ವಾರದಲ್ಲಿ 3 ದಿನ ತರಕಾರಿ ಮಾರುಕಟ್ಟೆ: ತಹಶೀಲ್ದಾರ್
Team Udayavani, Apr 8, 2020, 4:11 PM IST
ಸೊರಬ: ಕಡಸೂರು ಗ್ರಾಮದ ಹೊಲದಲ್ಲಿ ಕೊಳೆಯುತ್ತಿರುವ ಅನಾನಸ್ ಬೆಳೆಯನ್ನು ಜಿಲ್ಲಾಧಿಕಾರಿ ಕೆ.ಎಂ.ಶಿವಕುಮಾರ್ ಪರಿಶೀಲಿಸಿದರು.
ಸೊರಬ: ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗೂ ಗುಂಪುಗೂಡುವುದನ್ನು ತಡೆಗಟ್ಟಲು ತಾಲೂಕಿನಾದ್ಯಂತ ವಾರದಲ್ಲಿ ಮೂರು ದಿನ ಮಾತ್ರ ತರಕಾರಿ ಮಾರುಕಟ್ಟೆ ತೆರೆಯಲಾಗುವುದು ಎಂದು ತಹಶೀಲ್ದಾರ್ ಪಟ್ಟರಾಜಗೌಡ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ನಿತ್ಯ ತರಕಾರಿ ವಹಿವಾಟಿಗೆ ಅವಕಾಶ ಕಲ್ಪಿಸಿರುವುದರಿಂದ ಸಾಕಷ್ಟು ಜನ ಅನಾವಶ್ಯಕವಾಗಿ ಆಗಮಿಸುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಕೇಳಿಬಂದಿದ್ದವು. ಈ ನಿಟ್ಟಿನಲ್ಲಿ ಮಂಗಳವಾರ, ಗುರುವಾರ ಮತ್ತು ಶನಿವಾರ ಮಾತ್ರ ತರಕಾರಿ ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು. ಪಪಂ ವ್ಯಾಪ್ತಿಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವಾಗ ಸಮನ್ವಯ ಸಮಿತಿಯ ಗಮನಕ್ಕೆ ತರಬೇಕೆಂದು ಪಪಂ ಮುಖ್ಯಾಧಿಕಾರಿ ಜಗದೀಶ್ ನಾಯ್ಕ ಅವರಿಗೆ ಸೂಚಿಸಿದರು.
ಈ ಹಿಂದಿನಂತೆ ವಾರದಲ್ಲಿ ಮೂರು ದಿನ ಬೆಳಗ್ಗೆ 10 ರಿಂದ 12ರ ವರೆಗೆ ಅಗತ್ಯ ವಸ್ತುಗಳನ್ನು ಕೊಳ್ಳಬಹುದು ಎಂದು ಹೇಳಿದರು. ಸಭೆಯಲ್ಲಿ ಸಿಪಿಐ ಆರ್.ಡಿ. ಮರುಳ ಸಿದ್ದಪ್ಪ, ತಾಪಂ ಇಒ ನಂದಿನಿ, ಡಾ| ಅಕ್ಷತಾ ಖಾನಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ