ಐಸಿಯು ಸೇರುವ ಸ್ಥಿತಿಯಲ್ಲಿದೆ ರಂಗಭೂಮಿ


Team Udayavani, Nov 30, 2018, 5:23 PM IST

shiv-2.jpg

ಶಿವಮೊಗ್ಗ: ಅನುದಾನಕ್ಕಾಗಿ ಹುಟ್ಟಿಕೊಳ್ಳುವ ಕಲಾ ತಂಡಗಳನ್ನು ಸ್ಥಳೀಯ ಕಲಾವಿದರು ವಿರೋಧಿಸಿದ್ದರೆ ಇಂದು ಈ ಸ್ಥಿತಿಯೇ ಬರುತ್ತಿರಲಿಲ್ಲ. ಕಲಾವಿದರು ಪ್ರತಿಭಟನಾ ನೆಲೆ ಕಳೆದುಕೊಂಡಿರುವುದರಿಂದ “ರಂಗಭೂಮಿ’ ತೀವ್ರ ನಿಗಾ ಘಟಕ (ಐಸಿಯು) ಸೇರುವ ಸ್ಥಿತಿಗೆ ತಲುಪಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್‌ ಕಳವಳ ವ್ಯಕ್ತಪಡಿಸಿದರು.

 ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಂಜಾವೂರಿನ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ “ರಾಷ್ಟ್ರೀಯ ರಂಗ ಉತ್ಸವ’ದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲಾವಿದರ ಅನುಕೂಲಕ್ಕಾಗಿ ಸರಕಾರ “ಅನುದಾನ’ ಯೋಜನೆ ಜಾರಿಗೆ ತಂದಿದೆ. ಆದರೆ, ಅನುದಾನಕ್ಕೋಸ್ಕರವೆಂದೇ ಹಲವು ಕಲಾತಂಡಗಳು ಹುಟ್ಟಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಏತನ್ಮಧ್ಯೆ ನಿಸ್ವಾರ್ಥ, ಲಾಭದ ಉದ್ದೇಶವಿಲ್ಲದೇ ಹಲವು ಕಲಾವಿದರು ದುಡಿಯುತ್ತಿದ್ದಾರೆ. ಅವರಿಂದಾಗಿಯೇ ರಂಗಭೂಮಿ ಚಟುವಟಿಕೆಗಳು ಇನ್ನೂ ನಡೆಯುತ್ತಿವೆ ಎಂದರು.

ಕಲಾವಿದರು ಮತ್ತು ಪ್ರೇಕ್ಷರಿಗೆ ಜಡತ್ವ ಆವರಿಸಿದೆ. ಒಂದು ವೇಳೆ, ನಾಟಕ, ಲೇಖಕರ ವಿಚಾರಧಾರೆಗಳನ್ನು ತೀಕ್ಷ್ಣವಾಗಿ ಯೋಚಿಸಿ, ವಿಮರ್ಶಿಸಿದಲ್ಲಿ ಈ ಜಡತ್ವ ಕಣ್ಮರೆಯಾಗಲು ಸಾಧ್ಯ. ಕೇವಲ ವೈಭವೀಕರಣಕ್ಕೆ ಮಾತ್ರ ಆದ್ಯತೆ ನೀಡದೇ ಪ್ರತಿಯೊಬ್ಬರಲ್ಲಿ ಜಿಜ್ಞಾಸೆ ಹುಟ್ಟಬೇಕು ಎಂದು ಸಲಹೆ ನೀಡಿದರು. 

ರಂಗಭೂಮಿ ರಾಜಾಶ್ರಯದಲ್ಲಿ ಬೆಳೆದು ಬಂದಿಲ್ಲ. ಇದು ಜನಾಶ್ರಯದಲ್ಲಿ ಬೆಳೆದಿದೆ. ಆದರಿಂದು, ರಾಜಾಶ್ರಯದಲ್ಲೂ ಬೆಳೆಯುತ್ತಿರುವ ಕೆಲ ತಂಡಗಳಿವೆ. ಈ “ಜಡತ್ವ’ ಹೋಗಲಾಡಿಸುವುದಕ್ಕಾಗಿ ಭ್ರಷ್ಟಾಚಾರ ಕಿತ್ತೆಸೆಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ತಂಜಾವೂರು ಸೌತ್‌ಜೋನ್‌ ಕಲ್ಚರಲ್‌ ಸೆಂಟರ್‌ನ ಸದಸ್ಯ ತೊಟ್ಟವಾಡಿ ನಂಜುಂಡಸ್ವಾಮಿ ಮಾತನಾಡಿ, ರಂಗ ಚಟುವಟಿಕೆಗಳು ನಗರ ಕೇಂದ್ರಿತವಾದಲ್ಲಿ ರಂಗಭೂಮಿ ಬೆಳೆಯುವುದಿಲ್ಲ. ಹೀಗಾಗಿ, ಹೆಚ್ಚು ಪ್ರೇಕ್ಷಕರು, ಕಲಾ ತಂಡ ಹಾಗೂ ಕಲಾವಿದರಿರುವ ಗ್ರಾಮೀಣ ಪ್ರದೇಶದಲ್ಲಿ ಇಂತಹ ಉತ್ಸವಗಳನ್ನು ಆಯೋಜಿಸಬೇಕು ಎಂದರು.
 
ಎಲ್ಲಿ ರಂಗಭೂಮಿಗೆ ಬೆಲೆ ಇದೆಯೋ ಅಂತಹ ಕಡೆಗಳಲ್ಲಿ ಉತ್ಸವಗಳನ್ನು ಆಯೋಜಿಸಿ. ರಂಗಭೂಮಿಗೋಸ್ಕರ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ದುಡಿಯುವ ಸುಮಾರು ಜನ ಕಲಾವಿದರು ಹಳ್ಳಿಗಳಲ್ಲಿದ್ದಾರೆ. ಆದರೆ, ಅಂತಹವರ್ಯಾರೂ ಪ್ರಶಸ್ತಿ ಮತ್ತು ಅನುದಾನಕ್ಕೆ ಆಯ್ಕೆಯಾಗಲ್ಲ. ತಮ್ಮಷ್ಟಕ್ಕೆ ತಾವೇ ನಿರ್ಲಿಪ್ತರಾಗಿ ಅವರು ರಂಗಭೂಮಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. 

ರಾಜ್ಯ ಸರಕಾರ ರಂಗಭೂಮಿ ಬಲಪಡಿಸುವುದಕ್ಕಾಗಿಯೇ ಹಲವು ಯೋಜನೆ ಜಾರಿಗೆ ತಂದಿದೆ. ಆದರೆ, ಎಲ್ಲೂ ಪೂರ್ಣ ಲಾಭ ಪಡೆಯಲಾಗುತ್ತಿಲ್ಲ. “ರಂಗಭೂಮಿ’ ಕುರಿತು ವಿಚಾರ ಸಂಕಿರಣ ಆಯೋಜಿಸುವುದಕ್ಕಾಗಿ ಯಾವ ವಿಶ್ವವಿದ್ಯಾಲಯಗಳು ಮುಂದೆ ಬರುತ್ತಿಲ್ಲ. ಬರುವ ದಿನಗಳಲ್ಲಿ ಭರತನಾಟ್ಯ, ಮಕ್ಕಳ ಉತ್ಸವ ಆಯೋಜಿಸುವಂತೆ ತಿಳಿಸಿದರು. 

ನೀನಾಸಂ ಮುಖ್ಯಸ್ಥ ಕೆ.ವಿ.ಅಕ್ಷರ ಉತ್ಸವಕ್ಕೆ ಚಾಲನೆ ನೀಡಿ ಎಲ್ಲ ಕಲಾ ತಂಡಗಳಿಗೆ ಶುಭ ಕೋರಿದರು. ನಾಟಕ ಅಕಾಡೆಮಿ ರಿಜಿಸ್ಟರ್‌ ಡಾ| ಕೆ.ಶೈಲಜಾ ಉಪಸ್ಥಿತರಿದ್ದರು. ಕರ್ನಾಟಕ ನಾಟಕ ಅಕಾಡೆಮಿ ಸದಸ್ಯೆ ಎಂ.ವಿ. ಪ್ರತಿಭಾ ನಿರೂಪಿಸಿದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.