ಕಾಡಿನಲ್ಲಿ ಸುಟ್ಟ ಕಾರು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತ್ನಿ,ಮಕ್ಕಳು ಸೇರಿ ಐವರ ಬಂಧನ


Team Udayavani, Oct 1, 2021, 1:54 PM IST

ಕಾಡಿನಲ್ಲಿ ಸುಟ್ಟ ಕಾರು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತ್ನಿ,ಮಕ್ಕಳು ಸೇರಿ ಐವರ ಬಂಧನ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕಾರು ಮತ್ತು ಅಸ್ಥಿ ಪಂಜರ ಪ್ರಕರಣ ಈಗ ರೋಚಕ ತಿರುವು ಪಡೆದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಕೊಲೆಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಮೃತನನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ನಿವಾಸಿ ವಿನೋದ್ (45 ವ) ಎಂದು ಗುರುತಿಸಲಾಗಿದೆ. ವಿನೋದ್ ಅವರನ್ನು ಕೊಲೆಗೈದು ಕಾರಿನಲ್ಲಿ ಕಾಡಿಗೆ ತಂದು ಕಾರಿಗೆ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಹೆಂಡತಿ, ಮಕ್ಕಳು, ತಮ್ಮನೇ ಕೊಲೆಗಾರರು: ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆಯಾಗಿರುವ ಸಂಬಂಧ ಜೇಡಿಕುಣಿ ಗ್ರಾಮ ಪಂಚಾಯಿತಿ ಸದಸ್ಯರು ದೂರು ನೀಡಿದ್ದರು. ತನಿಖೆ ನಡೆಸಿದ ತೀರ್ಥಹಳ್ಳಿ ಪೊಲೀಸರಿಗೆ ಮೃತ ವಿನೋದ್ ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಹೆಂಡತಿಯ ಅಕ್ಕನ ಮಗ ಮತ್ತು ಮೃತನ ತಮ್ಮನ ಕೈವಾಡ ಇರುವುದು ತಿಳಿದು ಬಂದಿದೆ.

ಏನು ಕಾರಣ: ಕೌಟುಂಬಿಕ ಕಲಹದ ಹಿನ್ನೆಲೆ ವಿನೋದ್ ಹತ್ಯೆಯಾಗಿದೆ ಎಂದು ತಿಳಿದು ಬಂದಿದೆ. ಇದೇ ಆಧಾರದಲ್ಲಿ ತನಿಖೆ ನಡೆಸಿದಾಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸೆ. 25ರಂದು ಐವರು ಆರೋಪಿಗಳು ವಿನೋದ್ ಕೊಲೆಗೆ ಸಂಚು ರೂಪಿಸಿದ್ದಾರೆ. ಸೆ. 26ರಂದು ಬೆಳಗ್ಗೆ ಆನಂದಪುರದ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಖರೀದಿಸಿಟ್ಟುಕೊಂಡಿದ್ದರು.  ಸೆ.26ರಂದು ರಾತ್ರಿ 8.30ರ ಹೊತ್ತಿಗೆ ಮನೆಯಲ್ಲೇ ತಂತಿ ಬಿಗಿಯುವ ರಾಡ್, ಸುತ್ತಿಗೆ, ಕಬ್ಬಿಣದ ರಾಡ್ ನಿಂದ ಹೊಡೆದು ವಿನೋದ್ ಅವರ ಕೊಲೆ ಮಾಡಲಾಗಿದೆ.  ವಿನೋದ್ ಬಳಸುತ್ತಿದ್ದ ಕಾರಿನಲ್ಲೇ ಅವರ ಮೃತದೇಹವನ್ನು ಸಾಗಿಸಲಾಗಿದೆ. ತನಿಖೆ ವೇಳೆ ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು, ಆರೋಪಿಗಳು ತಮ್ಮ ಮೊಬೈಲನ್ನು ಸ್ವಿಚ್ ಆಫ್ ಮಾಡಿದ್ದರು. ಮನೆಯಲ್ಲೇ ಮೊಬೈಲ್ ಗಳನ್ನು ಇಟ್ಟು ಹೋಗಿದ್ದರು.

ಇದನ್ನೂ ಓದಿ:ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ|ಬಾಯ್‍ಫ್ರೆಂಡ್ ವಿವೇಕ್ ವಿರುದ್ಧ ದೂರು ದಾಖಲು

ಕಾರಿನಲ್ಲಿ ಯಡೇಹಳ್ಳಿ, ರಿಪ್ಪನ್ ಪೇಟೆ, ಹುಂಚದಕಟ್ಟೆ, ಶಂಕ್ರಳ್ಳಿ, ಮಲ್ಲೇಸರ ಮಾರ್ಗವಾಗಿ ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಗ್ರಾಮದ ಹುಣಸೆಕೊಪ್ಪ ಅರಣ್ಯ ಪ್ರದೇಶಕ್ಕೆ ಮೃತದೇಹ ತಂದಿದ್ದಾರೆ. ಚಾಲಕನ ಸೀಟಿನಲ್ಲಿ ಮೃತದೇವನ್ನು ಇರಿಸಿದ್ದಾರೆ. ಮೊದಲೆ ಖರೀದಿಸಿಟ್ಟಿದ್ದ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ.  ಕಾರಿನ ನಂಬರ್ ಪ್ಲೇಟ್ ಮತ್ತು ವಿನೋದ್ ಬಳಸುತ್ತಿದ್ದ ಮೊಬೈಲ್ ಫೋನನ್ನು ದಾರಿ ಮಧ್ಯೆ ಎಸೆದು ಆರೋಪಿಗಳು ಮನೆಗೆ ಮರಳಿದ್ದರು.

ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು ಕೊಲೆ ಮಾಡಿದ್ದ ಜಾಗವನ್ನು ಫಿನಾಯಲ್ ಬಳಸಿ ಸ್ವಚ್ಛಗೊಳಿಸಿದ್ದರು. ಅಷ್ಟೇ ಅಲ್ಲದೆ, ಕೃತ್ಯದ ವೇಳೆ ಆರೋಪಿಗಳು ಬಳಸಿದ್ದ ಬಟ್ಟೆ, ಚಪ್ಪಲಿಗಳನ್ನು ಮನೆಯ ಹಿಂಭಾಗದಲ್ಲಿ ಸುಟ್ಟು ಹಾಕಿದ್ದರು.

ತನಿಖೆ ವೇಳೆ ಮನೆಯವರ ಮೇಲೆಯೇ ಅನುಮಾನಗೊಂಡ ಪೊಲೀಸರು, ವಿಚಾರಣೆ ತೀವ್ರಗೊಳಿಸಿದ್ದರು. ಈ ವೇಳೆ ವಿನೋದ್ ಕೊಲೆಯ ಸಂಪೂರ್ಣ ಮಾಹಿತಿ ಬಹಿರಂಗಗೊಂಡಿದೆ. ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

Sagara ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.