ಸೊರಬದಲ್ಲಿ ಬರಿದಾದ ಜಲ ಮೂಲ

•ವರದಾ-ದಂಡಾವತಿಯಲ್ಲಿ ನೀರಿನ ಹರಿವಿಲ್ಲದೆ ಕುಡಿವ ನೀರಿಗೆ ಪರದಾಟ

Team Udayavani, Jun 11, 2019, 9:19 AM IST

sm-tdy-1..

ಸೊರಬ ಪಟ್ಟಣದಲ್ಲಿ ದಂಡಾವತಿ ನದಿ ಬರಿದಾಗಿರುವುದು.

ಸೊರಬ: ಬೇಸಿಗೆಯ ಕೆನ್ನಾಲಿಗೆಗೆ ನೀರಿನ ಅಭಾವ ಹೆಚ್ಚುತ್ತಲಿದ್ದು, ತಾಲೂಕಿನಲ್ಲಿ ಹರಿದಿರುವ ಪ್ರಮುಖ ನದಿಗಳಾದ ವರದಾ, ದಂಡಾವತಿ ಸೇರಿ ಜಲ ಮೂಲಗಳು ಬರಿದಾಗ ತೊಡಗಿವೆ. ಇತ್ತ ರೈತಾಪಿ ವರ್ಗ ಮಾತ್ರ ಮುಂಗಾರು ಆಗಮನದ ನಿರೀಕ್ಷೆಯಲ್ಲಿದೆ.

ಏಷ್ಯಾ ಖಂಡದಲ್ಲಿಯೇ ಅತಿ ಹೆಚ್ಚು ಸು. 890 ಕೆರೆಗಳನ್ನು ಹೊಂದಿರುವ ತಾಲೂಕು ಎಂದು ಗುರುತಿಸಲ್ಪಟ್ಟಿದ್ದರೂ, ಬಹುತೇಕ ಕೆರೆಗಳು ಬರಿದಾಗಿವೆ. ಪ್ರಮುಖ ನದಿಗಳಾದ ವರದಾ ಹಾಗೂ ದಂಡಾವತಿಯಲ್ಲಿ ಹನಿ ನೀರಿನ ಹರಿವು ಇಲ್ಲದೇ ನದಿ ತಟದಲ್ಲಿರುವ ಗ್ರಾಮಗಳಲ್ಲೂ ಕುಡಿಯುವ ನೀರಿಗೂ ಸಹ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಅಕ್ರಮ ಪಂಪ್‌ಸೆಟ್ ಹಾವಳಿ: ಕಳೆದ ಫೆಬ್ರವರಿ-ಮಾರ್ಚ್‌ ತಿಂಗಳಿನಲ್ಲಿ ನದಿಗಳಲ್ಲಿ ನೀರಿನ ಕೊರತೆಯ ನಡುವೆಯೂ ಚೆಕ್‌ ಡ್ಯಾಂಗಳ ನಿರ್ಮಾಣದಿಂದ ಕೊಂಚ ನೀರನ್ನು ಸಂಗ್ರಹಿಸಲಾಗಿತ್ತು. ಆದರೆ, ನದಿ ದಡದ ಕೆಲವರು ತಮ್ಮ ವಾಣಿಜ್ಯ ಬೆಳೆಗಳ ರಕ್ಷಣೆಗಾಗಿ ನದಿ ನೀರನ್ನು ಎತೇಚ್ಛವಾಗಿ ಬಳಸಿದ್ದರ ಪರಿಣಾಮ ನದಿಗಳಲ್ಲಿ ನೀರೇ ಇಲ್ಲದಂತಾಗಿದೆ. ಸಂಬಂಧಪಟ್ಟ ಅಧಿಕಾರಿ ವಾಣಿಜ್ಯ ಬೆಳೆಗಾರರೊಂದಿಗೆ ಶಾಮೀಲಾಗಿ ಅಕ್ರಮವಾಗಿ ಪಂಪ್‌ ಸೆಂಟ್ ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಿದ್ದಾರೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ.

ವನ್ಯ ಜೀವಿಗಳ ರೋಧನೆ: ಕುಡಿಯುವ ನೀರಿನ ತೀವ್ರ ಅಭಾವವಿರುವ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಿಗೆ ಸ್ಥಳೀಯ ಆಡಳಿತಗಳು ಟ್ಯಾಂಕರ್‌ ಮೂಲಕ ನೀರನ್ನು ಪೂರೈಸಬಹುದು. ಆದರೆ, ವನ್ಯ ಜೀವಿಗಳ ರೋಧನ ಕೇಳುವವರೇ ಇಲ್ಲದಂತಾಗಿದೆ. ಈ ಹಿಂದೆ ಅರಣ್ಯ ದಂಚಿನ ಪ್ರದೇಶಗಳಲ್ಲಿ ನೀರಿನ ತೊಟ್ಟಿಗಳನ್ನು ನಿರ್ಮಿಸಿ ವನ್ಯ ಜೀವಿಗಳ ದಾಹವನ್ನು ತಣಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿತ್ತು. ಈ ಭಾರಿ ಬಿರು ಬೇಸಿಗೆಯ ಸಂದರ್ಭದಲ್ಲೂ ವನ್ಯ ಜೀವಿಗಳಿಗೆ ನೀರುಣಿಸಲು ಕ್ರಮ ಕೈಗೊಳ್ಳದಿರುವುದು ಅರಣ್ಯ ಇಲಾಖೆಯ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ ಎಂದು ಪರಿಸರ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ವಾಡಿಕೆ ಮಳೆಯಲ್ಲಿ ಕುಂಠಿತ: ತಾಲೂಕಿನಲ್ಲಿ ರೈತಾಪಿ ವರ್ಗ ಮುಂಗಾರು ಆಗಮನದ ನಿರೀಕ್ಷೆಯಲ್ಲಿದ್ದು, ತಮ್ಮ ಕೃಷಿ ಚಟುವಟಿಕೆಗೆ ಅಣಿಯಾಗುತ್ತಿದ್ದಾರೆ. ಆದರೇ, ವರುಣ ಮಾತ್ರ ಕೃಪೆ ತೋರುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ತಾಲೂಕಿನ ಏಪ್ರಿಲ್ ತಿಂಗಳಲ್ಲಿ ವಾಡಿಕೆ ಮಳೆ ಪ್ರಮಾಣ 35 ಮೀ ಆಗಿದ್ದು, 2018ರಲ್ಲಿ 33 ಮೀ.ಮೀ ಮಳೆಯಾಗಿತ್ತು. ಆದರೆ, ಪ್ರಸಕ್ತ ವರ್ಷ 27.4ರಷ್ಟು ಮಳೆಯಾಗಿದೆ. ಉಳಿದಂತೆ ಮೇ ತಿಂಗಳಲ್ಲಿ 81 ಮೀ.ಮೀ ಮಳೆಯಾಗಬೇಕು. 2018ರಲ್ಲಿ 102 ಮೀ.ಮೀ ಮಳೆಯಾಗಿರುವುದು ದಾಖಲೆಯಾಗಿದೆ. ಈ ಬಾರಿ 0.4ರಷ್ಟು ಮಾತ್ರ ಮಳೆಯಾಗಿರುವುದು ಚಿಂತೆಗೀಡು ಮಾಡುವಂತಾಗಿದೆ. ಜೂನ್‌ ತಿಂಗಳಲ್ಲಿ 337 ಮೀ.ಮೀ ವಾಡಿಕೆ ಮಳೆಯಾಗಬೇಕಿದ್ದು, 2018ರಲ್ಲಿ 302ಮೀ.ಮೀ ಮಳೆಯಾಗಿದೆ. ಈ ಬಾರಿ ಜೂ. 7ರವರೆಗೆ ಮಳೆಯ ಕೊರತೆ ಮುಂದುವರಿದಿದೆ ಎಂಬುದು ಕೃಷಿ ಇಲಾಖೆಯ ಮಳೆ ಪ್ರಮಾಣದ ಅಂಕಿ ಅಂಶಗಳಿಂದ ತಿಳಿದು ಬರುತ್ತದೆ.

ಒಟ್ಟಾರೆ ತಾಲೂಕಿನಲ್ಲಿ ಪೂರ್ವ ಮುಂಗಾರು ಸಂಪೂರ್ಣವಾಗಿ ಕೈ ಕೊಟ್ಟಿದ್ದು, ಮುಂಬರುವ ದಿನಗಳಲ್ಲಿ ಉತ್ತಮ ಮಳೆ ಬೆಳೆಯಾಗಲಿ, ಬರಿದಾಗಿರುವ ಜಲ ಮೂಲಗಳು ಭರ್ತಿಯಾಗಲಿ. ಈ ನಿಟ್ಟಿನಲ್ಲಿ ವರಣ ದೇವ ಕೃಪೆ ತೋರಬೇಕಿದೆ.

•ಎಚ್.ಕೆ.ಬಿ. ಸ್ವಾಮಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.