![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
2 ಸಿದ್ದಾಂತಗಳ ನಡುವಿನ ಹೋರಾಟ
Team Udayavani, Nov 1, 2018, 10:01 AM IST
![b-48.jpg](https://www.udayavani.com/wp-content/uploads/2018/11/1/b-48.jpg)
ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಉಪ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟವೇ ಹೊರತು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸ್ಪರ್ಧೆಯಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಶ್ಲೇಷಿಸಿದರು.
ನಗರದಲ್ಲಿ ಮಾತನಾಡಿ, ಸಮಾಜ ವಾದಿ, ಕಾಗೋಡು, ರೈತ, ದಲಿತ ಚಳವಳಿಗಳು ಹುಟ್ಟಿ ಬೆಳೆದಂತಹ ಜಿಲ್ಲೆಯಲ್ಲಿ
ಜಾತ್ಯತೀತ ನಿಲುವು ಹೊಂದಿದ ಪಕ್ಷಗಳ ವಿರುದ್ಧ ಕೋಮು ವಾದಿಗಳು ಸ್ಪರ್ಧೆ ಮಾಡಿದ್ದಾರೆ. ಈ ಹೋರಾಟದಲ್ಲಿ ಜನತೆ ಬಿಜೆಪಿಯನ್ನು ಮಣಿಸಿದಲ್ಲಿ ರಾಷ್ಟ್ರ ರಾಜಕಾರಣಕ್ಕೆ ಹೊಸ ಆಯಾಮ ದೊರಕುತ್ತದೆ. ನಮಗೀಗ ಬೇಕಾಗಿರುವುದು ಹಿಂದೂ, ಮುಸ್ಲಿಂ, ಕ್ರೈಸ್ತರು ಒಳಗೊಂಡಂತೆ ಎಲ್ಲ ಧರ್ಮಗಳ ಸಮನ್ವಯದ ಜಾತ್ಯತೀತ ಏಕತೆಯ ಭಾರತವೇ ಹೊರತು ದೇಶದೊಳಗೆ ಸಂಘರ್ಷ, ಅಶಾಂತಿಯ ಬೀಡಲ್ಲ. ಅದು ಸಾಧ್ಯವಾಗಬೇಕೆಂಬ ಕಾರಣಕ್ಕೆ ಜಾತ್ಯತೀತ ನಿಲುವುಗಳನ್ನು ಹೊಂದಿದ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದರು.
ದೇಶದ ಜನತೆ 282 ಸದಸ್ಯರನ್ನು ಕೊಟ್ಟು ಆಡಳಿತ ನಡೆಸುವಂತೆ ಆಶೀರ್ವದಿಸಿದ್ದು ಪ್ರತ್ಯೇಕತೆಯ ಭಾರತವನ್ನು ಸೃಷ್ಟಿ ಮಾಡುವುದಕ್ಕಲ್ಲ. ಹಾಗೆ ಮಾಡುವುದಾದಲ್ಲಿ 45 ಕೋಟಿ ಮುಸ್ಲಿಮರು ಮತ್ತು 25 ಕೋಟಿ ಕ್ರೈಸ್ತರನ್ನು ಎಲ್ಲಿಗೆ ಕಳಿಸುತ್ತೀರ ಎಂಬುದನ್ನು
ಮೊದಲು ಸ್ಪಷ್ಟಪಡಿಸಿ. ಧರ್ಮಗಳ ಆಂತರಿಕ ಪದ್ಧತಿಗಳ ಮೇಲೆ ಗದಾಪ್ರಹಾರ ನಡೆಸುವುದನ್ನು ಮೊದಲು ಕೈಬಿಡಿ ಎಂದು ಆಗ್ರಹಿಸಿದರು.
ಉಪ ಚುನಾವಣೆ ಮಾದರಿಯಲ್ಲೇ ಮುಂಬರುವ ಲೋಕಸಭೆ ಚುನಾವಣೆಗೂ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರ ಮತ್ತು ರಾಜ್ಯ ಮಟ್ಟದ ವರಿಷ್ಠರೊಂದಿಗೆ ಕುಳಿತು ಚರ್ಚಿಸಿ ಸೀಟು ಹಂಚಿಕೆ ಮಾಡಿಕೊಳ್ಳಲಾಗುವುದು. ಮೈತ್ರಿಪಕ್ಷದೊಳಗೆ ಸಾಮರಸ್ಯ ಕಾಪಾಡಿಕೊಂಡು ಹೋಗುವ ವಿಷಯದಲ್ಲಿ ನನ್ನ ಸಂಪೂರ್ಣ ಸಹಕಾರವಿದೆ.
● ಎಚ್.ಡಿ.ದೇವೇಗೌಡ ಮಾಜಿ ಪ್ರಧಾನಿ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.