ಭತ್ತಕ್ಕೆ ವೈಜ್ಞಾನಿಕ ಬೆಲೆ ನೀಡಿ
Team Udayavani, May 16, 2020, 3:25 PM IST
ಸಾಂದರ್ಭಿಕ ಚಿತ್ರ
ಸೊರಬ: ಅನಾನಸ್, ಜೋಳ ಹಾಗೂ ಭತ್ತಕ್ಕೆ ವೈಜ್ಞಾನಿಕ ಬೆಲೆ ನೀಡಿ ಸರ್ಕಾರ ಖರೀದಿ ಮಾಡಬೇಕು ಎಂದು ಒತ್ತಾಯಿಸಿ ತಾಲೂಕು ರೈತ ಸಂಘದ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ತಾಲೂಕಿನಲ್ಲಿ 80 ಸಾವಿರ ಟನ್ ಗಿಂತ ಹೆಚ್ಚು ಅನಾನಸ್ ಬೆಳೆ ಹಾಳಾಗಿದ್ದಲ್ಲದೆ ಈಗ ವ್ಯಾಪಾರಸ್ಥರು ಒಂದು ಕೆಜಿ ಅನಾನಸ್ಗೆ 2ರಿಂದ 3 ರೂಪಾಯಿಗೆ ಕೇಳುತ್ತಿದ್ದಾರೆ. ಒಂದು ಸಸಿ ಅನಾನಸ್ಗೆ ರೈತ 15 ರೂಪಾಯಿ ಖರ್ಚು ಮಾಡಿದ್ದಾನೆ. ನೂರಾರು ಎಕರೆ ಜಮೀನಿನಲ್ಲಿ ಬಂಡವಾಳ ಹಾಕಿ ಬೆಳದ ಬೆಳೆಗೆ ಬೆಲೆ ಸಿಗುತ್ತಿಲ್ಲ ಬೆಳೆ ನಷ್ಟವಾಗಿದೆ ಇದರಿಂದ ರೈತನ ಬದುಕು ಬೀದಿಗೆ ಬರುವಂತಾಗಿದೆ. ಕೂಡಲೇ ಸರ್ಕಾರ ಅಧಿಕಾರಿಗಳ ಮೂಲಕ ಅನಾನಸ್ ಖರೀದಿಗೆ ಅವಕಾಶ ನೀಡಬೇಕು. ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕು. ಅಲ್ಲದೆ ಜೋಳ ಹಾಗೂ ಭತ್ತದ ಬೆಲೆ ಕೂಡ ಕುಸಿದಿದ್ದು, ಸರ್ಕಾರ ಭತ್ತಕೆ 3000, ಜೋಳಕ್ಕೆ 2500 ಬೆಲೆ ನಿಗದಿ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ತಾಲೂಕ ರೈತ ಸಂಘದ ಅಧ್ಯಕ್ಷ ಈಶ್ವರಪ್ಪ ಕೊಡಕಣಿ, ಕಾರ್ಯದರ್ಶಿ ಬಲಿಂದ್ರಪ್ಪ, ರೈತ ಮುಖಂಡ ಉಮೇಶ್ ಪಾಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ