![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಹೊಟೇಲ್ಗೂ ಬಂತು “ಲೇಡಿ” ರೋಬೋ ಸೇವೆ!
Team Udayavani, May 10, 2019, 12:26 PM IST
![Robo](https://www.udayavani.com/wp-content/uploads/2019/05/Robo-620x341.jpg)
ಗ್ರಾಹಕರಿಗೆ ತಿಂಡಿ ನೀಡುವ ಲೇಡಿ ರೋಬೋಟ್
ಶಿವಮೊಗ್ಗ: ಇಲ್ಲಿನ ವಿನೋಬನಗರದ ಪೊಲೀಸ್ ಚೌಕಿ ಬಳಿ ಇರುವ “ಉಪಹಾರ ದರ್ಶಿನಿ’ಯಲ್ಲಿ ಬೆಳಗ್ಗೆ ತಿಂಡಿ ತಿನ್ನಲೆಂದು ಬಂದವರಿಗೆ ಆಶ್ಚರ್ಯ ಕಾದಿತ್ತು. ತಮಗೆ ಬೇಕಾದ ತಿಂಡಿ ಆರ್ಡರ್ ಮಾಡಿ ಕೂತ ಕೆಲವೇ ಹೊತ್ತಿನಲ್ಲಿ ಇಂಗ್ಲಿಷ್ನಲ್ಲಿ ಗುಡ್ಮಾರ್ನಿಂಗ್ ಹೇಳುತ್ತಾ ಯುವತಿ ರೂಪದ ರೋಬೋಟ್ ಒಂದು ಟೇಬಲ್ ಬಳಿ ನಿಂತು, ತೆಗೆದುಕೊಳ್ಳಿ ಎಂದಾಗ ಗಾಬರಿ. ಬಳಿಕ ನಿಧಾನವಾಗಿ ಇಲ್ಲಿನ ವ್ಯವಸ್ಥೆ ಅರ್ಥವಾಗಿತ್ತು. ಹೌದು. ಇಲ್ಲಿನ ಉಪಹಾರ ದರ್ಶಿನಿಯಲ್ಲಿ
ಜಿಲ್ಲೆಯಲ್ಲೇ ಮೊದಲ ಬಾರಿಗೆ ಗ್ರಾಹಕರಿಗೆ ಸೇವೆ ನೀಡಲು ರೋಬೋ ಸಹಾಯ ಪಡೆದಿದ್ದು,
ಇದು ನಗರದಲ್ಲಿ ಮನೆಮಾತಾಗಿದೆ.
ಶಿವಮೊಗ್ಗದ ಹೊಟೇಲ್ಗಳು ಇದೀಗ ಹೈಟೆಕ್ ಮಾದರಿಯತ್ತ ಹೊರಳುವ ಸೂಚನೆಯನ್ನು ನೀಡಿವೆ. ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಇಂತಹ ರೋಟೋಟ್ ಕಾರ್ಯಾರಂಭ ಮಾಡಿದೆ ಎನ್ನುತ್ತಾರೆ ದರ್ಶಿನಿ ಮಾಲೀಕರು. ಹೋಟೆಲ್ನಲ್ಲಿ ರೋಬೊ ತಿಂಡಿ ಸಪ್ಲೈ ಮಾಡುತ್ತಿರುವ ವಿಷಯ ಕೆಲವೇ ಹೊತ್ತಿನಲ್ಲಿ ಕಾಳ್ಗಿಚ್ಚಿನಂತೆ ಹರಡಿತ್ತು. ಹೀಗಾಗಿ ಹೊಟೇಲ್ ತುಂಬಾ ಜನವೋ ಜನ. ರೋಟೋಟ್ ಕೆಲಸ ನೋಡಲೆಂದು, ರೋಟೋಟ್ನಿಂದ ತಿಂಡಿ ತರಿಸಿಕೊಳ್ಳಲೆಂದು ನೂರಾರು ಜನ ಧಾವಿಸಿದರು. ಇದನ್ನು ನಿರೀಕ್ಷಿಸದೆ ಇದ್ದ ದರ್ಶಿನಿ ಮಾಲೀಕ ರಾಘವೇಂದ್ರ ಅವರು ರೋಟೋಟ್ ಕಾರ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಿದರು.
“ಪ್ರಾಯೋಗಿಕವಾಗಿ ಈ ಸೇವೆ ಆರಂಭಿಸಲಾಗಿದೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಇದಕ್ಕೆ ಚಾಲನೆ ನೀಡಲಾಗುವುದು. ಸುಮಾರು 5.30 ಲಕ್ಷ ರೂ. ನೀಡಿ ಈ ರೋಟೋಟ್ ತಂದಿದ್ದು, ರಾಜ್ಯದಲ್ಲಿಯೇ ಮೊದಲ ಬಾರಿಗೆ ಹೊಟೇಲ್ ಒಂದರಲ್ಲಿ ಈ ರೀತಿಯ ರೋಬೋಟ್ ಅಳವಡಿಸಲಾಗಿದೆ. ಬೆಳಗ್ಗೆ 12 ರಿಂದ 4 ಗಂಟೆ ಮತ್ತು ರಾತ್ರಿ 7 ರಿಂದ 10 ಗಂಟೆಯವರೆಗೆ
ರೋಬೋಟ್ ಸರ್ವೀಸ್, ಇರುತ್ತದೆ’ ಎನ್ನುತ್ತಾರೆ.
ಎರಡು ವರ್ಷಗಳ ಹಿಂದೆ ಇಲ್ಲಿ ಆರಂಭಗೊಂಡ ಉಪಾಹಾರ ದರ್ಶಿನಿ ಈಗಾಗಲೇ ಜನಪ್ರಿಯಗೊಂಡಿದೆ. ಇದೀಗ ಇದರ ಮೊದಲ ಮಹಡಿಯಲ್ಲಿ ಉತ್ತರ ಭಾರತೀಯ ತಿಂಡಿಯ ವ್ಯವಸ್ಥೆ ಮಾಡಲಾಗಿದ್ದು, “ಇಲ್ಲಿ ಮಾತ್ರ ಈ ರೋಬೋಟ್ ಕಾರ್ಯ ನಿರ್ವಹಿಸಲಿದೆ’ ಎಂದು ಹೇಳಿದರು.
ಗ್ರಾಹಕರಿಗೆ ಬೇಕಾದ ತಿಂಡಿಯ ಆರ್ಡರ್ ಪಡೆದು ಕೌಂಟರ್ಗೆ ಕೊಟ್ಟ ಬಳಿಕ ತಿಂಡಿಯನ್ನು ಸಿದ್ಧಗೊಳಿಸಿ ರೋಬೋಟ್ ಕೈಯಲ್ಲಿ ಇರುವ ತಟ್ಟೆಯ ಮೇಲೆ ಇಡಲಾಗುತ್ತದೆ. ಬಳಿಕ ನಿರ್ದಿಷ್ಟ ಟೇಬಲ್ ಸಂಖ್ಯೆಯನ್ನು ಒತ್ತಿದಾಗ ರೋಬೋಟ್ ಆ ಟೇಬಲ್ ಬಳಿಗೆ ಹೋಗಿ, ಗ್ರಾಹಕರಿಗೆ ಶುಭ ಕೋರುತ್ತಾ, ತೆಗೆದುಕೊಳ್ಳುವಂತೆ ವಿನಂತಿಸುತ್ತದೆ. ಇದರ ಸಂಪೂರ್ಣ ನಿಯಂತ್ರಣ ನಿಯಂತ್ರಕರ ಕೈಯಲ್ಲಿ ಇರಲಿದೆ.
*ರಾಜ್ಯದಲ್ಲೇ ಮೊದಲ ಬಾರಿ ಹೊಟೇಲ್ ನಲ್ಲಿ ರೋಬೋಟ್ ಕಾರ್ಯಾರಂಭ.
* ಯುವತಿ ರೂಪದ ರೋಬೋ ಸೇವೆ ನೋಡಲು ಮುಗಿ ಬಿದ್ದ ಜನ
* ತಾತ್ಕಾಲಿಕವಾಗಿ ಸೇವೆ ಸ್ಥಗಿತಗೊಳಿಸಿದ ಮಾಲೀಕರು
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-sasdas](https://www.udayavani.com/wp-content/uploads/2024/07/1-sasdas-150x80.jpg)
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
![1-sffdsfsd](https://www.udayavani.com/wp-content/uploads/2024/07/1-sffdsfsd-150x89.jpg)
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
![rain](https://www.udayavani.com/wp-content/uploads/2024/07/rain-25-150x103.jpg)
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
![1-tir-a](https://www.udayavani.com/wp-content/uploads/2024/07/1-tir-a-150x90.jpg)
NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.