ಹಣಗೆರೆಯ ಲಾಡ್ಜ್ ನಲ್ಲಿ ಯುವತಿಯ ಕತ್ತು ಸೀಳಿ ಕೊಲೆ ! ಪೊಲೀಸರು ದೌಡು
Team Udayavani, Apr 3, 2024, 10:15 PM IST
ತೀರ್ಥಹಳ್ಳಿ : ತಾಲೂಕಿನ ಹಣಗೆರೆಕಟ್ಟೆಯ ಭೂತರಾಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್ ಒಂದರಲ್ಲಿ ಯುವತಿಯೊಬ್ಬಳ ಹತ್ಯೆಯಾಗಿದೆ. ಲಾಡ್ಜ್ ಕೋಣೆಯೊಳಗೆ ಅಂದಾಜು 30 ವರ್ಷದೊಳಗಿನ ಯುವತಿಯೊಬ್ಬಳನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ.
ಲಾಡ್ಜ್ ನಂತೆ ಇರುವ ಮನೆಯಲ್ಲಿ 10 ರೂಮ್ ಗಳಿದ್ದು ಅದರಲ್ಲಿ ಸೋಮವಾರ ರಾತ್ರಿ ಬೈಕ್ ನಲ್ಲಿ ಬಂದಿದ್ದ ಯುವಕ ಹಾಗೂ ಯುವತಿ ಬಂದು ಕೇಳಿದಾಗ ಬಾಡಿಗೆಗೆ ರೂಮನ್ನು ನೀಡಲಾಗಿದೆ. ಎಂದು ಲಾಡ್ಜ್ ಕೆಲಸದವರು ತಿಳಿಸಿದ್ದಾರೆ.
ವಾಪಾಸ್ ಆಗುವಾಗ ಆ ವ್ಯಕ್ತಿ ಮಾತ್ರ ಹೋಗಿದ್ದಾನೆ. ಬುಧವಾರ ಸಂಜೆ ಕೆಲಸದವರು ನೋಡುವಾಗ ಹತ್ಯೆಯಾಗಿರುವುದು ತಿಳಿದು ಬಂದಿದೆ. ರೂಮನ್ನು ನೀಡುವಾಗ ಯಾವುದೇ ರೀತಿ ಸಂಬಂಧಪಟ್ಟ ದಾಖಲೆ ತೆಗೆದುಕೊಂಡಿಲ್ಲ ಎಂದು ಪೋಲೀಸರ ಬಳಿ ಕೆಲಸದವರು ಹೇಳುತ್ತಿದ್ದು ತೀರ್ಥಹಳ್ಳಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಫಾರೆನ್ಸಿಕ್ ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾಳೂರು ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಕೊಳವೆ ಬಾವಿಗೆ ಬಿದ್ದು 16 ಅಡಿ ಆಳದಲ್ಲಿ ಸಿಲುಕಿರುವ ಮಗು: ರಕ್ಷಣಾ ಕಾರ್ಯಾಚರಣೆ ಚುರುಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…