ತೀರ್ಥಹಳ್ಳಿ ಪೊಲೀಸ್ ಪೇದೆಯ ಹತ್ಯೆ ಪ್ರಕರಣ: ಓರ್ವ ಆರೋಪಿಯ ಬಂಧನ
Team Udayavani, Mar 28, 2023, 5:47 PM IST
ತೀರ್ಥಹಳ್ಳಿ : ತರಕಾರಿ ಮಾರ್ಕೆಟ್ನಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಾರ್ಚ್ 25 ರಂದು ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್ ಬಳಿಯಲ್ಲಿ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್ ಎಂಬಾತನನ್ನ ಹತ್ಯೆ ಮಾಡಲಾಗಿತ್ತು.
ಭಾರೀ ಗಾತ್ರದ ಕಲ್ಲನ್ನು ತಲೆ ಮೇಲೆ ಎತ್ತಿಹಾಕಿ ಪೂರ್ಣೇಶ್ನನ್ನ ಕೊಲೆ ಮಾಡಲಾಗಿತ್ತು. ವಿಪರೀತ ಮದ್ಯವ್ಯಸನಿಯಾಗಿದ್ದ ಪೂರ್ಣೇಶ್, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ. ಆನಂತರವೂ ಆತ ಬದಲಾಗಿರಲಿಲ್ಲ. ಘಟನೆ ನಡೆದ ದಿನ ಪೊಲೀಸರು ಸಹ ಮದ್ಯದ ವಿಚಾರವಾಗಿಯೇ ಆತನ ಕೊಲೆಯಾಗಿರಬಹುದು ಎಂದು ಶಂಕಿಸಿದ್ದು.
ಇದೀಗ ಘಟನೆಯ ಸಂಬಂಧ ಪ್ರಕಾಶ್ ಎಂಬ ಆರೋಪಿಯನ್ನ ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಘಟನೆಯು ನಡೆದ ದಿನ ಪ್ರಕಾಶ್ ಹಾಗೂ ಪೂರ್ಣೇಶ್ ನಡುವೆ ಕುಡಿತದ ವಿಚಾರಕ್ಕೆ ಗಲಾಟೆ ನೆಡೆದಿದೆ. ಇದೇ ಕಾರಣಕ್ಕಾಗಿ ಪ್ರಕಾಶ್ ಪೂರ್ಣೇಶ್ನ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಆರೋಪಿಯನ್ನು ಪೊಲೀಸರು ಇನ್ನಷ್ಟು ತನಿಖೆಗೆ ಒಳಪಡಿಸಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಉತ್ತರ ಜಪಾನ್ ನಲ್ಲಿ ಭೂಕಂಪನ: ರಿಕ್ಟರ್ ಮಾಪನದಲ್ಲಿ 6.1 ತೀವ್ರತೆ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ