ಮನೆ ಮನೆಗೆ ಹಂಚುತ್ತಿರುವ ಧ್ವಜ ನಿರ್ದಿಷ್ಟ ಅಳತೆ ಹೊಂದಿಲ್ಲ: ಮಧು ಬಂಗಾರಪ್ಪ

ಗುಣಮಟ್ಟದ ಬಟ್ಟೆ ಹೊಂದಿಲ್ಲ; ರಾಷ್ಟ್ರ ಧ್ವಜಕ್ಕೆ ಅವಮಾನ

Team Udayavani, Aug 6, 2022, 3:43 PM IST

madhu-bangara

ಸೊರಬ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆ. 11ರಂದು ಬೆಳಗ್ಗೆ 8ಕ್ಕೆ ಕಾಂಗ್ರೆಸ್ ಪಕ್ಷದಿಂದ ತಾಲೂಕಿನ ಬಿಳವಾಣಿ ಗ್ರಾಮದಿಂದ ಪಟ್ಟಣದ ಬಂಗಾರ ಧಾಮದ ಮುಂಭಾಗದ ವೃತ್ತದ ವರೆಗೆ ರಾಷ್ಟ್ರ ಧ್ವಜದೊಂದಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಟಿ ಸಮಿತಿ ಉಪಾಧ್ಯಕ್ಷ ಎಸ್. ಮಧು ಬಂಗಾರಪ್ಪ ಹೇಳಿದರು.

ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 75 ಕಿ.ಮೀ ಪಾದಯಾತ್ರೆ ನಡೆಸುವ ಉದ್ದೇಶವನ್ನು ಪಕ್ಷ ಹೊಂದಿದ್ದು, ಪಾದಯಾತ್ರೆ ಮೂಲಕ ಗ್ರಾಮಗಳಲ್ಲಿ ಸಂಚರಿಸಿ, ಯುವಕರಿಗೆ ಸ್ವಾತಂತ್ರ್ಯದ ಮಹತ್ವ, ಸ್ವಾತಂತ್ರ್ಯ ಹೋರಾಟಗಾರರ ಅರಿವು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆ ತಿಳಿಸುವ ಕೆಲಸ ಮಾಡಲಾಗುವುದು. ನಂತರ ಬಂಗಾರಧಾಮದ ವೃತ್ತದಲ್ಲಿ ಸಭೆ ನಡೆಯಲಿದೆ. ಕ್ಷೇತ್ರದಲ್ಲಿ ಸುಮಾರು 8ಸಾವಿರ ಬೂತ್ ಸದಸ್ಯರಿದ್ದು, 40 ಸಾವಿರಕ್ಕೂ ಅಧಿಕ ಸದಸ್ಯತ್ವ ನೋಂದಣಿಯಾಗಿದೆ. ಪಾದಯಾತ್ರೆಯಲ್ಲಿ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯು ಪಕ್ಷಾತೀತವಾದ ಕಾರ್ಯಕ್ರಮವಾಗಿದ್ದು, ಯುವ ಜನತೆ ಪಕ್ಷ, ಜಾತಿ, ಧರ್ಮ ಬೇಧ ಮೆರೆತು ನಾವೆಲ್ಲಾ ಭಾರತೀಯರು ಎನ್ನುವ ಮನೋಭಾವದಿಂದ ದೇಶ ಕಟ್ಟುವ ಕೆಲಸದಲ್ಲಿ ಪಾಲ್ಗೊಳ್ಳಬೇಕು ಎಂದರು.

ನಿರ್ದಿಷ್ಟ ಅಳತೆ ಹೊಂದಿಲ್ಲ: ರಾಷ್ಟ್ರ ಧ್ವಜಕ್ಕೆ ಅವಮಾನ

ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ. ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎನ್ನುವವರನ್ನು ಬದಲಾವಣೆ ಮಾಡುವ ಶಕ್ತಿ ಸಾಮಾನ್ಯ ಮತದಾರನಿಗೆ ಇದೆ. ಇದೀಗ ಸರ್ಕಾರ ಮನೆಮನೆಗೆ ಹಂಚುತ್ತಿರುವ ಧ್ವಜ ನಿರ್ದಿಷ್ಟ ಅಳತೆ ಮತ್ತು ಗುಣಮಟ್ಟದ ಬಟ್ಟೆಯನ್ನು ಹೊಂದಿಲ್ಲ. ಇದರಿಂದ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ರಾಜ ಮಹಾರಾಜ ನಡುವೆ ಒಡೆದು ಆಳುವ ನೀತಿಯನ್ನು ಬ್ರಿಟೀಷರು ರೂಪಿಸಿದ್ದರೆ, ಬಿಜೆಪಿಯವರು ಧರ್ಮ, ಜಾತಿ ಹೆಸರಿನಲ್ಲಿ ಸಮಾಜವನ್ನು ಒಡೆದು ಆಳುತ್ತಾ, ಹಿಂದುತ್ವದ ಹೆಸರಲ್ಲಿ ಸಮಾಜವನ್ನ ಹಾಳು ಮಾಡಿದ್ದಾರೆ. ಇಡಿ, ಎನ್‍ಐಎ ಸೇರಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗಳನ್ನು ಹಿಡಿತ ಪಡೆಯುವ ಮೂಲಕ ದೇಶದ ಕಾನೂನನ್ನು ಸ್ವಹಿತಾಸಕ್ತಿಗಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಆರ್ ಎಸ್‍ಎಸ್ ಮತ್ತು ಹಿಂದೂ ಪರ ಸಂಘಟನೆಗಳು ಬೆಳೆಸಿದ ಬಿಜೆಪಿಗರು ಇದೀಗ ಅವರೇ ಮುಳುವಾಗಿದ್ದಾರೆ. ಇನ್ನಾದರೂ ಆರ್ ಎಸ್‍ಎಸ್ ಮತ್ತು ಹಿಂದೂ ಸಂಘಟನೆಗಳು ಎಚ್ಚೆತ್ತುಕೊಳ್ಳಬೇಕು. ಬಿಜೆಪಿಯ ಆಡಳಿತ ವೈಖರಿಯಿಂದ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ದೇಶಕ್ಕೆ ಮಾರಕವಾದ ಕೃಷಿ ಕಾಯ್ದೆ ತಂದು, ರೈತರಿಂದಲೇ ವಿರೋಧ ವ್ಯಕ್ತವಾದಾಗ ಕೇಂದ್ರ ಸರ್ಕಾರ ವಾಪಾಸ್ ಪಡೆಯಿತು. ಬಿಜೆಪಿ ಸರ್ಕಾರಗಳಿಗೆ ಮುಂದಿನ ದಿನಗಳಲ್ಲಿ ಜನತೆಯೇ ಸೂಕ್ತ ಉತ್ತರ ನೀಡುವರು ಎಂದರು.

ಚುನಾವಣೆಗಳ ಸಂದರ್ಭದಲ್ಲಿ ಪ್ರಣಾಳಿಕೆ ಬಹು ಮುಖ್ಯವಾಗಿದ್ದು, ಈಬಾರಿ ವಿಶೇಷವಾಗಿ ಪ್ರನಾಳಿಕೆ ಸಿದ್ಧಪಡಿಸುವ ಉದ್ದೇಶ ಹೊಂದಲಾಗಿದೆ. ರಾಜ್ಯ ಪ್ರಣಾಳಿಕೆ ಜತೆಗೆ ಜಿಲ್ಲಾವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷವಾಗಿದ್ದು, ಪ್ರಣಾಳಿಕೆಯಲ್ಲಿನ ಪ್ರಸ್ತಾಪಿತ ವಿಷಯಗಳನ್ನು ಪೂರ್ಣಗೊಳಿಸುವುದು. ಈ ನಿಟ್ಟಿನಲ್ಲಿ ಸಮಿತಿಯ ಅಧ್ಯಕ್ಷರಾದ ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಸಭೆ ನಡೆಸಿ, ಸಮಸ್ಯೆಗಳನ್ನು ಅರಿಯಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಆನವಟ್ಟಿ ಬ್ಲಾಕ್ ಅಧ್ಯಕ್ಷ ಆರ್.ಸಿ. ಪಾಟೀಲ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಆರ್.ಟಿ. ಮಂಜುನಾಥ್, ಮುಖಂಡರಾದ ಎಚ್. ಗಣಪತಿ, ಎಂ.ಡಿ. ಶೇಖರ್, ಜೆ. ಪ್ರಕಾಶ್, ಕಲ್ಲಪ್ಪ ಚಿತ್ರಟ್ಟೆಹಳ್ಳಿ, ಶಿವಪ್ಪ ಯಡಗೊಪ್ಪ, ಪ್ರಕಾಶ್ ಭಂಡಾರಿ, ಜಿ. ಕೆರಿಯಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.