ಕನ್ನಡದ ಉಳಿವು ಕನ್ನಡಿಗರಿಂದ ಮಾತ್ರ ಸಾಧ್ಯ: ಆರಗ


Team Udayavani, Jan 24, 2019, 11:35 AM IST

shiv-2.jpg

ತೀರ್ಥಹಳ್ಳಿ: ಸಾಹಿತ್ಯ ಕ್ಷೇತ್ರವು ಜಾತಿ, ಭಾಷೆ, ಗಡಿ ಮೀರಿದ ಕ್ಷೇತ್ರವಾಗಿದೆ. ಜಾತ್ಯತೀತ, ಪಕ್ಷಾತೀತವಾಗಿ ಸಾಹಿತ್ಯ ಕ್ಷೇತ್ರವನ್ನು ಬೆಳೆಸುವ ಕನ್ನಡಿಗರಾದ ನಾವುಗಳು ಕ್ರಿಯಶೀಲರಾಗಿ ಕನ್ನಡ ಭಾಷೆ ಕಟ್ಟುವ ಕೆಲಸ ಮಾಡಬೇಕಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಕರೆ ನೀಡಿದರು.

ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಆಯೋಜಿಸಿದ್ದ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿದ ಅವರು, ಭಾಷೆ ಉಳಿಯಬೇಕಾದರೆ ಆ ಭಾಗದ ಭಾಷಿಗನ ಸ್ವಾಭಿಮಾನದಿಂದ ಮಾತ್ರ ಸಾಧ್ಯ. ಆದರೆ ಇಂದು ಕೆಲವು ಸಾಹಿತಿಗಳು, ವಿಚಾರವಾದಿಗಳು ಕನ್ನಡ ಭಾಷೆ ಬಗ್ಗೆ ಭಾಷಣ ಮಾಡುತ್ತಾ ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುತ್ತಿದ್ದಾರೆ. ಇಂದು ಸ್ಥಳೀಯ ಭಾಷೆಗಳನ್ನು ಕೊಲ್ಲುವ ಕೆಲಸ ಆಂಗ್ಲ ಭಾಷೆ ಮಾಡುತ್ತಿದೆ. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಮಾದರಿ ಕನ್ನಡ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು. ಇಂದು ಆಂಗ್ಲ ಕಲಿಯುವ ಮಕ್ಕಳ ಎದುರು ಕನ್ನಡ ಶಾಲೆಗಳ ಮಕ್ಕಳು ಕೀಳರಿಮೆಯಿಂದ ಬದುಕಬೇಕಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಸರ್ಕಾರಗಳು ಭಾಷೆ ವಿಚಾರದಲ್ಲಿ ಬದ್ಧತೆ ಬೆಳೆಸಿಕೊಳ್ಳಬೇಕಾಗಿದೆ. ಐಎಎಸ್‌ ಅಧಿಕಾರಿಗಳಿಂದ ಇಂದು ಕನ್ನಡ ಭಾಷೆ ಕಟ್ಟಲಾಗುವುದಿಲ್ಲ. ಸಾಹಿತ್ಯ ಸಮ್ಮೇಳನಗಳ ನಿರ್ಣಯಗಳು ಸರ್ಕಾರದ ಮೂಲೆ ಸೇರುತ್ತಿವೆ. ಇಂದು ಬಹಳಷ್ಟು ಕನ್ನಡ ಸಮ್ಮೇಳನದಲ್ಲಿ ವಿಚಾರವಾದಿಗಳು ಎನಿಸಿಕೊಂಡವರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಸಾಹಿತ್ಯ ನಿಂತ ನೀರಲ್ಲ, ಸಾಹಿತ್ಯದ ನದಿ ನಿರಂತರವಾಗಿ ಹರಿಯಬೇಕಾದರೆ ಪ್ರೋತ್ಸಾಹ, ಬೆಂಬಲ ಅಗತ್ಯ ಎಂದರು.

ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಟಿ.ಎಲ್‌.ಸುಬ್ರಮಣ್ಯ ಅಡಿಗ ಮಾತನಾಡಿ, ಈ ಸಮ್ಮೇಳನದ ಅಧ್ಯಕ್ಷತೆ ವಹಿಸಿ ನುಡಿತೇರು ಎಳೆಯಲು ನನಗೆ ಸಿಕ್ಕ ಅವಕಾಶಕ್ಕಾಗಿ ಕನ್ನಡ ತಾಯಿಗೆ ಗೌರವ ಸಲ್ಲಿಸುತ್ತಿದ್ದೇನೆ. ಕನ್ನಡವೆಂಬ ಮಾವಿನ ಮರಕ್ಕೆ ಹೆಚ್ಚು ಕೋಗಿಲೆಗಳು ಬರುವಂತಾದರೆ ಸಮ್ಮೇಳನಗಳು ಯಶಸ್ವಿಯಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಹಕಾರಿ ಕ್ಷೇತ್ರದ ಎಚ್.ಎನ್‌.ವಿಜಯದೇವ್‌, ರಂಗಭೂಮಿ ಕಲಾವಿದ ಸಂದೇಶ್‌ ಜವಳಿ, ಮ್ಯಾಥ್ಯು ಸುರಾನಿ, ವೈದ್ಯಕೀಯ ಕ್ಷೇತ್ರದಿಂದ ಡಾ| ನಾರಾಯಣಸ್ವಾಮಿ, ಡಾ| ಶಿವಪ್ರಕಾಶ್‌, ಡಾ| ಜೀವೇಂದರ್‌ ಜೈನ್‌, ಆಯುರ್ವೇದ ಪಂಡಿತರಾದ ಮಂಗಳ ಶಿವಣ್ಣ, ಸಂಗೀತ ಕ್ಷೇತ್ರದಿಂದ ರಮೇಶ್‌ ಗಾಂವ್ಕರ್‌, ಜಾನಪದ ಕ್ಷೇತ್ರದಿಂದ ಯೋಗೇಶ್‌, ಸುರೇಶ್‌ ಆಡಿನಸರ, ಚುಟುಕು ಸಾಹಿತ್ಯ ಕ್ಷೇತ್ರದಿಂದ ಸುಲೋಚನ, ಸುರೇಶ್‌, ಕೆ.ಕೆ.ರಾಘವೇಂದ್ರ, ಸಮಾಜ ಸೇವೆಯಿಂದ ಪಿ.ಸಿ.ಸತೀಶ್‌ಶೆಟ್ಟಿ, ಪಾಂಡುರಂಗಪ್ಪ, ಎಸ್‌.ಕೆ.ಧರ್ಮೆಶ್‌, ಡಾನ್‌ ರಾಮಣ್ಣ, ಶ್ರಮಿಕರಾದ ರಾಮ ಲಕ್ಷ್ಮ್ಮಣ ಸಹೋದರರು, ಮೈಕ್‌ ರಮೇಶ್‌ ಅವರನ್ನು ಸನ್ಮಾನಿಸಲಾಯಿತು.

ಕಸಾಪ ಅಧ್ಯಕ್ಷ ಸತೀಶ್‌ ಆಡಿನಸರ, ಜಿಪಂ ಸದಸ್ಯೆ ಅಪೂರ್ವ ಶರ, ಭಾರತೀ ಪ್ರಭಾಕರ್‌, ತಾಲೂಕು ನೌಕರರ ಸಂಘದ ಅಧ್ಯಕ್ಷ ಟಿ.ವಿ.ಸತೀಶ್‌, ವೆಂಟಕೇಶ್‌ ಹೆಗ್ಡೆ ಇನ್ನಿತರರಿದ್ದರು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

ನನ್ನ ಆರೋಪಗಳಿಗೆ ಬಿಎಸ್‌ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ

ನನ್ನ ಆರೋಪಗಳಿಗೆ ಬಿಎಸ್‌ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ

1-wqewewq

Sagara: ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

Madhu Bangarappa, ಬೇಳೂರು ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಿರ್ಗಮನ: ಹಕ್ರೆ

Madhu Bangarappa, ಬೇಳೂರು ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಿರ್ಗಮನ: ಹಕ್ರೆ

Lok Sabha Election; ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ

Lok Sabha Election; ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.