Theft Case: ಶೃಂಗೇರಿಯಲ್ಲಿ ಕಳ್ಳರನ್ನು ಬಂಧಿಸಿದ ತೀರ್ಥಹಳ್ಳಿ ಪೊಲೀಸರು !
ಕುರುವಳ್ಳಿಯಲ್ಲಿ ಹಣ ಕದ್ದು ಪರಾರಿಯಾಗಿದ್ದ ಕಳ್ಳರ ಬಂಧನ!
Team Udayavani, Feb 23, 2024, 11:22 AM IST
ತೀರ್ಥಹಳ್ಳಿ: ಪಟ್ಟಣದ ಕುರುವಳ್ಳಿಯ ಟ್ರೇಡರ್ಸ್ ವೊಂದರಲ್ಲಿ 2.50 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಕಾರು ಸಮೇತ ಶೃಂಗೇರಿಯಲ್ಲಿ ಸೆರೆ ಹಿಡಿಯಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ಮಹಮ್ಮದ್ ಶಾದು(24), ಜೆಶಾನ್ (17), ಜಮ್ಮಿದ್ (23) ಬಂಧಿತ ಆರೋಪಿಗಳು.
ತೀರ್ಥಹಳ್ಳಿಯ ಕುರುವಳ್ಳಿಯಲ್ಲಿ ಟೇಬಲ್ ರಾಡ್ ಬಳಸಿ 2.5 ಸಾವಿರ ರೂ. ಕ್ಷಣ ಮಾತ್ರದಲ್ಲಿ ಕದ್ದು ಪರಾರಿಯಾದ ಕಳ್ಳರನ್ನು ಪೊಲೀಸರ ಮಿಂಚಿನ ಕಾರ್ಯಾಚರಣೆ ಮೂಲಕ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಯಿತು.
ಆರೋಪಿಗಳನ್ನು ತೀರ್ಥಹಳ್ಳಿಯ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ದಫೆದಾರ್ ಪುನೀತ್, ದೀಪಕ್ ಗೌಡ ಮತ್ತು ತಂಡದವರು ಕೆಲವೇ ಗಂಟೆಗಳಲ್ಲಿ ಶೃಂಗೇರಿಯ ಬಳಿ ಬಂಧಿಸಿದ್ದು, ತೀರ್ಥಹಳ್ಳಿ ಪೊಲೀಸ್ ಇಲಾಖೆಯ ಮಿಂಚಿನ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು