ಕುಟುಂಬ ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿ: ಹಾಲಪ್ಪ


Team Udayavani, Nov 8, 2017, 5:31 PM IST

08-30.jpg

ಸೊರಬ: ರಾಜಕೀಯ ಷಡ್ಯಂತ್ರದಿಂದ ತಮ್ಮ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ತಾವು ಮಾಡದಿರುವ ತಪ್ಪಿಗೆ ನ್ಯಾಯಾಲಯವು ಪ್ರಕರಣವನ್ನು ದೋಷಮುಕ್ತಗೊಳಿಸಲಿ ಎಂದು ದೇವರಿಗೆ ಹರಕೆ ಮಾಡಿಕೊಂಡಿದ್ದರ ಹಿನ್ನೆಲೆಯಲ್ಲಿ ಚಂದ್ರಗುತ್ತಿ ರೇಣಕಾಂಬಾ ದೇವಿಗೆ ಮಂಗಳವಾರ ಮಾಜಿ ಸಚಿವ ಎಚ್‌. ಹಾಲಪ್ಪ ಅವರು ವಿಶೇಷ ಪೂಜೆ ನೆರವೇರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ರಾಜಕೀಯ ಕುತಂತ್ರಿಗಳ ಕೈವಾಡದಿಂದ ತಾವು ಮಾಡದಿರುವ ತಪ್ಪಿಗೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಅಧಿಕಾರ ಕಳೆದುಕೊಳ್ಳುವಂತಾಯಿತು. ಯಾವುದೇ ತಪ್ಪು ಮಾಡದಿರುವುದರಿಂದ ನ್ಯಾಯಾಲಯದಲ್ಲಿ ತಮ್ಮ ಪರವಾಗಿ ನ್ಯಾಯ ಸಿಗಲಿ ಎಂದು ರೇಣುಕಾಂಬಾ ದೇವಿಗೆ ಹರಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಿದ್ದೇನೆ. ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲು ಕುಮ್ಮಕ್ಕು ನೀಡಿದವರಿಗೆ ನಾನು ಹಾಕಿದ ಪ್ರಶ್ನೆಗಳಿಗೆ 
ಉತ್ತರಿಸಲು ಇದುವರೆಗೂ ಸಾಧ್ಯವಾಗದೆ ಅವರ ತಪ್ಪನ್ನು ಒಪ್ಪಿಕೊಂಡಂತಾಗಿದೆ. ಇದರಿಂದ ತಾಲೂಕಿನ ಜನತೆಗೆ ಹಾಲಪ್ಪ ಅವರ ಮೇಲಿನ ಅಭಿಮಾನ ಹಾಗೂ ನಂಬಿಕೆ ದ್ವಿಗುಣವಾಗಿದೆ ಎಂದರು.

ತಾಲೂಕಿನಲ್ಲಿ ತಳಮಟ್ಟದಿಂದ ಪಕ್ಷ ಕಟ್ಟಿದ ತಮಗೆ ಪಕ್ಷವು ಟಿಕೆಟ್‌ ಕೊಡುವ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ರಾಜಕೀಯ ಭವಿಷ್ಯ ಇನ್ನಷ್ಟು ಭದ್ರವಾಗಿ ಜನಸಾಮಾನ್ಯರ ಕೆಲಸ ನಿರ್ವಹಿಸಲು ಅಧಿಕಾರ ಸಿಗುವುದನ್ನು ಎದುರು ನೋಡುತ್ತಿರುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ 50 ವರ್ಷದ ಕುಟುಂಬ ರಾಜಕಾರಣದಲ್ಲಿ ಎಲ್ಲಾ ಅಧಿಕಾರಗಳನ್ನು ಅನುಭವಿಸಿದವರು ತಾಲೂಕಿಗೆ ಶಾಶ್ವತ ನೀರಾವರಿ ಕಲ್ಪಿಸಲಿಲ್ಲ. ತಾಲೂಕಿನ ಜನರು ಕುಟುಂಬ ರಾಜಕಾರಣದಿಂದ ಬೇಸತ್ತು ಎಚ್ಚರವಾಗಿದ್ದಾರೆ. ಅಂಥವರನ್ನು ದಾರಿತಪ್ಪಿಸಿ ಮತ ಪಡೆಯುವ ಗಿಮಿಕ್‌ನಿಂದ ಚುನಾವಣೆ ಸಮಿಪಿಸುತ್ತಿದ್ದಂತೆ ಪಾದಯಾತ್ರೆ ಹಮ್ಮಿಕೊಂಡಿರುವುದಕ್ಕೆ
ನಾಚಿಕೆಯಾಗುವುದಿಲ್ಲವೇ? ತಾಲೂಕನ್ನು ಅಭಿವೃದ್ಧಿಗೊಳಿಸುವ ಯಾವುದೇ ಚಿಂತನೆಗಳಿಲ್ಲದೆ, ಅಧಿಕಾರ ಹಿಡಿಯುವ ಆಸೆಯಿಂದ ಜನರ ಬಳಿ ಗಿಮಿಕ್‌ ರಾಜಕಾರಣ ಮಾಡುವವರಿಗೆ ಜನತೆ ತಕ್ಕ ಪಾಠ ಕಲಿಸಬೇಕು ಎಂದರು.

ಬರಗಾಲದ ಮಧ್ಯೆ ಜನರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ನೀಡದೆ ಅಡ್ಡಾ-ದುಡ್ಡಿಗೆ ಬೆಳೆಗಳನ್ನು ಖರೀದಿ ಮಾಡುವುದು ಖಂಡನೀಯ. ಈ ಸಮಸ್ಯೆ ತಿಳಿದಿದ್ದರೂ ಎಚ್ಚೆತ್ತುಕೊಂಡು ರೈತರ ನೆರವಿಗೆ ಬರದೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ  ಕಾರಿ ಹಾಗೂ ತಹಶೀಲ್ದಾರರು ಮಲಗಿದ್ದಾರೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಾಲಪ್ಪ ಅವರ ಪತ್ನಿ ಯಶೋಧಾ ಹಾಲಪ್ಪ, ಪ್ರಮುಖರಾದ ಪಾಣಿ ರಾಜಪ್ಪ, ವಿನಯ್‌, ಬೆನವಪ್ಪ ಮರೂರು, ಚಂದ್ರಪ್ಪ ಅಂಗಡಿ, ಪರಮೇಶ್ವರ, ಪರಶುರಾಮ್‌, ವಿಶ್ವ ಹೆಚ್ಚೆ, ರಾಜಶೇಖರ್‌ ಗೌಡ, ಶಿವಪ್ಪ, ಚಂದ್ರಪ್ಪ ಉಳವಿ, ಸತೀಶ್‌ ಗೌಡ, ವಿನಾಯಕ್‌, ಶ್ರೀನಿವಾಸ್‌ ಭಟ್‌, ಕೇಶವಪ್ಪ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.