ದಲಿತ ದಂಪತಿಗಳ ಸನ್ಮಾನಿಸಲು ತೀರ್ಮಾನ


Team Udayavani, Jul 13, 2017, 8:47 AM IST

13-DAN-4.jpg

ಶಿಕಾರಿಪುರ: ತಾವು ಇದುವರೆಗೆ ಹೋಗಿ ಉಪಾಹಾರ ಸ್ವೀಕರಿಸಿದ ದಲಿತರ ಮನೆಯ ದಂಪತಿಗಳನ್ನು ಬೆಂಗಳೂರಿಗೆ ಕರೆಸಿ ಸನ್ಮಾನಿಸಲು ನಿಶ್ಚಯಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಪಟ್ಟಣದ ದಲಿತ ಕೇರಿಯ ಅಂಬೇಡ್ಕರ್‌ ನಗರದ ದಲಿತ ಮಹಾದೇವಪ್ಪ ಬಾವಿ ಅವರ ಮನೆಯಲ್ಲಿ ಬೆಳಗ್ಗಿನ ಉಪಾಹಾರ ಸ್ವೀಕರಿಸದ ಬಳಿಕ ನಡೆದ 133ನೇ ಮತಗಟ್ಟೆಯ ಸಭೆಯಲ್ಲಿ ಅವರು ಮಾತನಾಡಿದರು. ನಾನು ದಲಿತರ ಮನೆಗೆ ಹೋಗಿ ಉಪಾಹಾರ
ಮಾಡುವುದನ್ನು ಕಾಂಗ್ರೆಸ್‌ನವರು ಹಗುರವಾಗಿ ನೋಡುತ್ತಿರುವುದಲ್ಲದೆ ಟೀಕೆ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದಾಗಿನಿಂದಲೂ ದಲಿತರ ಹೆಸರು ಹೇಳಿ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ನವರಿಗೆ ನಮ್ಮನ್ನು ಟೀಕಿಸುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಮ್ಮ ಪಕ್ಷ ವಾಸ್ತವವಾಗಿ ದಲಿತರ ಬಗ್ಗೆ ಕಳಕಳಿ ಹೊಂದಿದ್ದು ಅದು ದಲಿತ ಸಮಾಜಕ್ಕೆ ತಿಳಿದಿದೆ. ಕಾಂಗ್ರೆಸ್‌ನವರು ಡಾ| ಅಂಬೇಡ್ಕರ್‌ ಅವರನ್ನು ನಡೆಸಿಕೊಂಡ ರೀತಿಯನ್ನು ಈಗ ಸ್ಮರಿಸಿಕೊಳ್ಳಬೇಕು. ಡಾ| ಅಂಬೇಡ್ಕರ್‌ ಅವರು ತೀರಿಕೊಂಡಾಗ ದೆಹಲಿಯ ರಾಜ್‌ಘಾಟ್‌ನಲ್ಲಿ ಅವರ ಶವಸಂಸ್ಕಾರಕ್ಕೆ ಅವಕಾಶ ನೀಡದೆ ಕೊನಗೆ ಮುಂಬಯಿಯ ದಾದರ್‌ನಲ್ಲಿ ನೆರವೇರಿಸಲಾಗಿತ್ತು.
ಅಂಬೇಡ್ಕರ್‌ ಅವರು ಚುನಾವಣೆಗೆ ನಿಂತಾಗ ಅವರನ್ನು ಸೋಲಿಸಿದ ಕಾಂಗ್ರೆಸ್‌ಗೆ ಮಾತನಾಡುವ
ಯಾವುದೇ ನೈತಿಕ ಹಕ್ಕಿಲ್ಲ. ಡಾ| ಬಾಬು ಜಗಜೀವನ ರಾಂರನ್ನು ಪ್ರಧಾನಿ ಮಾಡಬೇಕೆಂದು ವಾಜಪೇಯಿಯವರು ಮುಂದೆ ಬಂದಾಗ
ವಿರೋಧಿಸಿದ್ದೇ ಕಾಂಗ್ರೆಸ್‌ನವರು. ಆದರೆ ಪ್ರಧಾನಿ ಮೋದಿ ಅವರು ಡಾ| ಅಂಬೇಡ್ಕರ್‌ ದಿನಾಚರಣೆಯನ್ನು ವರ್ಷಪೂರ್ತಿ ಆಚರಿಸಲು ಆದೇಶ ಮಾಡಿದ್ದಲ್ಲದೆ ಅವರು ಲಂಡನ್‌ನಲ್ಲಿ ಓದುತ್ತಿದ್ದ ಮನೆಯನ್ನು ಖರೀದಿಸಿ ಅಲ್ಲಿ ವ್ಯಾಸಂಗ ಮಾಡುವ ಭಾರತದ ದಲಿತ
ವಿಧ್ಯಾರ್ಥಿಗಳಿಗೆ ಅವಕಾಶ ನೀಡಿದ್ದಾರೆ. ಮುಂಬಯಿನ ದಾದರ್‌ನಲ್ಲಿ ಅವರ ಸ್ಮಾರಕಕ್ಕಾಗಿ ಕೋಟ್ಯಂತರ ರೂಗಳನ್ನು ಬಿಡುಗಡೆಗೊಳಿಸಿದ್ದು ಈಗ ಸ್ಮಾರಕದ ಕೆಲಸ ನಡೆಯುತ್ತಿದೆ ಎಂದರು.

ವಿಸ್ತಾರಕರಾಗಿ ಹೊರಟಿರುವ ಪಕ್ಷದ ಕಾರ್ಯಕರ್ತರು ದಲಿತ ಬಂಧುಗಳ ಮನೆಗೆ ಹೋಗಬೇಕು. ಅವರ ವಿಶ್ವಾಸ ಗಳಿಸಬೇಕು. ದಲಿತರ ಪ್ರತಿ ಮನೆಯೂ ಬಿಜೆಪಿ ಮನೆಯಾಗಬೇಕು. ನಿಮ್ಮ ಮನೆಗೆ ದಲಿತರನ್ನು ಕರೆದು ವಿಶ್ವಾಸದಿಂದ ಸತ್ಕರಿಸಬೇಕು ಎಂದರು.
ನಾನು ಅಧಿಕಾರದಲ್ಲಿದ್ದಾಗ ಎಲ್ಲ ಧರ್ಮೀಯರನ್ನ ಗಮನದಲ್ಲಿ ಇಟ್ಟುಕೊಂಡು ಸಮರ್ಥಕವಾಗಿ ಆಡಳಿತ ನಡೆಸಿ ಎಲ್ಲಾ ವರ್ಗದವರಿಗೂ ಅನುಕೂಲ ಮಾಡಿಕೊಟ್ಟಿದ್ದೆ. ಈಗ ಕೇಂದ್ರ ಸರ್ಕಾರದ ಯೋಜನೆಗಳನ್ನು ಹಾಗೂ ಸಿದ್ದರಾಮಯ್ಯನವರ ಸರ್ಕಾರದ ವೈಫಲ್ಯಗಳನ್ನು ಜನತೆಗೆ ಮನವರಿಕೆಯಾಗುವ ರೀತಿಯಲ್ಲಿ ಮುಟ್ಟಿಸಬೇಕು ಎಂದರು. ಶಾಸಕ ಬಿ.ವೈ. ರಾಘ‌ವೇಂದ್ರ, ತಾಲೂಕು ಬಿಜೆಪಿ ಅಧ್ಯಕ್ಷ ರೇವಣಪ್ಪ, ಕೆ.ಎಸ್‌. ಗುರುಮೂರ್ತಿ, ಪುರಸಭೆ ಅಧ್ಯಕ್ಷೆ ರೂಪಕಲಾ, ನಾಗರಾಜ ಗೌಡ, ನಾಗರಾಜಪ್ಪ ಮತ್ತಿತರರು ಇದ್ದರು. 

ರಾಜ್ಯ ಸರ್ಕಾರ ಸತ್ತಿದೆ: ಯಡಿಯೂರಪ್ಪ ಆನಂದಪುರ: ರಾಜ್ಯ ಸರ್ಕಾರ ಜನರ ಪಾಲಿಗೆ  ಇದ್ದರೂ ಸತ್ತಂದಿದ್ದು ಕಾನೂನು ಸುವ್ಯವಸ್ಥೆ
ಸಂಪೂರ್ಣ ಹದಗೆಟ್ಟಿದೆ. ಎಲ್ಲೆಡೆ ಲೂಟಿ, ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ
ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು. 

ಸಮೀಪದ ಯಡೇಹಳ್ಳಿಯ ದಲಿತರ ಮನೆಗಳಿಗೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಕೇಂದ್ರದಿಂದ ಬಂದ ಅನುದಾನವನ್ನು ಸಮರ್ಥವಾಗಿ ಬಳಸಿಕೊಳ್ಳಲು ರಾಜ್ಯ ಸರ್ಕಾರ ಸಂಪೂರ್ಣ
ವಿಫಲವಾಗಿದೆ. ತನ್ನ ಬೊಕ್ಕಸದಿಂದಲೂ ಬರ ಪರಿಹಾರ ಕಾರ್ಯ ನಿರ್ವಹಿಸುತ್ತಿಲ್ಲ. ಕೇಂದ್ರದಿಂದ ಬಂದ 5600 ಕೋಟಿ ಹಣವನ್ನೂ ಬಳಸಿಕೊಂಡಿಲ್ಲ. ನೀರಾವರಿ ಯೋಜನೆಗಳು ಆಗುತ್ತಿಲ್ಲ. ಪರಿಶಿಷ್ಟ ಜಾತಿ- ವರ್ಗದ ಅಭಿವೃದ್ಧಿಗಾಗಿ ಹಣ ಖರ್ಚು ಮಾಡುತ್ತಿಲ್ಲ. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರವಾಗುತ್ತಿದ್ದು ಈ ಕುರಿತು ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. 16 ಜಿಲ್ಲೆಗಳನ್ನು ಬರ ಪೀಡಿತ ಜಿಲ್ಲೆಯಾಗಿ ಆಯ್ಕೆ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಕಾರ್ಯ ನಡೆದಿದೆ. ಜಿಲ್ಲೆಗಳನ್ನು
ಆಯ್ಕೆ ಮಾಡಿ ಕೇಂದ್ರಕ್ಕೆ ಸಲ್ಲಿಸಲು ರಾಜ್ಯಕ್ಕೆ ಸುತ್ತೋಲೆ ನೀಡಲಾಗಿದೆ ಎಂದರು. 

ದಲಿತರ ಕಾಲೋನಿಗೆ ಭೇಟಿ ನೀಡಿ ಅವರ ಸಂಕಷ್ಟಗಳನ್ನು ಕೇಳಲಾಗುತ್ತಿದ್ದು ಬಹುತೇಕ ಹೆಣ್ಣುಮಕ್ಕಳು ತಮ್ಮ ಗಂಡಂದಿರ ಸಾರಾಯಿ
ಸಹವಾಸದಿಂದ ನೊಂದಿದ್ದು ಸಾರಾಯಿ ನಿಷೇಧಿಸುವ ಅಗತ್ಯ ಇದೆ ಎಂದರು. 

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.