ಈವರೆಗೆ ಪತ್ತೆಯಾದದ್ದು ಮೂರು ಕೆಎಫ್‌ಡಿ ಪ್ರಕರಣ; ಹಾಲಪ್ಪ ಎಚ್ಚರಿಕೆ


Team Udayavani, Apr 22, 2022, 8:21 PM IST

1-afdsads

ಸಾಗರ: ತಾಲೂಕಿನಲ್ಲಿ 738 ರಕ್ತದ ಮಾದರಿ ಪರೀಕ್ಷೆಯಲ್ಲಿ ಮೂವರಿಗೆ ಮಂಗನ ಕಾಯಿಲೆ ಕಂಡುಬಂದಿತ್ತು. ತಡಗಳಲೆ, ಕಾರ್ಗಲ್ ಮತ್ತು ಕಾಗೋಡು ಪ್ರದೇಶದಲ್ಲಿ ಇದು ಕಂಡುಬಂದಿದ್ದು ಈಗ ಅವರು ಗುಣಮುಖರಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ಸಂಬಂಧಪಟ್ಟ ಪ್ರಾಥಮಿಕ ಆರೋಗ್ಯ ಘಟಕದಲ್ಲಿ ಜನತೆ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಸೂಚಿಸಿದರು.

ಶುಕ್ರವಾರ ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಂಗನ ಕಾಯಿಲೆ ಮುಂಜಾಗ್ರತೆ ಕುರಿತಂತೆ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಜನವರಿ ತಿಂಗಳಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ 738 ರಕ್ತ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಪ್ರತಿ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಕಾಣಿಸಿಕೊಳ್ಳುವ ಸಂಭವ ಹೆಚ್ಚಿದ್ದು, ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಇತ್ತೀಚೆಗೆ ಉತ್ತರ ಕನ್ನಡದ ಸಿದ್ದಾಪುರದಲ್ಲಿ ಮಂಗನ ಕಾಯಿಲೆಯಿಂದ ಓರ್ವರು ಮೃತಪಟ್ಟಿದ್ದಾರೆ. ನಾವು ತುಂಬಾ ಎಚ್ಚರ ವಹಿಸಬೇಕು. ಆರೋಗ್ಯ ಇಲಾಖೆ ಕರಪತ್ರಗಳನ್ನು ಮುದ್ರಿಸಿ ಆ ಪ್ರದೇಶದ ಮನೆ ಮನೆಗೆ ತಲುಪಿಸಬೇಕು. ಸಾಗರ ತಾಪಂ ಈ ಕೆಲಸದಲ್ಲಿ ಕೈ ಜೋಡಿಸಬೇಕು ಎಂದರು.

ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಆರೋಗ್ಯ ಮೇಳ ಏ. 28ರಂದು ಸಾಗರದಲ್ಲಿ ನಡೆಯಲಿದ್ದು ಒಂದು ಸಾವಿರಕ್ಕೂ ಅಧಿಕ ಜನರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಅಂದು ಕೈಬಿಟ್ಟು ಹೋದವರಿಗೆ ಆಯುಷ್ಮಾನ್ ಕಾರ್ಡ್ ಅನ್ನು ಕೂಡ ನೀಡಲಾಗುವುದು. ಸಮಸ್ಯೆ ಇರುವವರಿಗೆ ವೈದ್ಯರ ಶುಶ್ರೂಷೆಗೆ ಶಿಫಾರಸು ಮಾಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಸಿದ್ಧತೆಗಳು ನಡೆದಿವೆ ಎಂದರು.

ಜಿಲ್ಲೆಯಲ್ಲಿನ ಕೆಎಫ್‌ಡಿ ಕುರಿತಂತೆ ವಿವರಣೆ ನೀಡಿದ ಲ್ಯಾಬೊರೇಟರಿ ಮುಖ್ಯಸ್ಥೆ ಪಲ್ಲವಿ, ಜಿಲ್ಲೆಯಲ್ಲಿ ೫೪ ಉಣ್ಣೆಗಳ ಪರೀಕ್ಷೆ ಮಾಡಲಾಗಿದ್ದು ಅದರಲ್ಲಿ ೨ರಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆ ಗುಣಲಕ್ಷಣಗಳು ಕಂಡುಬಂದಿತ್ತು. ಲಸಿಕೆಯ ಬೂಸ್ಟರ್ ಡೋಸ್ ಅನ್ನು 4,400 ಜನರಿಗೆ ಕೊಡಲಾಗುತ್ತಿದ್ದು ಕೆಲವು ಗುಡ್ಡಗಾಡಿನಂತಹ ಪ್ರದೇಶಗಳಲ್ಲಿ ಇನ್ನೂ ಕೊಡಬೇಕಾಗಿದೆ. ಅವರಿಗೆ ಸಂಚಾರಕ್ಕೆ ವಾಹನ ಕೊರತೆ ಇದ್ದು ಅದನ್ನು ಸಂಬಂಧಪಟ್ಟ ಇಲಾಖೆ ನಿರ್ವಹಿಸಬೇಕು. ಆ ಸಂದರ್ಭದಲ್ಲಿ ಅಂತಹ ಪ್ರದೇಶಗಳಿಗೆ ತೆರಳುವಂತಹ ವೈದ್ಯರ ತಂಡ ಎಲ್ಲಾ ರೀತಿಯ ತಪಾಸಣೆಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಸಹಾಯಕ ಆಯುಕ್ತ ಡಾ. ಎಲ್. ನಾಗರಾಜ್, ತಹಶೀಲ್ದಾರ್ ಮಲ್ಲೇಶ ಬೀರಪ್ಪ ಪೂಜಾರ, ತಾಪಂ ಕಾರ್ಯನಿರ್ವಹಣಾಧಿಕಾರಿ ಪುಷ್ಪ್ಪಾ ಆರ್. ಕಮ್ಮಾರ್, ವಲಯ ಅರಣ್ಯಾಧಿಕಾರಿ ಪ್ರಮೋದ್, ಉಪವಿಭಾಗೀಯ ಆಸ್ಪತ್ರೆಯ ಸಿವಿಲ್ ಸರ್ಜನ್ ಪರಪ್ಪ, ತಾಲೂಕು ವೈದ್ಯಾಧಿಕಾರಿ ಡಾ| ಮೋಹನ್, ನಗರಸಭಾಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಗಣೇಶ್‌ಪ್ರಸಾದ್, ಸಂತೋಷ್ ಶೇಟ್, ಸತೀಶ್ ಮೊಗವೀರ್ ಇತರರು ಹಾಜರಿದ್ದರು.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.