ಶಾಸಕರ ಕಚೇರಿ ತೆರವಿಗೆ ಒತ್ತಾಯ


Team Udayavani, Jan 21, 2019, 11:26 AM IST

shiv-1.jpg

ಸಾಗರ: ಶಾಸಕರ ಹಿಂಬಾಲಕರಿಂದ ಪದೇ ಪದೆ ನಗರಸಭೆಯ ಆಡಳಿತಕ್ಕೆ ಸಮಸ್ಯೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರಸಭೆ ಆವರಣದಲ್ಲಿ ಅವಕಾಶ ಮಾಡಿಕೊಟ್ಟಿರುವ ಶಾಸಕರ ಕಚೇರಿಯನ್ನು ತುರ್ತಾಗಿ ತೆರವುಗೊಳಿಸಬೇಕು ಎಂದು ನಗರಸಭಾಧ್ಯಕ್ಷೆ ವೀಣಾ ಪರಮೇಶ್ವರ್‌ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಾಸಕ ಹಾಲಪ್ಪ ಅವರು ಮಂಗನ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿ ಐಶಾರಾಮಿ ರೆಸಾರ್ಟ್‌ನಲ್ಲಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ನಡೆಸಿದ ಪ್ರತಿಭಟನೆಯ ವಿಷಯದ ಹಿನ್ನೆಲೆಯಲ್ಲಿ ಆರಂಭವಾದ ಮಾತಿನ ಚಕಮಕಿ ನಗರಸಭೆ ಆವರಣದ ಶಾಸಕರ ಕಚೇರಿ ಎದುರಿನಲ್ಲಿ ಕೈ ಕೈ ಮಿಲಾಯಿಸಿ ಹೊಡೆದಾಟದಲ್ಲಿ ಪರ್ಯಾವಸಾನಗೊಂಡ ಘಟನೆ ಶನಿವಾರ ನಗರದಲ್ಲಿ ನಡೆದಿತ್ತು. ಈ ಸಂಬಂಧ ಪರಸ್ಪರರು ನಗರ ಠಾಣೆಯಲ್ಲಿ ದೂರು ಕೂಡ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಈ ಮನವಿ ಸಲ್ಲಿಸಲಾಗಿದೆ.

ತಾಪಂ ಕಟ್ಟಡದಲ್ಲಿ ಶಾಸಕರ ಕಚೇರಿ ಈಗಾಗಲೇ ಇದ್ದರೂ ಆರು ತಿಂಗಳ ಹಿಂದೆ ದುರುದ್ದೇಶಪೂರ್ವಕವಾಗಿಯೇ ನಗರಸಭೆಯಲ್ಲಿ ಮತ್ತೂಂದು ಶಾಸಕರ ಕಚೇರಿ ತೆರೆಯಲಾಗಿದೆ. ವಿವಿಧ ಸಂದರ್ಭಗಳಲ್ಲಿ ಶಾಸಕರ ಹಿಂಬಾಲಕರು ಗೂಂಡಾಗಿರಿ ಪ್ರದರ್ಶಿಸಿ ಇಲ್ಲಿನ ವಾತಾವರಣವನ್ನು ಹಾಳುಗೆಡವುತ್ತಿದ್ದಾರೆ ಎಂದು ದೂರಲಾಗಿದೆ.

ಈ ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಾರ್ವಜನಿಕರ ಕುಂದುಕೊರತೆ ವಿಚಾರಿಸಲು ನಗರಸಭೆಗೆ ಆಗಮಿಸಿದ್ದ ಸಂದರ್ಭದಲ್ಲೂ ಅವರ ಮೇಲೆ ಗೂಂಡಾಗಿರಿ ನಡೆದಿತ್ತು. ಉಪ್ಪಾರಕೇರಿ ಬೋರ್ಡ್‌ ವಿಚಾರದಲ್ಲಿ ನಿಯಮಾನುಸಾರ ಬೋರ್ಡ್‌ ಹಾಕುವಲ್ಲಿ ನಡೆದ ವಿವಾದದಲ್ಲಿ ತಮ್ಮನ್ನು ಹಾಗೂ ಇತರ ಮಹಿಳಾ ಸದಸ್ಯೆಯರನ್ನು ಕಾರಿನಿಂದ ಎಳೆಯುವ ಅವಮಾನಕರ ಘಟನೆ ನಡೆದಿತ್ತು. ಪುರಪಿತೃಗಳಿಗೆ ಅವಮಾನವಾಗುವ ಘಟನೆ ಪದೇ ಪದೆ ನಡೆಯುತ್ತಿದೆ ಎಂದು ದೂಷಿಸಲಾಗಿದೆ.

ಈ ರೀತಿಯ ಘಟನೆಗಳಿಂದ ನಗರಸಭೆಯ ಆಡಳಿತ ಚಟುವಟಿಕೆಗಳಿಗೆ ತೀವ್ರವಾದ ತೊಂದರೆಯಾಗುತ್ತಿದ್ದು, ಆಡಳಿತ ಸುವ್ಯವಸ್ಥೆ ದೃಷ್ಟಿಯಿಂದ ತುರ್ತಾಗಿ ಶಾಸಕರ ಕಚೇರಿಯನ್ನು ತೆರವುಗೊಳಿಸಬೇಕು ಎಂದು ವೀಣಾ ಪರಮೇಶ್ವರ್‌ ಆಗ್ರಹಿಸಿದರು.

ಉಪಾಧ್ಯಕ್ಷೆ ಗ್ರೇಸಿ ಡಯಾಸ್‌, ನಗರಸಭೆಯ ಸದಸ್ಯರಾದ ಉಷಾ, ಎನ್‌.ಲಲಿತಮ್ಮ, ಪರಿಮಳ, ಮರಿಯಾ ಲೀಮಾ, ಸರಸ್ವತಿ, ಸಬಿರಾ, ಎನ್‌. ಶ್ರೀನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.