ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ
ಅಯೋಧ್ಯೆ ರಾಮ ಮಂದಿರದ ನಿಧಿ ಸಮರ್ಪಣಾ ಅಭಿಯಾನಕ್ಕೆ ಶಾಸಕ ಎಸ್. ಕುಮಾರ್ ಬಂಗಾರಪ್ಪ ಚಾಲನೆ ನೀಡಿದರು.
Team Udayavani, Jan 24, 2021, 6:45 PM IST
ಸೊರಬ: ಭಾರತೀಯರು ಕಂಡ ಕನಸು ನನಸಾಗುವ ಸಂದರ್ಭ ಬಂದಿದ್ದು, ಅಯೋಧ್ಯೆಯಲ್ಲಿ ಶ್ರೀ ರಾಮನ ಭವ್ಯ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಪ್ರತಿಯೊಬ್ಬರೂ ಸಮರ್ಪಣಾ ಮನೋಭಾವದಿಂದ ನಿಧಿ ಸಮರ್ಪಣಾ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಕರೆ ನೀಡಿದರು.
ಪಟ್ಟಣದ ಚಿಕ್ಕಪೇಟೆಯಲ್ಲಿ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಕ್ಷೇತ್ರ ಟ್ರಸ್ಟ್ ವತಿಯಿಂದ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರದ ನಿಧಿ ಸಮರ್ಪಣಾ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸಾವಿರಾರು ವರ್ಷಗಳ ಇತಿಹಾಸವಿರುವ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅಡಿಗಲ್ಲು ಹಾಕಿದ್ದಾರೆ. ಮಂದಿರ ನಿರ್ಮಾಣ ಕಾರ್ಯವೂ ಸಹ ಯಶಸ್ವಿಯಾಗಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ನಿಧಿ ಸಮರ್ಪಣಾ ಅಭಿಯಾನ ಕೈಗೊಳ್ಳಲಾಗಿದ್ದು, ಜಾತಿ, ಮತಗಳ ಬೇಧವಿಲ್ಲದೇ ಎಲ್ಲರೂ ಕೈಜೋಡಿಸಬೇಕು ಎಂದರು.
ಆರ್ಎಸ್ಎಸ್ ಸ್ವಯಂಸೇವಕ ಸುಧಾಕರ ಭಾವೆ ಮಾತನಾಡಿ, ಅಯೋಧ್ಯೆಯಲ್ಲಿ ಹಲವು ವರ್ಷಗಳ ಹೋರಾಟದ ಫಲವಾಗಿ ಮಂದಿರ ನಿರ್ಮಾಣವಾಗುತ್ತಿದೆ. ಇಂತಹ ಪವಿತ್ರ ಕಾರ್ಯದಲ್ಲಿ ಪ್ರತಿಯೊಬ್ಬರೂ ತೊಡಗಿಕೊಳ್ಳಬೇಕು. 10 ರೂ.ನಿಂದ ಎಷ್ಟು ಬೇಕಾದರೂ ದೇಣಿಗೆ ನೀಡಬಹುದು ಎಂದರು.
ಶಾಸಕ ಎಸ್. ಕುಮಾರ್ ಬಂಗಾರಪ್ಪ ಅವರು ನಿಧಿ ಸಮರ್ಪಣಾ ಅಭಿಯಾನ ಅಂಗವಾಗಿ ಬಂದಗಿ ಬಸವರಾಜ ಶೇಟ್, ಗಿರೀಶ್ ಶೇಟ್ ಸೇರಿದಂತೆ ಅನೇಕ ಮನೆಗಳಿಗೆ ಭೇಟಿ ನೀಡಿ ದೇಣಿಗೆ ಸಂಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ