು, ಫೋಟೋದ ಜಾಡು ಹಿಡಿದು ಹೊರಟ ಪೊಲೀಸರಿಗೆ ಪ್ರಕರಣ ಹೊಸ ತಿರುವು ಪಡೆದಿತ್ತು. ಜೊತೆಗೆ ಮೇ.2ರಂದು ಆರೋಪಿ ಕೃಷ್ಣಪ್ಪನ ಮೇಲೆ ಅನುಮಾನವಿರುವುದಾಗಿ ಪುನಃ ಮತ್ತೊಂದು ದೂರು ಸಹ ದಾಖಲಾಗಿತ್ತು.

ಇದನ್ನೂ ಓದಿ : ಮಹತ್ವದ ಬೆಳವಣಿಗೆ : ಬಿಎಸ್ ವೈ ಭೇಟಿ ಮಾಡಿದ ಸಿಎಂ, ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯತೆ?

ಹತ್ಯೆಗೆ ಕಾರಣವಾಯ್ತಾ ರಾಜಕೀಯ ದ್ವೇಷ: ಮನಮನೆ ಗ್ರಾಮದಲ್ಲಿ ಬಿಜೆಪಿ ಮುಖಂಡನಾಗಿದ್ದ ಲೇಖಪ್ಪ ಗ್ರಾಮದಲ್ಲಿ ಚಿರ ಪರಿಚಿತ. ಅದೇ ಗ್ರಾಮದ ಗ್ರಾಪಂ ಸದಸ್ಯೆ ಪತಿ ಕೃಷ್ಣಪ್ಪನ ನಡುವೆ ರಾಜಕೀಯವಾಗಿ ಪೈಪೋಟಿ ಇತ್ತು ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಇತ್ತೀಚೆಗೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಯೊಂದನ್ನು ಲೇಖಪ್ಪ ಕೈಗೊಂಡಿದ್ದನು. ಈ ಸಂದರ್ಭದಲ್ಲಿ ಲೇಖಪ್ಪ ಮತ್ತು ಕೃಷ್ಣಪ್ಪನ ನಡುವೆ ಮಾತಿನ ಚಕಮಕಿ ನಡೆದು ಗ್ರಾಮಸ್ಥರ ಸಮ್ಮುಖದಲ್ಲಿ ರಾಜಿಪಂಚಾಯ್ತಿ ನಡೆಸಲಾಗಿತ್ತು. ರಾಜಕೀಯವಾಗಿ ಲೇಖಪ್ಪ ಬೆಳೆಯುತ್ತಿರುವುದನ್ನು ಸಹಿಸಲಾಗದೇ ಕೃಷ್ಣಪ್ಪ ಹತ್ಯೆ ಮಾಡಿದ್ದಾನೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಜಿಲ್ಲಾ ರಕ್ಷಣಾಧಿಕಾರಿ ಎಂ.ಬಿ. ಲಕ್ಷ್ಮೀ ಪ್ರಸಾದ್ ಹಾಗೂ ಡಿವೈಎಸ್‍ಪಿ ಶಿವಾನಂದ ಮದರಕಂಡಿ ಮಾರ್ಗದರ್ಶನದಲ್ಲಿ ಸಿಪಿಐ ಎಲ್ ರಾಜಶೇಖರ್ ನೇತೃತ್ವದಲ್ಲಿ ಪಿಎಸ್‍ಐ ದೇವರಾಯ ನೇತೃತ್ವದ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದೆ. ತಂಡದಲ್ಲಿ ಹೆಡ್ ಕಾನ್ಸ್‍ಟೇಬಲ್‍ಗಳಾದ ಬಿ.ನಾಗೇಶ್, ನೀಲೇಂದ್ರ ನಾಯ್ಕ್, ಸಿಬ್ಬಂದಿ ಸಲ್ಮಾನ್ ಖಾನ್ ಹಾಜಿ, ನಾಗರಾಜ್, ಮೆಹಬೂಬ್, ಸಂದೀಪ್, ಉಷಾ, ಮೋಹನ್ ಕುಮಾರ್, ಶಶಿಧರ, ಕುಮಾರ್, ಶಿವಾಜಿರಾವ್, ಸುಚಿತ್ರಾ, ಶಶಿಕಲಾ, ಗೋಪಾಲ್ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.