ಕಠಿಣ ಶ್ರಮದಿಂದ ಯಶಸ್ಸು


Team Udayavani, Jun 10, 2018, 5:34 PM IST

shiv-1.jpg

ಶಿವಮೊಗ್ಗ: ಯಾವುದೇ ಕ್ಷೇತ್ರವಿರಲಿ, ಯಶಸ್ಸು ಸುಲಭವಾಗಿ ದಕ್ಕುವುದಿಲ್ಲ. ಕಠಿಣ ಶ್ರಮದ ಜೊತೆ ಜೊತೆಯಲ್ಲಿ ಬದ್ದತೆ ಹಾಗೂ ಅರ್ಪಣಾ ಮನೋಭಾವ ಇದ್ದಾಗ ಮಾತ್ರ ಯಶಸ್ಸು ಸಹಜವಾಗಿ ದೊರೆಯುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ ಬೆಳ್ಳಿ ಮಂಡಲ, ಸಿನಿಮೊಗೆ- ಶಿವಮೊಗ್ಗ ಚಿತ್ರ ಸಮಾಜದಿಂದ ಆಯೋಜಿಸಿದ್ದ ರಾಘು ಶಿವಮೊಗ್ಗ ಅವರ ನಿರ್ದೇಶನದ “ಚೂರಿಕಟ್ಟೆ’ ಚಿತ್ರ ಪ್ರದರ್ಶನ-ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಶೇಷವಾಗಿ ಅತ್ಯಂತ ಪೈಪೋಟಿ ಇರುವ ಚಿತ್ರರಂಗದಲ್ಲಿ ಬದ್ಧತೆ ಇಲ್ಲದಿದ್ದರೆ ಭವಿಷ್ಯ ಇಲ್ಲ ಎಂದ ಅರ್ಥೈಸಿದರು.
ಇಂದು ಪ್ರದರ್ಶಿಸಲ್ಪಡುತ್ತಿರುವ ಚೂರಿಕಟ್ಟೆ ಸಿನಿಮಾ ಒಂದು ಯಶಸ್ವಿ ಪ್ರಯೋಗ.

ಆದರೆ, ಇದನ್ನು ಚಿತ್ರಮಂದಿರಗಳಲ್ಲಿ ನೋಡುವುದರ ಮೂಲಕ ನಿರ್ಮಾಪಕರಿಗೆ ಆಸರೆಯಾಗಬೇಕು. ವಾಸ್ತವದಲ್ಲಿ
ಸಾಗರ ತಾಲೂಕಿನ ಚೂರಿಕಟ್ಟೆ ಗ್ರಾಮ ಋಣಾತ್ಮಕ ಚಿಂತನೆಗೆ ಹೆಸರಾಗಿತ್ತು ಎಂದ ಅವರು, ದಾರಿಹೋಕರಿಗೆ ಚೂರಿ ಹಾಕಿ ಬೆದರಿಸುವುದು, ಕೊಲೆ ಸುಲಿಗೆ ಕೃತ್ಯಗಳೇ ಮೇಲುಗೈ ಸಾಧಿಸಿತ್ತು. ಈ ಕಾರಣಕ್ಕಾಗಿಯೇ ಇದಕ್ಕೆ “ಚೂರಿಕಟ್ಟೆ’ ಎಂಬ ಹೆಸರು ಬಂದಿತ್ತು. ಆದರೆ ಕ್ರಮೇಣ ಇಡೀ ಗ್ರಾಮದ ಚಿತ್ರಣವೇ ಬದಲಾಗಿದ್ದು ಸಂಪೂರ್ಣ ಧನಾತ್ಮಕ
ಚಿಂತನೆಗಳು ಮೈಗೂಡಿವೆ. ಈಗ ಪರಿಸ್ಥಿತಿ ಬದಲಾಗಿದೆ ಎಂದರು. 

ಸದಭಿರುಚಿಯ ಚಿತ್ರಗಳನ್ನು ನೋಡಿ ಬೆಂಬಲಿಸಬೇಕಾದ್ದು ಕನ್ನಡಿಗರ ಕರ್ತವ್ಯ ಎಂದ ಅವರು, ಪ್ರಸ್ತುತ ಚೂರಿಕಟ್ಟೆ
ಸಿನಿಮಾದಲ್ಲಿ ಬಿಂಬಿಸಲಾಗಿರುವ ಧನಾತ್ಮಕ ಚಿಂತನೆಗಳನ್ನು ಬೆಂಬಲಿಸುವುದರ ಮೂಲಕ ನಿರ್ಮಾಪಕರು, ನಿರ್ದೇಶಕರಲ್ಲಿ ಆತ್ಮ ವಿಶ್ವಾಸ ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ ಚಿತ್ರ ಸಮಾಜ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅತ್ಯಂತ ಸಕಾಲಿಕ ಎಂದರು.

ಚಿತ್ರದ ನಿರ್ದೇಶಕ ಶಿವಮೊಗ್ಗ ರಾಘು ಮಾತನಾಡಿ, ಚೂರಿಕಟ್ಟೆ ಋಣಾತ್ಮಕ ಮನಃಸ್ಥಿತಿಯ ಸಂಕೇತವಾದ ಗ್ರಾಮ. ಚಿತ್ರದ ಕಥೆ ಕೂಡ ಸ್ವಲ್ಪ ಇದೇ ಧಾಟಿಯಲ್ಲಿ ಇರುವುದರಿಂದ ಆ ಹೆಸರನ್ನೇ ಇಡಲಾಗಿದೆ. ಆದರೆ, ಚಿತ್ರ ಧನಾತ್ಮಕ ಚಿಂತನೆ‌ಯೊಂದಿಗೆ ಸಂಪನ್ನಗೊಳ್ಳಲಿದೆ ಎಂದರು.

ಶಿವಮೊಗ್ಗ ಬೆಳ್ಳಿ ಮಂಡಲದ ಕಾರ್ಯಾಧ್ಯಕ್ಷ ಡಿ.ಎಸ್‌.ಅರುಣ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಬೆಳ್ಳಿಮಂಡಲದ ಉಪಾಧ್ಯಕ್ಷ ಡಾ| ಕೆ.ಆರ್‌. ಶ್ರೀಧರ್‌ ಇದ್ದರು. ಬೆಳ್ಳಿಮಂಡಲದ ಖಜಾಂಚಿ ಎನ್‌. ಆರ್‌‌. ಪ್ರಕಾಶ್‌ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಜಿ. ವಿಜಯಕುಮಾರ್‌ರಿಂದ ನಿರೂಪಿಸಿದರು. ಜಿಲ್ಲಾ ಸಂಚಾಲಕ ವೈದ್ಯ ವಂದಿಸಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.