ನಾಪತ್ತೆಯಾಗಿದ್ದ ಆನೆ ದಂತ ಎಸ್ಪಿ ಕಚೇರಿಯಲ್ಲೇ ಪತ್ತೆ!
Team Udayavani, Feb 27, 2019, 1:00 AM IST
ಶಿವಮೊಗ್ಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ಕಾಣೆಯಾಗಿದ್ದ ಆನೆ ದಂತವು ಅದೇ ಕಟ್ಟಡದಲ್ಲಿ ಪತ್ತೆಯಾಗುವ ಮೂಲಕ ಹಲವು ಅನುಮಾನ ಹುಟ್ಟು ಹಾಕಿದೆ.
ಈ ಕುರಿತು ಮಂಗಳವಾರ ಮಾಹಿತಿ ನೀಡಿದ ಅಪರ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ನೂತನ ಎಸ್ಪಿ ಎಂ. ಅಶ್ವಿನಿ ಅವರು ಅಧಿಕಾರ ವಹಿಸಿಕೊಂಡ ಅನಂತರ ಕಚೇರಿ ಮೇಲಿದ್ದ ದಾಸ್ತಾನು ಕೊಠಡಿಯಲ್ಲಿನ 8-10 ವರ್ಷಗಳ ಪೇಪರ್, ರಿಜಿಸ್ಟರ್ ಇರುವ ಕೊಠಡಿಯನ್ನು ಸ್ವತ್ಛ ಮಾಡಲು ಸೂಚಿಸಿದ್ದರು. ಅದರಂತೆ ಸೋಮವಾರ ಸ್ವತ್ಛತಾ ಕಾರ್ಯ ಆರಂಭವಾಗಿತ್ತು. ಈ ವೇಳೆ ಗೌರಮ್ಮ ಎಂಬ ಸಿಬಂದಿಗೆ ಪೇಪರ್ನಲ್ಲಿ ಸುತ್ತಿಟ್ಟ ರೀತಿಯಲ್ಲಿ ಆನೆ ದಂತ ಪತ್ತೆಯಾಗಿದೆ. ಈ ಮಾಹಿತಿ ತಿಳಿಸಿದ ಕೂಡಲೇ ಅದನ್ನು ತತ್ಕ್ಷಣ ವಶಕ್ಕೆ ಪಡೆಯಲಾಗಿದೆ. ಈ ವಿಷಯವನ್ನು ಸಿಐಡಿ ಅ ಧಿಕಾರಿಗಳಿಗೆ ತಿಳಿಸಲಾಗಿದೆ. ಅವರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದರು.
2014ರ ಅನಂತರ ಆನೆ ದಂತ ಕಳವಾಗಿದೆ ಎಂದು ಹಿಂದಿನ ಎಸ್ಪಿ ಅಭಿನವ್ ಖರೆ ತನಿಖೆಗೆ ಆದೇಶಿ ಸಿದ್ದರು. ಪ್ರಾಥಮಿಕ ತನಿಖೆ ಮಾಡಿ ಕಳೆದ ವರ್ಷ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.
2018ನೇ ಮೇ 22ರಂದು ಎಸ್ಪಿ ಕಚೇರಿಯ ರಹಸ್ಯ ಶಾಖೆಯ ಶೀಘ್ರ ಲಿಪಿಗಾರ ಎ.ಬಿ. ಶ್ರೀನಾಥ್ ಅವರು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಾದ ಬಳಿಕ ರಾಜ್ಯ ಕಾನೂನು, ಸುವ್ಯವಸ್ಥೆಯ ಎಡಿಜಿಪಿ ಕಮಲ್ ಪಂತ್ ಆಗಮಿಸಿ ತನಿಖೆಗೆ ಚುರುಕು ನೀಡುವ ಪ್ರಯತ್ನ ನಡೆಸಿದ್ದರು. ಅದರ ಭಾಗವಾಗಿ ಕರ್ತವ್ಯ ಲೋಪದ ಆಧಾರದ ಮೇಲೆ ಇಬ್ಬರು ಪೇದೆಗಳನ್ನು ಅಮಾನತು ಗೊಳಿಸಲಾಗಿತ್ತು. ಇನ್ಸ್ಪೆಕ್ಟರ್ಗೆ ತನಿಖೆಯ ಜವಾಬ್ದಾರಿ ನೀಡಲಾಗಿತ್ತು. ಆದರೆ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದ ಕಾರಣ 2019ರ ಜನವರಿ ಸಿಐಡಿ ತನಿಖೆಗೆ ವಹಿಸಲಾಗಿತ್ತು.
ಅಧಿಕಾರ ಹಸ್ತಾಂತರ ಸಂದರ್ಭಗಳಲ್ಲೆಲ್ಲ ಅಧಿಕಾರಿಗಳು ದಂತಗಳ ಮುಂದೆ ನಿಂತು ಫೋಟೋ ತೆಗೆಸಿ ಕೊಳ್ಳುತ್ತಿದ್ದರು. ಮುರುಗನ್ ಅಧಿಕಾರ ಸ್ವೀಕರಿಸಿದಾಗಲೂ ಇದ್ದವು. ಅನಂತರ ನಾಪತ್ತೆಯಾಗಿದ್ದವು. ಮೇಜಿನ ಮೇಲೆ ಅಲಂಕೃತ ಮರದ ಪೀಠದ ಮೇಲೆ ಸುಂದರವಾಗಿ ಇಡಲಾಗಿದ್ದ ದಂತವನ್ನು ಅಪಹರಿಸಿದ್ದವರಾರು? ಮತ್ತೆ ತಂದಿಟ್ಟರೇ? ಎಂಬುದು ನಿಗೂಢವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ