![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಶಿಕ್ಷಕಿ ಜಯಂತಿಗೆ ರಾಜ್ಯಮಟ್ಟದ ಪ್ರಶಸ್ತಿ
Team Udayavani, Sep 11, 2020, 7:58 PM IST
![ಶಿಕ್ಷಕಿ ಜಯಂತಿಗೆ ರಾಜ್ಯಮಟ್ಟದ ಪ್ರಶಸ್ತಿ](https://www.udayavani.com/wp-content/uploads/2020/09/sm-tdy-1-8-620x372.jpg)
ತೀರ್ಥಹಳ್ಳಿ: ತಾಲೂಕಿನ ನಾಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೆ.ಎನ್. ಜಯಂತಿ ಅವರು2020 ರ ಸಾಲಿನ ರಾಜ್ಯ ಸರ್ಕಾರ ನೀಡುವ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಜಯಂತಿ ಅವರು ಅತ್ಯಂತ ಕ್ರಿಯಾಶೀಲ ಶಿಕ್ಷಕಿಯಾಗಿದ್ದು ನಾಲೂರು ಶಾಲೆಯ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಕರ್ತವ್ಯ ನಿರ್ವಹಿಸುತ್ತ ಶಾಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದಾರೆ. ಅವರು ಶಾಲೆಗೆ ಶಾಲಾ ಕಾಂಪೌಂಡ್ ನಿರ್ಮಿಸುವಲ್ಲಿ, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ, ಕ್ರೀಡಾಂಗಣ ವ್ಯವಸ್ಥೆ, ಸುಸಜ್ಜಿತವಾದ ರಂಗಮಂದಿರ ನಿರ್ಮಾಣ, ಅಚ್ಚುಕಟ್ಟಾದ ಕೊಠಡಿ ನಿರ್ಮಾಣ, ಸುಸಜ್ಜಿತವಾದ ಧ್ವಜ ಸ್ತಂಭ, ಕಾಂಪೌಂಡ್ ಹಾಗೂ ಶಾಲೆಯ ಗೋಡೆಗಳ ಮೇಲೆ ಅಚ್ಚುಕಟ್ಟಾಗಿ ಗೋಡೆಬರಹ, ಅಚ್ಚುಕಟ್ಟಾದ ಮುಖ್ಯ ಶಿಕ್ಷಕರ ಕೊಠಡಿ, ವ್ಯವಸ್ಥಿತವಾದ ನಲಿ-ಕಲಿ ಕೊಠಡಿ, ತಮ್ಮ ಶಾಲಾ ಮಕ್ಕಳನ್ನು ಸರಿಗಮಪ ಜೀ ಟಿವಿ ಕಾರ್ಯಕ್ರಮಕ್ಕೆ ಕೊಂಡೊಯ್ದಿರುವುದು,ಶಿಕ್ಷಣ ಇಲಾಖೆಯ ಅನೇಕ ಕಾರ್ಯಕ್ರಮಗಳನ್ನು ತಮ್ಮ ಶಾಲೆಯಲ್ಲಿ ಹಮ್ಮಿಕೊಂಡಿರುವುದು ಮತ್ತು ಯಶಸ್ವಿಯಾಗಿ ನಿರ್ವಹಣೆ ಮಾಡಿರುವುದು, ಅನೇಕ ದಾನಿಗಳಿಂದ ಸುಮಾರು ಇಪ್ಪತ್ತು ಲಕ್ಷದಷ್ಟು ಹೆಚ್ಚು ಮೊತ್ತದ ಹಣವನ್ನು ದಾನವಾಗಿ ಪಡೆದು ಶಾಲೆಗೆ ಬೇಕಾದಂತಹ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ವಿನಿಯೋಗಿಸಿ ಅಭಿವೃದ್ಧಿ ಪಡಿಸಿ ಅನೇಕ ಸಾಧನೆಯನ್ನು ಮಾಡುತ್ತಾ ಶಾಲೆಯ ಕ್ರಿಯಾಶೀಲ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿರುವುದರಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಜ್ಯ ಮಟ್ಟದ ಪ್ರಶಸ್ತಿ ಬರಲು ಸಂಪೂರ್ಣ ಕಾರಣೀಕರ್ತರಾದ ಸಹೋದ್ಯೋಗಿಗಳು ಮತ್ತು ಶಾಲಾ ಅಭಿವೃದ್ಧಿ ಸಮಿತಿಯವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಹಾಗೆಯೇ ನಮ್ಮಂತೆ ಸಾಕಷ್ಟು ಶಿಕ್ಷಕರುತಮ್ಮ-ತಮ್ಮ ಶಾಲೆಯ ಅಭಿವೃದ್ಧಿನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ.ಶಾಲೆ ಮತ್ತು ಊರಿಗೂ ಕೀರ್ತಿ ತಂದಿದ್ದಾರೆ. ಶಿಕ್ಷಕರ ಪ್ರತಿಭೆಯನ್ನುಗುರುತಿಸಿ ಆ ಶಿಕ್ಷಕರನ್ನು ನನ್ನಂತೆಯೇ ಸರ್ಕಾರ ಗೌರವಿಸಬೇಕು ಎಂದು ಶಿಕ್ಷಕಿ ಜಯಂತಿ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sasdas](https://www.udayavani.com/wp-content/uploads/2024/07/1-sasdas-150x80.jpg)
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
![1-sffdsfsd](https://www.udayavani.com/wp-content/uploads/2024/07/1-sffdsfsd-150x89.jpg)
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
![rain](https://www.udayavani.com/wp-content/uploads/2024/07/rain-25-150x103.jpg)
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
![1-tir-a](https://www.udayavani.com/wp-content/uploads/2024/07/1-tir-a-150x90.jpg)
NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!
![ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು](https://www.udayavani.com/wp-content/uploads/2024/07/koli-150x83.jpg)
Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.