ಅನೈತಿಕ ಮೈತ್ರಿ ಹೆಚ್ಚು ದಿನ ಉಳಿಯಲ್ಲ: ಈಶ್ವರಪ್ಪ
Team Udayavani, May 21, 2018, 6:10 AM IST
ಶಿವಮೊಗ್ಗ: “ಮೈತ್ರಿ ಹೆಸರಿನ ಇಂತಹ ಅನೈತಿಕ ಸಂಬಂಧವನ್ನು ರಾಜ್ಯದ ಜನ ಒಪ್ಪೋದಿಲ್ಲ. ಈ ಸರ್ಕಾರ ಎಲ್ಲರ ನಿರೀಕ್ಷೆಗೂ ಮೊದಲೇ ಬಿದ್ದು ಹೋಗಲಿದೆ’ ಎಂದು ಶಾಸಕ ಕೆ. ಎಸ್. ಈಶ್ವರಪ್ಪ ಭವಿಷ್ಯ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನವೇ
ನಿರ್ಗಮಿಸಲು ಕ್ಷಣಗಣನೆ ಆರಂಭಗೊಂಡಿದೆ. ಎಷ್ಟು ದಿನ ಎಂದಷ್ಟೇ ಕಾದು ನೋಡಬೇಕು ಎಂದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರ ನಡೆಸಬೇಕೆಂಬ ಉದ್ದೇಶದಿಂದಲೇ ಜನರು ನಮಗೆ ಮತ ನೀಡಿದ್ದಾರೆ. ಶೀಘ್ರದಲ್ಲಿಯೇ ಮತ್ತೆ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದರು. ರಾಜ್ಯದಲ್ಲಿ ಯಾರೂ ನಿರೀಕ್ಷಿಸದ ಘಟನೆ ನಡೆದು ಹೋಗಿದೆ. ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ಕಡೆಯ ಮುಖ್ಯಮಂತ್ರಿ ಎಂದು ನಾವು ಮೊದಲೇ ಹೇಳಿದ್ದೆವು. ಈ ಮಾತು ಸತ್ಯವಾಗಿದೆ.
ಆದರೆ ಜನರು ತಿರಸ್ಕರಿಸಿದ ಕಾಂಗ್ರೆಸ್ ಜತೆ ಜೆಡಿಎಸ್ ಹಿಂಬಾಗಿಲ ಮೂಲಕ ಕೈಜೋಡಿಸಿ ಸರ್ಕಾರ ರಚಿಸಲು ಮುಂದಾಗಿದೆ. ಇದೊಂದು ಕುಚೋದ್ಯದ ಸಂಗತಿ ಎಂದು ವಿಶ್ಲೇಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್