ಜೋಗದ ಹಳೆ ಬಾಂಬೆ ಬಂಗ್ಲೋ ನೀರು ಪಾಲಾಗುವ ಸಂಭವ
Team Udayavani, Aug 9, 2019, 5:18 AM IST
ಸಾಗರ: ಜೋಗ ಜಲಪಾತದ ರಾಜಾ-ರಾಣಿ-ರೋರರ್- ರಾಕೆಟ್ ಕವಲುಗಳ ಪಕ್ಕದಲ್ಲಿರುವ ಪುರಾತನವಾದ ಬಾಂಬೆ ಬಂಗ್ಲೋ ಎದುರಿನ ಗುಡ್ಡ ಕುಸಿಯುತ್ತಿದ್ದು,ಇದೇ ರೀತಿ ಮಳೆ ಮುಂದುವರಿದರೆ ಸಂಪೂರ್ಣಕಟ್ಟಡ ಜೋಗ ಜಲಪಾತದ ತಳ ಸೇರುವ ಪರಿಸ್ಥಿತಿ ಗುರುವಾರ ನಿರ್ಮಾಣವಾಗಿದೆ.
ಪ್ರಸ್ತುತ ಬ್ರಿಟಿಷರ ಕಾಲದ ಬಾಂಬೆ ಬಂಗ್ಲೆಯಲ್ಲಿ ಪ್ರವಾಸಿಗರಿಗೆ, ವಿಐಪಿಗಳಿಗೆ ವಸತಿ ಅವಕಾಶವನ್ನು ಕೊಡುತ್ತಿಲ್ಲ.ಒಂದು ಕಾಲದಲ್ಲಿ ಈ ಕಟ್ಟಡದಿಂದ ಜಲಪಾತದ ನಾಲ್ಕು ಕವಲುಗಳುಜಲಪಾತದ ತಳದತ್ತ ಬೀಳುವುದನ್ನು ನೋಡುವುದೇ ಒಂದು ಆಕರ್ಷಣೀಯ ಅಂಶವಾಗಿತ್ತು. ಈಗ ಈ ಕಟ್ಟಡದ ನಿರ್ವಹಣೆಗಾಗಿ ಓರ್ವ ಮೇಟಿಯನ್ನು ಮಾತ್ರ ಇರಿಸಲಾಗಿದೆ ಎಂಬ ಮಾಹಿತಿಯಿದೆ.
ಕಳೆದ ಐದು ದಿನಗಳ ಮಳೆಯ ರಭಸಕ್ಕೆ ಬಾಂಬೆ ಬಂಗ್ಲೆ ಇರುವ ಗುಡ್ಡ ಕುಸಿಯಲಾರಂಭಿಸಿದೆ.ಇದರಿಂದ ಜೋಗ ಜಲಪಾತದ ಎಡ ಪಕ್ಕದಲ್ಲಿ ಕೃತಕವಾದ ಕೆಂಪು ಮಣ್ಣಿನ ಒಂದು ಧಾರೆ ಪ್ರವಾಸಿಗರಿಗೆ ಕಾಣಲಾರಂಭಿಸಿದೆ.ಗುಡ್ಡದಿಂದ ಹರಿದು ಬರುತ್ತಿರುವ ನೀರು ಬಾಂಬೆ ಬಂಗ್ಲೆಯ ತಳದ ಮಣ್ಣನ್ನು ಕೊರೆದು ಜಲಪಾತವಾಗಿ ಧುಮುಕುತ್ತಿದೆ. ಇದೇ ರೀತಿ ಮುಂದುವರಿದರೆ ಇನ್ನೆರಡು ದಿನಗಳಲ್ಲಿಯೇ ಸಂಪೂರ್ಣ ಬಂಗ್ಲೆ ತಳ ಸೇರಲಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ