ಜೈಲಿನಲ್ಲಿದ್ದುಕೊಂಡೇ ಉದ್ಯಮಿಗೆ ಬೆದರಿಕೆ ಕರೆ: ರೌಡಿಶೀಟರ್ ಬಚ್ಚನ್ ಸೆಲ್ ಗೆ ಪೊಲೀಸರ ದಾಳಿ
Team Udayavani, Jan 27, 2022, 3:13 PM IST
ಶಿವಮೊಗ್ಗ: ಜೈಲಿನಲ್ಲಿದ್ದುಕೊಂಡು ಉದ್ಯಮಿಗೆ ಬೆದರಿಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ರೌಡಿಶೀಟರ್ ಬಚ್ಚನ್ ಗೆ ಸೇರಿದ ಮೊಬೈಲ್ ವಶಕ್ಕೆ ಪಡೆದಿದ್ದಾರೆ.
ಸಿಇಎನ್ ಠಾಣೆ ಸಿಪಿಐ ಹಾಗೂ ತುಂಗಾನಗರ ಠಾಣೆ ಪ್ರಭಾರ ಸಿಪಿಐ ಕೆ.ಟಿ.ಗುರುರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೌಡಿಶೀಟರ್ ಬಚ್ಚನ್ ಬಳಿ ಇದ್ದ ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ರೌಡಿ ಬಚ್ಚನ್ ನನ್ನು ಪ್ರತ್ಯೇಕ ಕೋಣೆಯಲ್ಲಿಟ್ಟು ನಿಗಾ ವಹಿಸಲು ಬಂಧಿಖಾನೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ
ದರೋಡೆ, ಅಪಹರಣ ಸೇರಿದಂತೆ ವಿವಿಧ ಪ್ರಕರಣಗಳಡಿ ಅರೆಸ್ಟ್ ಅಗಿ ಜೈಲಿನಲ್ಲಿರುವ ರೌಡಿ ಬಚ್ಚನ್ ಜೈಲಿನಲ್ಲಿದ್ದುಕೊಂಡು ಉದ್ಯಮಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ್ದ. ಕಳೆದ ಜನವರಿ 23 ರಂದು ಶಿವಮೊಗ್ಗದ ಮದಾರಿಪಾಳ್ಯದ ನಾಸೀರ್ ಖಾನ್ ಎಂಬ ಉದ್ಯಮಿಗೆ ಬೆದರಿಕೆ ಹಾಕಿದ್ದ ಬಚ್ಚನ್, ಕೇಳಿದಷ್ಟು ಹಣ ನೀಡದಿದ್ದರೆ, ಕೊಲೆ ಮಾಡುವದಾಗಿ ಬೆದರಿಕೆ ಹಾಕಿದ್ದ.
ಕಳೆದ ಅಕ್ಟೋಬರ್ ನಲ್ಲಿ ಕರೆ ಮಾಡಿ, ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಬಚ್ಚನ್, ಜೊತೆಗೆ ಉದ್ಯಮಿಯ ಮನೆಯ ಬಳಿ ಬೆಂಬಲಿಗರನ್ನು ಕಳುಹಿಸಿ, ಗಲಾಟೆ ಮಾಡಿಸಿದ್ದ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಕೆ.ಟಿ.ಗುರುರಾಜ್ ನೇತೃತ್ವದಲ್ಲಿ ಇಂದು ಜೈಲಿಗೆ ದಾಳಿ ನಡೆಸಿ ಬಚ್ಚನ್ ನ ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೊರಬ : ಎಸ್ಸೆಸ್ಸೆಲ್ಸಿ ಯಲ್ಲಿ ಸಮಾನ ಅಂಕ ಗಳಿಸುವ ಮೂಲಕ ಗಮನ ಸೆಳೆದ ಅವಳಿ ಸಹೋದರಿಯರು
ಮಳೆಯಿಂದ ಬೆಳೆ ನಷ್ಟ: ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು; ಮಾಜಿ ಶಾಸಕ ಮಧು ಬಂಗಾರಪ್ಪ
ಸಾಗರ: ನೆಡುತೋಪು ಕಾವಲು ಕಾಯುತ್ತಿದ್ದವನಿಂದಲೇ ಪ್ಲಾಂಟೇಶನ್ನಿಂದ ಮರ ಕಳ್ಳತನ; ಆರೋಪಿಗಳ ಬಂಧನ
ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಅವಾಂತರ ತಪ್ಪಿಸಲು ಮನವಿ
ತೀರ್ಥಹಳ್ಳಿ: ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಪೊಲೀಸರ ದಾಳಿ
MUST WATCH
ಹೊಸ ಸೇರ್ಪಡೆ
ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ
ಬಿಜೆಪಿ ನಾಯಕರಲ್ಲಿ ಭಿನ್ನಮತ ಇಲ್ಲ: ಪ್ರಹ್ಲಾದ ಜೋಷಿ
Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್ ರೆಕಗ್ನಿಷನ್ ಇನ್ನು ಅಧಿಕೃತ ಪುರಾವೆ
ತಮ್ಮ ಜನ್ಮ ದಿನಾಂಕವನ್ನೇ ಬದಲಾಯಿಸಿಕೊಂಡ ಕಾಂಬೋಡಿಯಾ ಪ್ರಧಾನಿ : ಅಸಲಿ ಕಾರಣ ಇಲ್ಲಿದೆ
ಶಿರಾಡಿಯಲ್ಲಿ ಸುರಂಗ ಮಾರ್ಗ ಅನುಷ್ಠಾನದ ಗುರಿ: ಪುತ್ತೂರಿನಲ್ಲಿ ಡಿ.ವಿ. ಸದಾನಂದ ಗೌಡ