ಮೌಲ್ಯದ ಕಡೆ ಕೊಂಡೊಯ್ಯುವ ರಂಗಭೂಮಿ : ಭಂಡಾರಿ


Team Udayavani, Mar 28, 2021, 8:21 PM IST

ಗಹಗಗ

ಸಾಗರ: ರಂಗಭೂಮಿ ಮನುಷ್ಯನೊಳಗಿನ ಪ್ರೇಕ್ಷಕರನ್ನು ಬದಲಾಯಿಸುತ್ತಾ ಮೌಲ್ಯದ ಕಡೆ ಕೊಂಡೊಯ್ಯುತ್ತದೆ. ಇತರ ಎಲ್ಲ ಮಾಧ್ಯಮಗಳಿಗಿಂತ ರಂಗಭೂಮಿ ಮಾಧ್ಯಮ ಪ್ರೇಕ್ಷಕ ಮತ್ತು ನಟನ ನಡುವೆ ನಿಕಟ ಸಂಪರ್ಕ ಹೊಂದಿದ್ದು, ಕಾಲಕಾಲಕ್ಕೆ ಬದಲಾಗುತ್ತಿರುವ ಮೌಲ್ಯವನ್ನು ಜನರ ಬಳಿಗೆ ಕೊಂಡೊಯ್ಯುವ ಕೆಲಸ ಮಾಡುತ್ತಿದೆ ಎಂದು ರಂಗ ವಿಮರ್ಶಕ ವಿಠ್ಠಲ್‌ ಭಂಡಾರಿ ತಿಳಿಸಿದರು.

ಇಲ್ಲಿನ ಎಸ್‌.ಎನ್‌. ನಗರದ ಭೂಮಿ ರಂಗಮನೆಯಲ್ಲಿ ಶನಿವಾರ ಸ್ಪಂದನ ಸಂಸ್ಥೆ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಂಗಭೂಮಿ ಪ್ರೇಕ್ಷಕರ ಜೊತೆ ನೇರ ಅನುಸಂಧಾನ ಮಾಡುವುದರಿಂದ ಇದು ನೋಡುಗರಿಗೆ ಹೆಚ್ಚು ಆಪ್ತ ಎನಿಸುತ್ತದೆ ಎಂದರು.

ಹಲವು ಬದಲಾವಣೆ, ಚಳುವಳಿಗಳು ಮೊದಲ್ಗೊಳ್ಳುವಲ್ಲಿ ರಂಗಭೂಮಿ ಪ್ರಮುಖ ಪಾತ್ರ ವಹಿಸಿದೆ. ಆಯಾ ಕಾಲ, ನಟ, ಪ್ರೇಕ್ಷಕರ ಮನಸ್ಥಿತಿಗೆ ಅನುಗುಣವಾಗಿ ರಂಗಭೂಮಿ ಬದಲಾಗುತ್ತಾ ಬಂದರೂ ಸತ್ಯದರ್ಶನ ಸಂದರ್ಭದಲ್ಲಿ ಯಾವುದೇ ರಾಜಿ ರಂಗಭೂಮಿ ಮಾಡಿಕೊಂಡಿಲ್ಲ. ಕೊರೊನಾದಂತಹ ಸಂದರ್ಭದಲ್ಲಿ ಸಹ ರಂಗಭೂಮಿ, ರಂಗನಟರು ತಮ್ಮದೇ ಆದ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದಾರೆ. ಇಂತಹ ರಂಗಭೂಮಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ರಂಗ ಸನ್ಮಾನ ಸ್ವೀಕರಿಸಿ ಮಾತನಾಡಿದ ಪರಶುರಾಮ್‌ ಸೂರನಗದ್ದೆ, ಗ್ರಾಮೀಣ ಪ್ರದೇಶದ ಭಾಷೆ, ಪರಿಸರ ಹಾಗೂ ಜನಜೀವನವನ್ನು ರಂಗಭೂಮಿಗೆ ಅಳವಡಿಸಿಕೊಳ್ಳುವ ಪ್ರಯತ್ನವನ್ನು ನಾನು ಮಾಡಿಕೊಂಡು ಬಂದಿದ್ದೇನೆ. ನಾವು ಬದುಕಿನ ಜೊತೆಗೆ ರಂಗಭೂಮಿ ಕಟ್ಟುವ ಕೆಲಸವನ್ನು ಮಾಡುತ್ತಿದ್ದೇವೆ. ರಂಗಭೂಮಿಗೆ ವಿಶೇಷವಾದ ಶಕ್ತಿಯಿದ್ದು ಅದು ವ್ಯಕ್ತಿತ್ವ ವಿಕಸನದ ಜೊತೆಗೆ ಮೌಲ್ಯವನ್ನು ಬಿತ್ತುತ್ತದೆ ಎಂದರು. ವಿಶ್ವರಂಗಭೂಮಿ ದಿನದ ಅಂಗವಾಗಿ ಸೂರನಗದ್ದೆ ಭೀರೇಶ್ವರ ನಾಟ್ಯ ಸಂಘದ ಜೆ. ಪರಶುರಾಮ್‌ ಅವರನ್ನು ಸನ್ಮಾನಿಸಲಾಯಿತು.

ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ರೈತಸಂಘದ ಮಂಜುನಾಥ ಗೌಡ, ಎನ್‌.ಡಿ. ವಸಂತಕುಮಾರ್‌, ಶಿವಾನಂದ ಕುಗ್ವೆ, ಸತೀಶ್‌ ಶೆಣೈ ಇನ್ನಿತರರು ಇದ್ದರು. ಎಂ.ವಿ. ಪ್ರತಿಭಾ ರಾಘವೇಂದ್ರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತೋಷ್‌ ಶೇಟ್‌ ಸನ್ಮಾನಿತರ ಪರಿಚಯ ಮಾಡಿದರು. ಭೂಮಿ ರಂಗಭೂಮಿ ಸಂದೇಶ ಓದಿದರು. ಎಂ.ರಾಘವೇಂದ್ರ ನಿರೂಪಿಸಿದರು. ನಂತರ ನಾಗೇಂದ್ರ ಕುಮಟಾ ಮತ್ತು ಸಂಗಡಿಗರಿಂದ ರಂಗಗೀತೆ ಗಾಯನ ಕಾರ್ಯಕ್ರಮ ನಡೆಯಿತು. ಸ್ಪಂದನ ಸಂಸ್ಥೆ ವತಿಯಿಂದ ಪಿ. ಲಂಕೇಶ್‌ ಮೂಲಕತೆ ಆಧರಿಸಿದ, ಎಂ.ವಿ. ಪ್ರತಿಭಾ ನಿರ್ದೇಶಿಸಿ ರಂಗರೂಪಕ್ಕೆ ತಂದ “ಮುಟ್ಟಿಸಿಕೊಂಡವರು’ ನಾಟಕ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.