ಸಂಚಾರ ದಟ್ಟಣೆ ನಿಯಂತ್ರಣಕ್ಕೆ “ಬೊಲಾರ್ಡ್‌’ ವ್ಯವಸ್ಥೆ


Team Udayavani, Aug 21, 2017, 10:11 AM IST

21-STATE-8.jpg

ಶಿವಮೊಗ್ಗ: ಸಂಚಾರ ದಟ್ಟಣೆ ನಿಯಂತ್ರಿಸುವ ಸಲುವಾಗಿ ಅಳವಡಿಸುವ “ಬೊಲಾರ್ಡ್‌’ ವ್ಯವಸ್ಥೆ ಇದೇ ಮೊದಲ ಬಾರಿಗೆ ಮಲೆನಾಡು ನಗರಿ ಶಿವಮೊಗ್ಗಕ್ಕೆ ಬಂದಿದೆ.

ಮುಂದುವರಿದ ದೇಶ ಮತ್ತು ದೇಶದ ಮೆಟ್ರೋ ಸಿಟಿಗಳಲ್ಲಿ ಮಾತ್ರ ಕಾಣುವ ಈ ಬೊಲಾರ್ಡ್‌ ವ್ಯವಸ್ಥೆ ಇದೀಗ ರಾಜ್ಯದಲ್ಲಿಯೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಅಳವಡಿಸಲಾಗುತ್ತಿದ್ದು, ನಗರದ ವಾಣಿಜ್ಯ ವ್ಯವಹಾರಗಳ ಹೃದಯ ಭಾಗ ಎನಿಸಿರುವ ಗಾಂಧಿ ಬಜಾರ್‌ನಲ್ಲಿ “ಬೊಲಾರ್ಡ್‌’ ಬಳಕೆಗೆ ಜಿಲ್ಲಾ ಪೊಲೀಸ್‌ ಇಲಾಖೆ ಮುಂದಾಗಿದೆ. ಆ. 21ರಂದು ಇದರ ಉದ್ಘಾಟನೆ ನೆರವೇರಲಿದೆ. ಈ ಬೊಲಾರ್ಡ್‌ ವ್ಯವಸ್ಥೆ ಅಳವಡಿಸಿದರೆ ದ್ವಿಚಕ್ರ ವಾಹನದ ಹೊರತಾಗಿ ಬೇರಾವುದೇ ವಾಹನ ಸಂಚಾರ ಆ ಸ್ಥಳದಲ್ಲಿ ಸಾಧ್ಯವಿಲ್ಲ. ಪದೇಪದೆ ಸರಿಸಬೇಕಾದ ಬ್ಯಾರಿಕೇಡ್‌ನ‌ ಬದಲಿಗೆ ಶಾಶ್ವತವಾಗಿ
ರಸ್ತೆಯಲ್ಲಿ ಅಳವಡಿಸುವ ವ್ಯವಸ್ಥೆಯೇ ಈ ಬೊಲಾರ್ಡ್‌. ನೆಲದೊಳಗೆ ಅಳವಡಿಸುವ ಬೊಲಾರ್ಡ್‌ ಕಂಬಗಳನ್ನು ಬೇಕೆನಿಸಿದಾಗ ಮೇಲಕ್ಕೆತ್ತಿ ಬೀಗ ಹಾಕಿದರೆ ಬ್ಯಾರಿಕೇಡ್‌ ರೀತಿಯಲ್ಲಿ ಕೆಲಸ ಮಾಡುತ್ತದೆ.

ಇಲ್ಲಿನ ಗಾಂಧಿ ಬಜಾರ್‌ ಪ್ರವೇಶದಲ್ಲೇ 3 ಸೆಟ್‌ ಬೊಲಾರ್ಡ್‌ ಅಳವಡಿಸಲಾಗಿದೆ. ಪೊಲೀಸ್‌ ಇಲಾಖೆಯ ವಿಶೇಷ ಆಸಕ್ತಿಯಿಂದ ಇದು ಅಸ್ತಿತ್ವಕ್ಕೆ ಬಂದಿದೆ. ಗಣೇಶ ಮೂರ್ತಿಯ ವಿಸರ್ಜನಾ ಪೂರ್ವ ಮೆರವಣಿಗೆ ಸೇರಿ ಯಾವುದೇ ವಿಶೇಷ ಹಾಗೂ ಸಾಮಾನ್ಯ ಸಂದರ್ಭದಲ್ಲಿ ಬೊಲಾರ್ಡ್‌ ಬಳಸಲು ನಿರ್ಧರಿಸಲಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ಗಾಂಧಿ ಬಜಾರ್‌ ರಸ್ತೆಯ ಅಭಿವೃದ್ಧಿ ಸೇರಿರುವುದರಿಂದ ಮುಂದಿನ ದಿನಗಳಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಇದರಿಂದ ಸಹಾಯವಾಗಲಿದೆ. ಬೊಲಾರ್ಡ್‌ ಅಳವಡಿಕೆಯಿಂದ ಪೊಲೀಸ್‌ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ನಿಯೋಜನೆ ತಪ್ಪಲಿದೆ.

ಏನಿದು ಬೊಲಾರ್ಡ್‌?: ಬೊಲಾರ್ಡ್‌  ಎಂಬುದು ವಾಹನ ಸಂಚಾರ ನಿಯಂತ್ರಣಕ್ಕೆ ಬಳಸುವ ಸಾಧನವಾಗಿದ್ದು, ವಿಶೇಷವಾದ ಕಬ್ಬಿಣ ಅಥವಾ ಉಕ್ಕಿನಿಂದ ತಯಾರಿಸಲಾಗಿರುತ್ತದೆ. ಪ್ರಸ್ತುತ ಮುಂದುವರಿದ ದೇಶ ಹಾಗೂ ಭಾರತದ ಮೆಟ್ರೋ ನಗರಗಳಲ್ಲಿ ಇದನ್ನು ಬಳಸಲಾಗುತ್ತಿದ್ದು ಉತ್ತಮ ಫಲಿತಾಂಶ ಲಭಿಸಿದೆ. ನಾಲ್ಕರಿಂದ ಐದು ಅಡಿ ಉದ್ದ ಹಾಗೂ ದಪ್ಪವಾದ ಕಬ್ಬಿಣದ ಪಟ್ಟಿಯ (ಬೊಲಾರ್ಡ್‌) ಸೆಟ್‌ನ್ನು ರಸ್ತೆಯಲ್ಲಿ ಶಾಶ್ವತವಾಗಿ
ಹುಗಿಯಲಾಗುತ್ತದೆ. ಅಗತ್ಯಕ್ಕನುಗುಣವಾಗಿ ಬೊಲಾರ್ಡ್‌ನ್ನು ಮೇಲೆತ್ತಿ ಅದಕ್ಕೆ ಬೀಗ ಹಾಕಿದರೆ ಮುಗಿಯಿತು. ಪದೇಪದೆ ಕಬ್ಬಿಣದ ಬ್ಯಾರಿಕೇಡ್‌ ಇಡುವುದು ತಪ್ಪುತ್ತದೆ. ಪ್ರಸ್ತುತ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಅಳವಡಿಸಲಾಗಿರುವ ಬೊಲಾರ್ಡ್‌ ನೆಲಮಟ್ಟದಿಂದ 3 ಅಡಿ ಎತ್ತರದಲ್ಲಿದ್ದು ಪ್ರತಿ ಎರಡು  ಕಂಬದ ನಡುವಿನ ಅಂತರ 3.75 ಅಡಿ ಇದೆ. ಇದರಿಂದಾಗಿ ದ್ವಿಚಕ್ರ ಹೊರತುಪಡಿಸಿ ಆಟೋ ಸೇರಿ ಯಾವುದೇ ವಾಹನ ಗಾಂಧಿ ಬಜಾರ್‌ನ ಮುಖ್ಯ ರಸ್ತೆಯಿಂದ ಪ್ರವೇಶಿಸುವುದು ಸಾಧ್ಯವಾಗದು. ರಾತ್ರಿ ವೇಳೆ ವಾಹನ ಸವಾರರಿಗೆ ಸ್ಪಷ್ಟವಾಗಿ ಗೋಚರಿಸುವಂತೆ ಬೊಲಾರ್ಡ್‌ಗೆ ರೇಡಿಯಂ ಸ್ಟಿಕ್ಕರ್‌ ಅಂಟಿಸಲಾಗಿದೆ.

ಮೆಕ್ಯಾನಿಕಲ್‌ ಎಂಜಿನಿಯರ್‌ ಆಗಿರುವ ಶಿವಮೊಗ್ಗದ ಉದ್ಯಮಿ ವೆಂಕಟೇಶ್‌ ಮತ್ತು ತಂಡದವರು ಇದನ್ನು ಸಿದ್ಧಪಡಿಸಿದ್ದಾರೆ. ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಬೊಲಾರ್ಡ್‌ನ ಬೆಲೆ ಸುಮಾರು 1 ಲಕ್ಷ ರೂ. ತನಕ ಇದೆ. ಆದರೆ ಶಿವಮೊಗ್ಗದ ಉದ್ಯಮಿ ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ
23 ಸಾವಿರ ರೂ.ಗೆ ಉತ್ತಮ ಗುಣಮಟ್ಟದ ಬೊಲಾರ್ಡ್‌ ತಯಾರಿಸಿಕೊಟ್ಟಿದ್ದಾರೆ. 

ಗೋಪಾಲ್‌ ಯಡಗೆರೆ

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.