ಸಾಗರ ಪೇಟೆ ಪೋಲೀಸರ ಭರ್ಜರಿ ಕಾರ್ಯಾಚರಣೆ,7 ಬೈಕ್ ಸಹಿತ ಕಾರು ಕಳ್ಳ ಬಂಧನ
Team Udayavani, Dec 3, 2019, 11:25 AM IST
ಶಿವಮೊಗ್ಗ: ಸಾಗರ ತಾಲೂಕಿನ ಪೇಟೆ ಪೋಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಸಾಗರ, ಶಿವಮೊಗ್ಗ ವ್ಯಾಪ್ತಿಯ ಹಲವು ಬೈಕ್ ಕಳ್ಳತನ ಪ್ರಕರಣಗಳು ಪತ್ತೆಯಾಗಿದೆ.
ಇಂದು ಬೆಳಗ್ಗಿನ ಜಾವ ವರದಹಳ್ಳಿ ಸರ್ಕಲ್ ಬಳಿ ವಾಹನ ತಪಾಸಣೆ ವೇಳೆ ಅನುಮಾನದ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿಗಳು ತಾಜುದ್ಧೀನ್ (22), ಅರ್ಷದ್ (28) ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಶಿವಮೊಗ್ಗದ ನಿವಾಸಿಗಳಾಗಿದ್ದಾರೆ.
ಆರೋಪಿಗಳಿಂದ ಸಾಗರ ವ್ಯಾಪ್ತಿಯಲ್ಲಿ 1 ಕಾರು 3 ಬೈಕ್ ಕಳ್ಳತನ, ಶಿವಮೊಗ್ಗ ವ್ಯಾಪ್ತಿಯಲ್ಲಿ 4 ಬೈಕ್ ಕಳ್ಳತನ ಪ್ರಕರಣ ಪತ್ತೆಯಾಗಿದೆ.
ಒಟ್ಟು 8 ಪ್ರಕರಣಗಳು 16,40,000 ರೂ.ಮೌಲ್ಯದ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಚ್.ಟಿ ಶೇಖರ್ ಇವರ ಮಾರ್ಗದರ್ಶನದಲ್ಲಿ, ಸಾಗರ ಸಹಾಯಕ ಪೊಲೀಸ್ ಅಧೀಕ್ಷಕ ಯತೀಶ್ ಸೂಚನೆಯಂತೆ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು.
ಕಾರ್ಯಾಚರಣೆಯಲ್ಲಿ ಪೇಟೆ ಪೋಲೀಸ್ ಇನ್ಸ್ ಪೆಕ್ಟರ್ ಮಹಾಬಲೇಶ್ವರ್, ಪಿಎಸ್ಐ ಸಾಗರ್ಕರ್, ಪ್ರೋಪೇಷನರಿ ಪಿಎಸ್ಐ ಯಲ್ಲಪ್ಪ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಕಾಳಾನಾಯ್ಕ್, ಸಂತೋಷ್, ವಿಶ್ವನಾಥ್, ಮಲ್ಲೇಶ್, ಶ್ರೀಧರ್, ಸನಾವುಲ್ಲಾ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು