ಶಿವಮೊಗ್ಗದಲ್ಲಿ ಭೀಕರ ಬಸ್ ಅವಘಡ; ಇಬ್ಬರ ಮೃತ್ಯು ,70ಕ್ಕೂ ಅಧಿಕ ಮಂದಿಗೆ ಗಾಯ
70ಕ್ಕೂ ಹೆಚ್ಚು ಮಂದಿಗೆ ಗಾಯ...
Team Udayavani, May 11, 2023, 7:58 PM IST
ಶಿವಮೊಗ್ಗ: ತಾಲೂಕಿನ ಚರಂಡಿ ಗ್ರಾಮದ ಕುಮದ್ವತಿ ಸೇತುವೆ ಬಳಿ ಗುರುವಾರ ಸಂಜೆ ಎರಡು ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದು,70ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಮುಖಾಮುಖಿ ಢಿಕ್ಕಿ ಸಂಭವಿಸಿದಾಗ ಎರಡು ಬಸ್ ಗಳ ಅರ್ಧ ಭಾಗ ಸಂಪೂರ್ಣ ಜಖಂ ಆಗಿದ್ದು, 70ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು,ಗಾಯಾಳುಗಳೆಲ್ಲರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ನಜ್ಜು ಗುಜ್ಜಾಗಿರುವ ಬಸ್ಸುಗಳಿಂದ ಎರಡು ಮೃತದೇಹ ಹೊರ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ ಎಂದು ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.