ಜೈಲಿನಲ್ಲಿದ್ದುಕೊಂಡೇ ಉದ್ಯಮಿಗೆ ಬೆದರಿಕೆ ಕರೆ: ರೌಡಿಶೀಟರ್ ಬಚ್ಚನ್ ಸೆಲ್ ಗೆ ಪೊಲೀಸರ ದಾಳಿ
Team Udayavani, Jan 27, 2022, 3:13 PM IST
ಶಿವಮೊಗ್ಗ: ಜೈಲಿನಲ್ಲಿದ್ದುಕೊಂಡು ಉದ್ಯಮಿಗೆ ಬೆದರಿಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ರೌಡಿಶೀಟರ್ ಬಚ್ಚನ್ ಗೆ ಸೇರಿದ ಮೊಬೈಲ್ ವಶಕ್ಕೆ ಪಡೆದಿದ್ದಾರೆ.
ಸಿಇಎನ್ ಠಾಣೆ ಸಿಪಿಐ ಹಾಗೂ ತುಂಗಾನಗರ ಠಾಣೆ ಪ್ರಭಾರ ಸಿಪಿಐ ಕೆ.ಟಿ.ಗುರುರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೌಡಿಶೀಟರ್ ಬಚ್ಚನ್ ಬಳಿ ಇದ್ದ ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ರೌಡಿ ಬಚ್ಚನ್ ನನ್ನು ಪ್ರತ್ಯೇಕ ಕೋಣೆಯಲ್ಲಿಟ್ಟು ನಿಗಾ ವಹಿಸಲು ಬಂಧಿಖಾನೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ
ದರೋಡೆ, ಅಪಹರಣ ಸೇರಿದಂತೆ ವಿವಿಧ ಪ್ರಕರಣಗಳಡಿ ಅರೆಸ್ಟ್ ಅಗಿ ಜೈಲಿನಲ್ಲಿರುವ ರೌಡಿ ಬಚ್ಚನ್ ಜೈಲಿನಲ್ಲಿದ್ದುಕೊಂಡು ಉದ್ಯಮಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ್ದ. ಕಳೆದ ಜನವರಿ 23 ರಂದು ಶಿವಮೊಗ್ಗದ ಮದಾರಿಪಾಳ್ಯದ ನಾಸೀರ್ ಖಾನ್ ಎಂಬ ಉದ್ಯಮಿಗೆ ಬೆದರಿಕೆ ಹಾಕಿದ್ದ ಬಚ್ಚನ್, ಕೇಳಿದಷ್ಟು ಹಣ ನೀಡದಿದ್ದರೆ, ಕೊಲೆ ಮಾಡುವದಾಗಿ ಬೆದರಿಕೆ ಹಾಕಿದ್ದ.
ಕಳೆದ ಅಕ್ಟೋಬರ್ ನಲ್ಲಿ ಕರೆ ಮಾಡಿ, ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಬಚ್ಚನ್, ಜೊತೆಗೆ ಉದ್ಯಮಿಯ ಮನೆಯ ಬಳಿ ಬೆಂಬಲಿಗರನ್ನು ಕಳುಹಿಸಿ, ಗಲಾಟೆ ಮಾಡಿಸಿದ್ದ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಕೆ.ಟಿ.ಗುರುರಾಜ್ ನೇತೃತ್ವದಲ್ಲಿ ಇಂದು ಜೈಲಿಗೆ ದಾಳಿ ನಡೆಸಿ ಬಚ್ಚನ್ ನ ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್