ಸರ್ಕಾರ ಕೋಮು ವಿಚಾರಕ್ಕೆ ನೀಡಿದಷ್ಟು ಆಸಕ್ತಿ ಕೋವಿಡ್ ಪರಿಹಾರಕ್ಕೆ ನೀಡುತ್ತಿಲ್ಲ: ಕಾಂಗ್ರೆಸ್
Team Udayavani, Mar 25, 2022, 3:36 PM IST
ಸಾಗರ: ಕೋವಿಡ್-19ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ಕೋವಿಡ್ 1, 2 ಮತ್ತು ಮೂರನೇ ಅಲೆ ಸಂದರ್ಭದಲ್ಲಿ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಕೇಂದ್ರ ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ 50 ಸಾವಿರ ರೂ. ರಾಜ್ಯ ಸರ್ಕಾರ 1 ಲಕ್ಷ ರೂ. ಪರಿಹಾರ ಕೊಡಲು ಸಮ್ಮತಿ ಸೂಚಿಸಿತ್ತು. ಆದರೆ ಈತನಕ ಬಹುತೇಕ ಕುಟುಂಬಗಳಿಗೆ ಪರಿಹಾರ ಧನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡಿಲ್ಲ. ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ. ಸರ್ಕಾರ ಘೋಷಣೆ ಮಾಡಿದ ಪರಿಹಾರಧನ ಪೂರ್ಣ ಪ್ರಮಾಣದಲ್ಲಿ ಪಾವತಿ ಮಾಡಿಲ್ಲ. ಸರ್ಕಾರ ಕೂಡಲೇ ಪರಿಹಾರ ಧನ ನೀಡಿ ಸಾಂತ್ವಾನ ಹೇಳಬೇಕು ಎಂದು ಒತ್ತಾಯಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶಬಾಬು ಮಾತನಾಡಿ, ತಾಲೂಕಿನಲ್ಲಿ ಕೋವಿಡ್ನಿಂದ 207 ಜನರು ಮೃತಪಟ್ಟಿದ್ದಾರೆ. ಇಲ್ಲಿವರೆಗೆ ಕೇವಲ 96 ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ. ಉಳಿದ ಕುಟುಂಬಗಳು ಪರಿಹಾರಕ್ಕಾಗಿ ಕಚೇರಿ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಕೋಮು ಭಾವನೆ ಕೆರಳಿಸುವ ವಿಚಾರಕ್ಕೆ ನೀಡಿದಷ್ಟು ಆಸಕ್ತಿಯನ್ನು ಇಂತಹ ವಿಷಯಗಳತ್ತ ತೋರಿಸುತ್ತಿಲ್ಲ. ಕೋವಿಡ್ನಿಂದ ಮರಣ ಹೊಂದಿರುವವರ ವಿವರ ಆಸ್ಪತ್ರೆ ಮೂಲಕ ಸರ್ಕಾರದ ಬಳಿ ಇರುತ್ತದೆ. ಆದರೂ ಸಾಕಷ್ಟು ಅರ್ಜಿಗಳನ್ನು ವಿಲೇ ಮಾಡಿಲ್ಲ. ದಾಖಲೆಗಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬವನ್ನು ಅಲೆದಾಡಿಸುತ್ತಿರುವುದು ಖಂಡನೀಯ ಎಂದರು.
ಇದನ್ನೂ ಓದಿ:ನಾವು ಕುಂಕುಮ ವ್ಯಾಪಾರ ಮಾಡಿ ನೀಡುವ ಹಣದಿಂದ ಅವರು ಹಜ್ ಯಾತ್ರೆಗೆ ಹೋಗುವುದು ಬೇಡ
ಈಗಾಗಲೇ ಕೋವಿಡ್ ನಾಲ್ಕನೇ ಅಲೆ ವಿದೇಶಗಳಲ್ಲಿ ಪ್ರಾರಂಭವಾಗಿ, ಅನೇಕ ದೇಶಗಳಲ್ಲಿ ಲಾಕ್ಡೌನ್ ಹೇರಲಾಗಿದೆ. ಆದರೆ ಕರ್ನಾಟಕದಲ್ಲಿ ಕೋವಿಡ್ ನಾಲ್ಕನೇ ಅಲೆ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಬಗ್ಗೆ ಗಮನ ಹರಿಸಿಲ್ಲ. ತಕ್ಷಣ ಎಸಿಯವರು ಕೋವಿಡ್ ಮುಂಜಾಗೃತಾ ಕ್ರಮ ತೆಗೆದುಕೊಳ್ಳಬೇಕು. ಮುಂದಿನ 15 ದಿನಗಳಲ್ಲಿ ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಯ ಎಲ್ಲ ಕುಟುಂಬಗಳಿಗೆ ಪರಿಹಾರ ನೀಡದೆ ಹೋದಲ್ಲಿ ಕಾಂಗ್ರೇಸ್ ಪಕ್ಷದಿಂದ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಹಾಬಲ ಕೌತಿ, ತಾರಾಮೂರ್ತಿ, ಕೆ.ಸಿದ್ದಪ್ಪ, ಗಣಪತಿ ಮಂಡಗಳಲೆ, ಕಬೀರ್ ಚಿಪ್ಳಿ, ಪಾರ್ವತಿ ಬೇಸೂರು, ವೆಂಕಟೇಶ್, ಗಣಾಧೀಶ್, ಜಯರಾಮ್, ಶ್ರೀನಾಥ್, ರಮೇಶ್ ಚಂದ್ರಗುತ್ತಿ, ಅನ್ವರ್ ಭಾಷಾ, ನಾರಾಯಣ ಅರಮನೆಕೇರಿ, ಕೃಷ್ಣಮೂರ್ತಿ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ