ಕೆಎಫ್ಡಿ; ಎಚ್ಚರ ಅಗತ್ಯ
Team Udayavani, Apr 27, 2020, 4:25 PM IST
ಸೊರಬ: ಪಟ್ಟಣ ಅರಣ್ಯ ಇಲಾಖೆ ಸಭಾಂಗಣದಲ್ಲಿ ರಾಜ್ಯ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶಿಸರ ನೇತೃತ್ವದಲ್ಲಿ ಅಧಿಕಾರಿಗಳ ಮಟ್ಟದ ಸಮಾಲೋಚನಾ ಸಭೆ ನಡೆಯಿತು
ಸೊರಬ: ಕೋವಿಡ್ ಸೋಂಕಿನ ಹಸಿರು ಪಟ್ಟಿಯಲ್ಲಿರುವ ಶಿವಮೊಗ್ಗಕ್ಕೆ ಮಂಗನ ಕಾಯಿಲೆ ಸೋಂಕು ಗಂಭೀರವಾಗಿದ್ದು ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಜೀವವೈವಿಧ್ಯ ಮಂಡಳಿಯ ರಾಜ್ಯಾಧ್ಯಕ್ಷ ಅನಂತ ಹೆಗಡೆ ಅಶಿಸರ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಅರಣ್ಯ ಇಲಾಖೆ ಭವನದಲ್ಲಿ ವಿವಿಧ ಇಲಾಖೆ ಅಧಿಕಾರಿ, ಪರಿಸರ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ಉತ್ತಮ ಮಳೆಯಾಗುವ ತನಕವೂ ಮಂಗನ ಕಾಯಿಲೆಯ ವೈರಾಣು ಜೀವಂತವಾಗಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದರು.
ತಾಲೂಕಿನಲ್ಲಿ ಮಂಗಗಳ ಸಾವಿನ ಕುರಿತು ಬಂದಿರುವ ವೈದ್ಯಕೀಯ ವರದಿಯ ಅಂಕಿ-ಅಂಶ ಒದಗಿಸಿದ ತಾಲೂಕು ವೈದ್ಯಾಧಿಕಾರಿ ಡಾ| ಅಕ್ಷತಾ, ಇಲ್ಲಿಯವರೆಗೆ 18 ಮಂಗಗಳು ಸಾವನ್ನಪ್ಪಿದ್ದು, ಒಂದು ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಬೇರೆ ಬೇರೆ ಕಾರಣಗಳಿಂದ ಅವು ಸಾವನ್ನಪ್ಪಿವೆ. ಚಂದ್ರಗುತ್ತಿ ಭಾಗದಲ್ಲಿ ಓರ್ವ ವ್ಯಕ್ತಿಗೆ ಸೋಂಕು ತಗುಲಿದ್ದು, ಗುಣಮುಖರಾಗಿದ್ದಾರೆ. ಕಾಯಿಲೆ ವ್ಯಾಪಿಸದಂತೆ ಲಸಿಕೆ ನೀಡಲಾಗಿದ್ದು, ಈಚೆಗೆ ತುಸು ಶಂಕೆ ಕಾಣಿಸಿರುವ ಹರೀಶಿ ಭಾಗದಲ್ಲಿ ಪುನಃ ಲಸಿಕೆ ಕಾರ್ಯಕ್ರಮ ನಡೆಸಲಾಗುತ್ತದೆ ಎಂದರು.
ತಹಶೀಲ್ದಾರ್ ಪಟ್ಟರಾಜ ಗೌಡ, ವಲಯ ಸಂರಕ್ಷಣಾಧಿ ಕಾರಿ ಮಂಜುನಾಥ್, ವಲಯಾರಣ್ಯಾ ಧಿಕಾರಿ ಗಣೇಶ್ ಶೆಟ್ಟರ್, ಜಾವೀದ್ ಅಂಗಡಿ, ಸತ್ಯನಾರಾಯಣ, ಶ್ರೀಪಾದ ಬಿಚ್ಚುಗತ್ತಿ, ಈರೇಶ ಗೌಡ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!