ಬೀದಿ ನಾಯಿಗಳ ದಾಳಿ: 4 ವರ್ಷದ ಮಗು ಬಲಿ !
Team Udayavani, Dec 1, 2022, 8:04 AM IST
ಭದ್ರಾವತಿ : ಭದ್ರಾವತಿ ತಾಲೂಕು ದೊಣಬಘಟ್ಟ (ದಡಮಘಟ್ಟ) ಗ್ರಾಮದಲ್ಲಿ ನಾಯಿಗಳ ಹಿಂಡು ದಾಳಿಗೆ 4 ವರ್ಷದ ಮಗು ಸೈಯದ್ ಮದನಿ ಸಾವನ್ನಪ್ಪಿದ ಹೃದಯ ವಿಧ್ರಾವಕ ಘಟನೆ ಬುಧವಾರ ಸಂಜೆ ನಡೆದಿದೆ.
ಸಂಜೆ ಸುಮಾರು 4 ಗಂಟೆ ಸಮಯದಲ್ಲಿ ಮಗುವಿನ ತಂದೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ತಂದೆಯನ್ನು ಮಗು ಹಿಂಬಾಲಿಸಿಕೊಂಡು ಹೋಗುವಾಗ ಸುಮಾರು 7-8 ಬೀದಿ ನಾಯಿಗಳ ಹಿಂಡು ಮಗು ಮೇಲೆ ದಾಳಿ ಮಾಡಿದೆ.
ಇದರಿಂದಾಗಿ ಮಗು ತೀವ್ರ ಅಸ್ವಸ್ಥತೆಯಿಂದ ಬಳತ್ತಿರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಮಗುವಿನ ತಂದೆ ಸ್ವಲ್ಪ ದೂರಲ್ಲೇ ಯಂತ್ರದಲ್ಲಿ ಭತ್ತ ಕಟಾವು ಮಾಡಿಸುತ್ತಿದ್ದರು. ಯಂತ್ರದ ಶಬ್ದಕ್ಕೆ ಬೀದಿ ನಾಯಿಗಳ ದಾಳಿ ಆಗಿತ್ತಿರುವು ತಿಳಿಯದಾಗಿದೆ. ಈ ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು