ಶಿವಮೊಗ್ಗ: ಬಿಜೆಪಿಯ ಸಮಾವೇಶದಲ್ಲಿ ತಮಿಳು ನಾಡಗೀತೆ ಪ್ರಸಾರ
Team Udayavani, Apr 27, 2023, 1:49 PM IST
ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಸಮಾಜದ ಸಮಾವೇಶದಲ್ಲಿ ತಮಿಳು ನಾಡಗೀತೆ ಹಾಡು ಪ್ರಸಾರವಾಗಿರುವ ಘಟನೆ ನಡೆದಿದೆ.
ವಿಧಾನಸಭಾ ಚುನಾವಣಾ ಕರ್ನಾಟಕ ಸಹ ಉಸ್ತುವಾರಿ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ನಡೆಯುತ್ತಿದ್ದ ಸಮಾವೇಶದಲ್ಲಿ ಈ ಘಟನೆ ನಡೆದಿದೆ.
ಸಮಾವೇಶ ಆರಂಭಕ್ಕೂ ಮುನ್ನ ತಮಿಳು ನಾಡಗೀತೆ ಆಡಿಯೋ ಪ್ಲೇ ಆಗಿದೆ. ಆಯೋಜಕರು ಹಾಡನ್ನು ಪ್ರಸಾರ ಮಾಡುತ್ತಿದ್ದಂತೆ, ಮುಖಂಡರು ಹಾಗೂ ಕಾರ್ಯಕರ್ತರು ಎದ್ದು ನಿಂತು ಗೌರವ ನೀಡಿದ್ದಾರೆ. ಕೂಡಲೇ ಮಾಜಿ ಸಚಿವ ಈಶ್ವರಪ್ಪನವರು ನಾಡಗೀತೆ ಹಾಡಲು ಬರುತ್ತದೆ ಯಾರಿಗಾದರೂ ಬರುತ್ತದ ಎಂದಿದ್ದಾರೆ. ಕೆಲ ಕಾಲ ತಮಿಳು ನಾಡಗೀತೆ ಪ್ಲೇ ಆಗಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಂತಿದೆ.
ಕನ್ನಡ ನಾಡಗೀತೆ ಹಾಕಿಸಿ ಡ್ಯಾಮೇಜ್ ಕಂಟ್ರೋಲ್ ಗೆ ಈಶ್ವರಪ್ಪ ಮುಂದಾಗಿದ್ದಾರೆ. ಸಮಾವೇಶದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ