ನಗರ ಹೋಬಳಿಯ ಸಮಸ್ಯೆಗೆ ಸಿಗುವುದೇ ಮುಕ್ತಿ
Team Udayavani, Jun 25, 2019, 10:32 AM IST
ಹೊಸನಗರ: ಮಲೆನಾಡಿನ ಮಡಿಲು, ಮುಳುಗಡೆಯ ತವರು ನಗರ ಹೋಬಳಿ ಹಲವು ದಶಕಗಳಿಂದ ಸಾಕಷ್ಟು ಸಮಸ್ಯೆಗಳಿಂದ ನಲುಗಿದೆ. ನಾಡಿಗಾಗಿ ತ್ಯಾಗ ಮಾಡಿದ ಇಲ್ಲಿಯ ಜನ ಮಾತ್ರ ಇಂದಿಗೂ ಇಲ್ಲಗಳ ನಡುವೆಯೇ ಬದುಕು ಸಾಗಿಸುತ್ತಿದ್ದು, ಇವುಗಳಿಗೆಲ್ಲ ಪರಿಹಾರ ಸಿಕ್ಕೀತು ಎಂಬ ಆಶಾಭಾವದಲ್ಲಿದ್ದಾರೆ.
ಜೂನ್.25 ರ ಮಂಗಳವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಗ್ರಾಮವಾಸ್ತವ್ಯಕ್ಕಾಗಿ ಹೋಬಳಿ ಕೇಂದ್ರ ನಗರಕ್ಕೆ ಬರುತ್ತಿದ್ದು ಇಲ್ಲಿಯ ಜನರ ಪಾಲಿಗೆ ಹೊಸ ನಿರೀಕ್ಷೆ ಹುಟ್ಟಿಸಿದೆ. ತಮ್ಮ ಸಮಸ್ಯೆಗಳ ಅಹವಾಲು ಸಲ್ಲಿಸಲು ಕಾಯುತ್ತಿದ್ದಾರೆ.
ಮುಳುಗಡೆ ತವರು: ನಗರ ಹೋಬಳಿ ಎಂದರೆ ಮುಳುಗಡೆಯ ತವರು ಎಂದೇ ಪ್ರಖ್ಯಾತಿ. ಕಾರಣ ಲಿಂಗನಮಕ್ಕಿ ಜಲಾಶಯದ ಜೀವನಾಡಿ ಎಂದೇ ಕರೆಸಿಕೊಳ್ಳುವ ಈ ಹೋಬಳಿಯಲ್ಲಿ ವಾರಾಹಿ ಯೋಜನೆಯ ಮಾಣಿ ಡ್ಯಾಂ, ಚಕ್ರ-ಸಾವೇಹಕ್ಲು ಅವಳಿ ಜಲಾಶಯ, ಪಿಕಪ್ ಮತ್ತು ಖೈರಗುಂದ ಡ್ಯಾಂಗಳು ಜನ್ಮತಳೆದಿವೆ. ಸುತ್ತಲೂ ಹಿನ್ನೀರು ಆವರಿಸಿಕೊಂಡಿರುವ ಇಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ.
ಬಗರ್ ಹುಕುಂ ಸಮಸ್ಯೆ: ಬಗರ್ ಹುಕುಂ ಈ ಭಾಗದ ಜನರನ್ನು ಸಾಕಷ್ಟು ವರ್ಷಗಳಿಂದ ಕಾಡುತ್ತಿರುವ ಬಹುದೊಡ್ಡ ಸಮಸ್ಯೆ. ತಮ್ಮ ಮನೆ ಹಾಗೂ ಜಮೀನಿನ ಹಕ್ಕುಪತ್ರಕ್ಕಾಗಿ ಹೋಬಳಿಯ ನಿವಾಸಿಗಳು ಇನ್ನಿಲ್ಲದ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಪ್ರತಿಭಟನೆ ತೀವ್ರಗೊಂಡಾಗ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಖುದ್ದು ಭೇಟಿ ನೀಡಿ ಇಲ್ಲಿಯ ಸಮಸ್ಯೆ ಆಲಿಸಿದ್ದಾರೆ. ಈಗ ಅವರೇ ಗ್ರಾಮವಾಸ್ತವ್ಯಕ್ಕೆ ಬರುತ್ತಿದ್ದು ಫಲಾನುಭವಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.
ಶಿಥಿಲಗೊಂಡ ಸಂಡೋಡಿ ಸೇತುವೆ:ಕರಿಮನೆ ಗ್ರಾಪಂ ವ್ಯಾಪ್ತಿಯ ಮಳಲಿ ಗ್ರಾಮದಲ್ಲಿರುವ ಸಂಡೋಡಿ ಸೇತುವೆ ಸಂಪೂರ್ಣ ಶಿಥಿಲಗೊಂಡಿದ್ದು ಸೇತುವೆ ಮೇಲೆ ಸಂಚರಿಸಲು ಭಯಪಡುವಂತಾಗಿದೆ. ಸುಮಾರು 500 ಕುಟುಂಬಗಳ ಪ್ರಮುಖ ಸಂಪರ್ಕ ಸೇತುವಾಗಿರುವ ಸಂಡೋಡಿ ಸೇತುವೆಗೆ ತುರ್ತು ಪರಿಹಾರ ಕಂಡುಕೊಳ್ಳಬೇಕಿದೆ
ಪದವಿ ಕಾಲೇಜುಗಳಿಲ್ಲ: ಹೌದು ಹೋಬಳಿ ಕೇಂದ್ರ ನಗರದಲ್ಲಿ ಸರ್ಕಾರಿ ಪದವಿ ಕಾಲೇಜು ಬೇಕು ಎಂಬುದು ಗ್ರಾಮಸ್ಥರ ಬಹುದಿನದ ಬೇಡಿಕೆ. ಅಲ್ಲದೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಮತ್ತು ಕಾಲೇಜು ಹಾಸ್ಟೆಲ್ ಇಲ್ಲದಿರುವುದು ಕೂಡ ಇಲ್ಲಿಯ ಸಮಸ್ಯೆ. ತಾಲೂಕು ಕೇಂದ್ರ ಹೊಸನಗರ, ಸಾಗರ, ತೀರ್ಥಹಳ್ಳಿ, ಶಿವಮೊಗ್ಗಕ್ಕೆ ಹೋಗಿ ವಿದ್ಯಾರ್ಥಿನಿಲಯದಲ್ಲಿ ಉಳಿದು ವ್ಯಾಸಾಂಗ ಮಾಡುವುದು ಅನಿವಾರ್ಯವಾಗಿದೆ.
ಸಿಬ್ಬಂದಿ ಕೊರತೆ: ಇಡೀ ಹೋಬಳಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ವೈದ್ಯರು ಕೂಡ ಇಲ್ಲ. ನಗರ ಸರ್ಕಾರಿ ಸಂಯುಕ್ತ ಆಸ್ಪತ್ರೆಯಲ್ಲಿ ವೈದ್ಯರಿದ್ದರೂ ಸ್ಪಾಪ್ ನರ್ಸ್, ಸಿಬ್ಬಂದಿ ಕೊರತೆ ಇದೆ. ಸಂಪೇಕಟ್ಟೆಯಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣಗೊಂಡಿದ್ದರೂ ರೋಗಿಗಳ ಸೇವೆಗೆ ಇನ್ನು ಸಮರ್ಪಕವಾಗಿ ತೆರೆದಿಲ್ಲ. ಜಾನುವಾರು ಆಸ್ಪತ್ರೆಗಳಂತೂ ಹೆಸರಿಗಷ್ಟೇ ಎಂಬಂತಾಗಿದೆ. ವೈದ್ಯರ ಕೊರತೆ ಇಲ್ಲಿಯ ರೈತರನ್ನು ಬಾಧಿಸುತ್ತಿದೆ. ಹೈನುಗಾರಿಕೆಯನ್ನೇ ನಂಬಿ ಬಹಳಷ್ಟು ರೈತರು ಮತ್ತು ಕೂಲಿಕಾರ್ಮಿಕರು ತಮ್ಮ ಬದುಕು ಕಟ್ಟಿಕೊಂಡಿದ್ದು ಪಶು ಆಸ್ಪತ್ರೆ ಅವ್ಯವಸ್ಥೆಯಿಂದಾಗಿ ರೈತರು ಹೈನುಗಾರಿಕೆಯಿಂದ ವಿಮುಖರಾಗುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
B.Y. Raghavendra: ಇಂಟರ್ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್ ಮತಬೇಟೆ
Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ
ಜಾತ್ಯತೀತ ಪದಕ್ಕೆ ಅರ್ಥವೇ ಇಲ್ಲ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ