ಅವ್ಯವಹಾರ ನಡೆಸಿದವರಿಗೆ ಪಾಠ ಕಲಿಸಿ
Team Udayavani, Apr 6, 2018, 1:03 PM IST
ಹೊಸನಗರ: ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣದಲ್ಲಿ ಬಾಳೆ ಹಣ್ಣು ತಿಂದವರು ಚುನಾವಣೆ ಸ್ಪರ್ಧೆಗೆ, ಸಿಪ್ಪೆ ತಿಂದ ಸಿಬ್ಬಂದಿ ಕೆಲಸ ಕಳೆದುಕೊಂಡು ಮನೆ ಸೇರಿದ್ದಾರೆ ಎಂದು ಶಾಸಕ ಕಿಮ್ಮನೆ ರತ್ನಾಕರ ಆರೋಪಿಸಿದರು.
ಸಮೀಪದ ರಾಮಚಂದ್ರಾಪುರ ಗ್ರಾಮದಲ್ಲಿ ಬುಧವಾರ ಕಾರ್ಯಕರ್ತರ ಸಭೆ ಹಾಗೂ ವಿವಿಧ ಪಕ್ಷದಿಂದ ಕಾಂಗ್ರೆಸ್ ಸೇರ್ಪಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಸುಮಾರು ರೂ.60 ಕೋಟಿ ಡಿಸಿಸಿ ಬ್ಯಾಂಕ್ ಅವ್ಯವಹಾರ ಪ್ರಕರಣದ ತನಿಖೆ ಆರಂಭ ಆಗಿದೆ ಅಷ್ಟೆ. ಇನ್ನು ಮುಂದಿದೆ ದೊಡ್ಡಾಟ ಕಾದಿದೆ ಎಂದು ಭವಿಷ್ಯ ನುಡಿದರು.
ಮತ ನೀಡಿದ ಮಹಿಳಾ ಸಂಘಗಳಿಗೆ ಡಿಸಿಸಿ ಬ್ಯಾಂಕ್ ವತಿಯಿಂದ ಸಾಲ ನೀಡುವುದಾಗಿ ಹುಸಿ ಭರವಸೆಯನ್ನು ಸುಳ್ಳುಗಾರರು ಬರುತ್ತಾರೆ. ಅವರಿಗೆ ತಕ್ಕ ಪಾಠ ಕಲಿಸಿ ಎಂದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗದ ಜನರ ಅಭಿವೃದ್ಧಿಗಾಗಿ ಹಲವು ಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಕಳೆದ 10 ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಪ್ರತಿ ಜಿಪಂ ಕ್ಷೇತ್ರಕ್ಕೆ ತಲಾ ರೂ.100 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಒಳ್ಳೆಯ ನಟನಾ ಸಾಮರ್ಥ್ಯ ಇದೆ. ಲೋಕಸಭಾ ಚುನಾವಣೆಗೆ ಮೊದಲು ನೀಡಿದ ಭರವಸೆಗಳು ಹುಸಿಯಾಗಿವೆ. ಕೋಮು ಸೌಹಾರ್ದ ಕಲಕಿ ಅದರಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರವೃತ್ತಿಯ ಬಿಜೆಪಿಯವರ ಬಗ್ಗೆ ಕಾರ್ಯಕರ್ತರು ಎಚ್ಚರದಿಂದ ಇರಲು ಕರೆ ನೀಡಿದರು.
ಸೇರ್ಪಡೆ: ರಾಮಚಂದ್ರಾಪುರ ಗ್ರಾಮದ ಬಿಜೆಪಿ ಪ್ರಮುಖರಾದ ಗುರುಕಿರಣ್, ರಾಯಲ್, ಧರೇನಾ, ಶಶಿಕಲಾ, ಶೋಭಾ, ಮುಸ್ತಫಾ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಮಂದಿ ಕಿಮ್ಮನೆ ಸುಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಜಿಪಂ ಸದಸ್ಯ ಕಲಗೋಡು ರತ್ನಾಕರ, ತಾಪಂ ಸದಸ್ಯ ಚಂದ್ರಮೌಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬಾ ರಾಘವೇಂದ್ರ, ಪ್ರಮುಖರಾದ ಜಯ ಜಿ. ರಾವ್, ಮೈಥಿಲಿ,
ಚಂದ್ರಕಲಾ, ಆದಿಲ್, ಚಂದ್ರಮೂತಿರ, ಧರ್ಮಪ್ಪ, ಜಯನಗರ ಗುರು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!