ಯೋಜನೆಗಳ ಜಾರಿಯಲ್ಲಿ ಅಂಕಿ-ಅಂಶಗಳ ಪಾತ್ರ ಅಪಾರ
Team Udayavani, Jun 30, 2020, 1:10 PM IST
ಶಿವಮೊಗ್ಗ: ಸಾಂಖ್ಖಿಕ ದಿನಾಚರಣೆ ಕಾರ್ಯಕ್ರಮವನ್ನು ಎಸಿ ಟಿ.ವಿ.ಪ್ರಕಾಶ್ ಉದ್ಘಾಟಿಸಿದರು.
ಶಿವಮೊಗ್ಗ: ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಅಂಕಿಅಂಶಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಿವಮೊಗ್ಗ ಉಪವಿಭಾಗಾಧಿಕಾರಿ ಟಿ.ಬಿ.ಪ್ರಕಾಶ್ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಸಾಂಖ್ಖಿಕ ದಿನಾಚರಣೆ ಹಾಗೂ ಪ್ರೊ| ಪಿ.ಸಿ.ಮಹಾಲನೋಬಿಸ್ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯೋಜನೆಗಳನ್ನು ಅನುಷ್ಠಾನ ಗೊಳಿಸುವ ಮೊದಲು ಅಂಕಿಅಂಶಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಅದನ್ನು ವಿಶ್ಲೇಷಿಸಲಾಗುತ್ತದೆ. ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಆರ್ಥಿಕ ಯೋಜನೆಗಳನ್ನು ಪರಿಣಾಮ ಕಾರಿಯಾಗಿ ಜಾರಿಗೊಳಿಸುವಲ್ಲಿ ಪ್ರೊ| ಪ್ರಶಾಂತ ಚಂದ್ರ ಮಹಾಲನೋಬಿಸ್ ಅವರ ಕೊಡುಗೆ ಅಪಾರವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಜನ್ಮ ದಿನವನ್ನು ಸಾಂಖ್ಖಿಕ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾ ಸಾಂಖ್ಖಿಕ ಅಧಿಕಾರಿ ಬ್ರಿಜೆಟ್ ವರ್ಗಿಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಹಾಲನೋಬಿಸ್ ಅವರು ಎರಡನೇ ಪಂಚವಾರ್ಷಿಕ ಯೋಜನೆಯ ಯಶಸ್ಸಿನ
ರೂವಾರಿಯಾಗಿದ್ದಾರೆ. ಈ ಬಾರಿಯ ಸಾಂಖ್ಖಿಕ ದಿನವನ್ನು ಲಿಂಗ ಸಮಾನತೆ ಸಾಧಿಸಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳನ್ನು ಸಶಕ್ತರನ್ನಾಗಿಸುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಧ್ಯೇಯದೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ಉಮಾ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಗಣಪತಿ ನಾಯ್ಕ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಣ್ಣ
ಪಂಚಾಳ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಪುಷ್ಪಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ