ಸಾಗರ ಹಲ್ಲೆ ಯತ್ನ ಪ್ರಕರಣದಲ್ಲಿ ಮೂವರು ವಶಕ್ಕೆ; ತಂಗಿಯನ್ನು ಚುಡಾಯಿಸಿದ್ದಕ್ಕೆ ಮಚ್ಚು ಬೀಸಿದೆ ಎಂದ ಆರೋಪಿ
Team Udayavani, Jan 10, 2023, 12:14 PM IST
ಶಿವಮೊಗ್ಗ: ಸಾಗರ ಪಟ್ಟಣದ ಭಜರಂಗದಳದ ಸಹ ಸಂಚಾಲಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸಮೀರ್ (ಎ1), ಇಮಿಯಾನ್ ಹಾಗೂ ಮನ್ಸೂರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಹಲ್ಲೆ ಪ್ರಕರಣದ A1 ಆರೋಪಿ ಸಮೀರ್ ಎಂಬಾತನ ತಂಗಿಯನ್ನು ಸುನೀಲ್ ನಾಲ್ಕೈದು ತಿಂಗಳಿನಿಂದ ಚುಡಾಯಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವುದಾಗಿ ತನಿಖೆ ವೇಳೆ ಆರೋಪಿ ತಿಳಿಸಿದ್ದಾನೆ ಎಂದು ಮಾಹಿತಿ ನೀಡಿದರು.
ತಂಗಿಯನ್ನು ಚುಡಾಯಿಸುತ್ತಿರುವ ಬಗ್ಗೆ ಸುನೀಲ್ ಗೆ ಸಮೀರ್ ಎಚ್ಚರಿಕೆ ನೀಡಿದ್ದ. ಅಲ್ಲದೇ ತಂಗಿಯ ನಂಬರ್ ಕೊಡು ಅಂತ ಸಮೀರ್ ಗೆ ಸುನೀಲ್ ಕೇಳಿದ್ದ. ಹಲವು ಬಾರಿ ಎಚ್ಚರಿಕೆ ನೀಡಿದರೂ ಚುಡಾಯಿಸಿರುವುದು ನಿಲ್ಲಿಸಿರಲಿಲ್ಲ. ಅದರಂತೆಯೇ ಸೋಮವಾರ ಬೈಕ್ ನಲ್ಲಿ ಬರುತ್ತಿದ್ದ ಸಮೀರ್ ನನ್ನು ಸುನೀಲ್ ರೇಗಿಸಿದ್ದ ಹಾಗಾಗಿ ಕುಪಿತಗೊಂಡ ಸಮೀರ್ ತನ್ನ ಬೈಕಿನಲ್ಲಿದ್ದ ಮಚ್ಚು ತೆಗೆದುಕೊಂಡು ಹಲ್ಲೆಗೆ ಯತ್ನಿಸಿರುವುದಾಗಿ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.
ಇದನ್ನೂ ಓದಿ:ಸ್ಯಾಂಟ್ರೋ ರವಿ ಕೇಸ್: ಕಾಟನ್ಪೇಟೆ ಠಾಣೆ ಈ ಹಿಂದಿನ ಪೊಲೀಸ್ ಇನ್ಸ್ ಪೆಕ್ಟರ್ ತಲೆದಂಡ?
ಹಾಗೂ ಸಮೀರನು ಕುರಿಗಾಹಿ ಯುವಕನಾಗಿರುವ ಕಾರಣ ಎಂದಿನಂತೆ ಕುರಿಗಳಿಗೆ ಸೊಪ್ಪು ತರಲು ಬೈಕಿನಲ್ಲಿ ಮಚ್ಚನ್ನು ಇಟ್ಟುಕೊಂಡಿದ್ದ.ಆ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ತಿಳಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ನ ಸ್ನೇಹಿತರಾದ ಇಮಿಯಾನ್ ಮತ್ತು ಮನ್ಸೂರ್ ನ್ನು ವಶಕ್ಕೆ ಪಡೆಯಲಾಗಿದ್ದು,ಈ ಪ್ರಕರಣದಲ್ಲಿ ಇವರ ಪಾತ್ರ ಏನೆಂಬುದು ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿ ವಿಚಾರಣೆ ನಂತರ ತಿಳಿಯಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ