ಸಾಗರ: ರೈಲು ಹಳಿಯ ಮೇಲೆ ಬೆಚ್ಚಗೆ ನಿದ್ರಿಸಿದ ವ್ಯಕ್ತಿ; ರೈಲ್ವೆ ಪೊಲೀಸರಿಂದ ಉಳಿದ ಪ್ರಾಣ
Team Udayavani, Feb 22, 2022, 5:27 PM IST
ಸಾಂದರ್ಭಿಕ ಚಿತ್ರ
ಸಾಗರ: ಇಲ್ಲಿನ ಜಂಬಗಾರು ರೈಲ್ವೆ ನಿಲ್ದಾಣದ ಸಮೀಪದ ಗೋಪಾಲಗೌಡ ಕ್ರೀಡಾಂಗಣದ ಬಳಿಯ ರೈಲ್ವೆ ಹಳಿಯ ಮೇಲೆ ಸೋಮವಾರ ವ್ಯಕ್ತಿಯೊಬ್ಬ ಮಲಗಿ ನಿದ್ರಿಸುತ್ತಿದ್ದ ಸಮಯದಲ್ಲಿ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ರೈಲ್ವೆ ಸಿಬ್ಬಂದಿ ಮತ್ತು ಪೊಲೀಸರು ಆ ವ್ಯಕ್ತಿಯನ್ನು ಸ್ಥಳದಿಂದ ಎಬ್ಬಿಸಿ, ಮನೆಗೆ ಕಳುಹಿಸಿದ್ದಾರೆ.
ಇಲ್ಲದಿದ್ದರೆ ಕೆಲವೇ ಸಮಯದಲ್ಲಿ ಬರುತ್ತಿದ್ದ ರೈಲಿಗೆ ಈ ವ್ಯಕ್ತಿ ಬಲಿಯಾಗಬೇಕಾದ ಅಪಾಯ ಸ್ವಲ್ಪದರಲ್ಲಿ ತಪ್ಪಿದಂತಾಗಿದೆ. ರೈಲಿನ ವಿಳಂಬದಿಂದಲೂ ಒಂದು ಜೀವ ಉಳಿದಂತಾಗಿದೆ!
ತಾಳಗುಪ್ಪ ಮೂಲದ ಸುಮಾರು 40 ವರ್ಷದ ವ್ಯಕ್ತಿಯೊಬ್ಬ ಹಳಿಯ ಮೇಲೆ ಮಲಗಿರುವುದನ್ನು ಮಸೂದ್ ಎಂಬಾತ ಗಮನಿಸಿದ್ದಾರೆ. ಅವರು ನೀಡಿದ ಮಾಹಿತಿ ಮೇರೆಗೆ ರಫೀಕ್ ಮತ್ತು ಜಮೀಲ್ ತಕ್ಷಣ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ರೈಲ್ವೆ ಪೊಲೀಸ್ ವಿಭಾಗದ ಎಎಸ್ಐ ಪರಶುರಾಮಯ್ಯ, ಸಚಿನ್ ಹಾಗೂ ರೈಲ್ವೆಯ ಸಿಗ್ನಲ್ ಸಿಬ್ಬಂದಿ ಕಿರಣ್ ಆಗಮಿಸಿದ್ದಾರೆ. ಹಳಿಯ ಮೇಲೆ ಮಲಗಿದ್ದ ವ್ಯಕ್ತಿ ಮದ್ಯಸೇವನೆಯ ಅಮಲಿನಲ್ಲಿರುವುದು ಕಂಡುಬಂದಿದೆ.
ಆತನನ್ನು ಎಬ್ಬಿಸಿ, ಮನೆಗೆ ತೆರಳುವಂತೆ ತಿಳಿಸಿದ್ದಾರೆ. ಸಾಗರ ಜಂಬಗಾರು ನಿಲ್ದಾಣಕ್ಕೆ ರಾತ್ರಿ 10 ಘಂಟೆ ಸುಮಾರಿಗೆ ಬರಬೇಕಾಗಿದ್ದ ರೈಲು ಬದಲಾದ ವೇಳಾಪಟ್ಟಿಯ ಪ್ರಕಾರ ತಡವಾಗಿ ರಾತ್ರಿ 12 ಗಂಟೆಗೆ ಬಂದಿದ್ದರಿಂದ ಅಹಿತಕರ ಘಟನೆ ಸಂಭವಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ