ಸಾಗರ: ಹಾಡುಹಗಲೇ ಮನೆ ಕಳ್ಳತನ
Team Udayavani, Nov 3, 2021, 4:40 PM IST
ಸಾಂದರ್ಭಿಕ ಚಿತ್ರ
ಸಾಗರ: ಇಲ್ಲಿನ ಬೆಳಲಮಕ್ಕಿ ಸಮೀಪದ ಬಾಪಟ್ ಕಲ್ಯಾಣ ಮಂಟಪದ ಹಿಂಭಾಗದ ಕಮಲಾಕರ ಎಂಬುವವರ ಮನೆಯ ಹೆಂಚು ತೆಗೆದು ಹಾಡುಹಗಲೇ ನಗನಾಣ್ಯ ದೋಚಿದ ಘಟನೆ ಮಂಗಳವಾರ ನಡೆದಿದೆ.
ಕಮಲಾಕರ ಮತ್ತವರ ಕುಟುಂಬದವರು ಮನೆಯಲ್ಲಿ ಇಲ್ಲದ ಸಮಯವನ್ನು ನೋಡಿಕೊಂಡ ಕಳ್ಳರು ಮಧ್ಯಾಹ್ನ 1-30 ರಿಂದ 2-30ರ ಸುಮಾರಿಗೆ ಮನೆಯ ಮೇಲ್ಭಾಗದ ಹೆಂಚು ತೆಗೆದು ಕೆಳಗೆ ಇಳಿದಿದ್ದಾರೆ. ಮನೆಯಲ್ಲಿದ್ದ ಕಬ್ಬಿಣದ ಬೀರು ಬಾಗಿಲು ಒಡೆದು 9.50 ಲಕ್ಷ ರೂ. ಮೌಲ್ಯದ 239 ಗ್ರಾಂ ಬಂಗಾರದ ಆಭರಣ, 59500 ರೂಪಾಯಿ ನಗದು ಕಳ್ಳತನ ಮಾಡಿದ್ದಾರೆ.
ಕಳ್ಳತನ ಮಾಡಿಕೊಂಡು ಹೋಗುವಾಗ ಮನೆಯ ಹೊರಗೆ ನಿಲ್ಲಿಸಿದ್ದ ಸುಮಾರು 30 ಸಾವಿರ ರೂಪಾಯಿ ಮೌಲ್ಯದ ಬೈಕನ್ನು ಸಹ ಕಳ್ಳರು ಹೊತ್ತೊಯ್ದಿದ್ದಾರೆ.
ಕಮಲಾಕರ ಅವರು ಬುಧವಾರ ನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ. ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ
Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ