ತುಂಗಾರತಿಗೆ 3 ತಿಂಗಳಿನಿಂದ ತಡೆ!

ಒಂದೂವರೆ ವರ್ಷ ಹಿಂದೆ ನಡೆದಿತ್ತು ತುಂಗಾರತಿ ಕಾರ್ಯಕ್ರಮ

Team Udayavani, Apr 8, 2022, 5:24 PM IST

aarati

ತೀರ್ಥಹಳ್ಳಿ: ಪುರೋಹಿತರ ನಡುವೆ ಉಂಟಾದ ಗೊಂದಲದಿಂದ ಪಟ್ಟಣದ ತುಂಗಾ ತೀರದಲ್ಲಿ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ಆದೇಶದಂತೆ ಕಳೆದ ಒಂದೂವರೆ ವರ್ಷದಿಂದ ನಡೆಯುತ್ತಿದ್ದ ತುಂಗಾರತಿಗೆ 3 ತಿಂಗಳಿಂದ ತಡೆ ಉಂಟಾಗಿದೆ.

ಪ್ರಧಾನಿ ನರೇಂದ್ರ ಮೋದಿ ಕಾಶಿಯ ವಿಶ್ವನಾಥ ಕ್ಷೇತ್ರದಲ್ಲಿ ಗಂಗಾ ಆರತಿ ಮಾಡಿದ್ದ ಹಾಗೆ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಲೆನಾಡಿನ ತೀರ್ಥಹಳ್ಳಿಯ ಕುರುವಳ್ಳಿಯ ಪುತ್ತಿಗೆ ಮಠದ ಸಮೀಪವಿರುವ ತುಂಗಾ ನದಿಯ ದಡದಲ್ಲಿ ಭಾರತದ ಅನೇಕ ಕಡೆಗಳಲ್ಲಿ ಸೈಕಲ್ಲಿನಲ್ಲಿ ಪ್ರಯಾಣ ಮಾಡಿ ಪಾಂಡಿತ್ಯ ಪಡೆದ ಬೊಮ್ಮಸಯ್ಯನ ಅಗ್ರಹಾರದ ಕಾಶಿ ಶೇಷಾದ್ರಿ ದೀಕ್ಷಿತ್‌ ಅವರ ನೇತೃತ್ವದಲ್ಲಿ ತುಂಗಾ ಆರತಿಯನ್ನು ವಿಶೇಷ ರೀತಿಯಲ್ಲಿ ವಾದ್ಯ ಘೋಷ, ಬಾಗಿನ ಅರ್ಪಣೆ ಹಾಗೂ ತುಂಗಾರತಿಗೆ ಬಂದ ಸಾರ್ವಜನಿಕರಿಂದ ಆರತಿ ಬೆಳಗುವುದರ ಮೂಲಕ ಪ್ರಾರಂಭ ಮಾಡಲಾಗಿತ್ತು.

ಇದಕ್ಕೆ ತಾಲೂಕಿನ ಜನಪ್ರತಿನಿ ಧಿಗಳಿಂದ ಹಾಗೂ ಸಾರ್ವಜನಿಕರಿಂದ ಉತ್ತಮ ಪ್ರಶಂಸೆ ಕೂಡ ವ್ಯಕ್ತವಾಯಿತು. ದಕ್ಷಿಣಾಯಣ ಪುಣ್ಯ ಕಾಲ, ಕರ್ಕಾಟಕ ಸಂಕ್ರಮಣದ ದಿನದಂದು ತೀರ್ಥಹಳ್ಳಿಯ ಪವಿತ್ರ ತುಂಗಾ ನದಿಗೆ ಕಾಶಿ ದೀಕ್ಷಿತ್‌ ಅವರ ಅರ್ಚಕ ನೇತೃತ್ವದಲ್ಲಿ ತುಂಗಾರತಿ ಮಾಡಲಾಗಿತ್ತು. ತೀರ್ಥಹಳ್ಳಿ ತಹಶೀಲ್ದಾರ್‌, ಪುತ್ತಿಗೆ ಮಠ, ಶೃಂಗೇರಿ ಮಠ ಹಾಗೂ ಆಸ್ತಿಕರ ಸಹಯೋಗದೊಂದಿಗೆ ತುಂಗಾ ನದಿಗೆ ತುಂಗಾರತಿಯು ಪ್ರಾರಂಭವಾಗಿ ತುಂಗಾರತಿಯನ್ನು ವರ್ಷ ಪೂರ್ತಿ ಮುಂದುವರಿಸಿಕೊಂಡು ಹೋಗಲಿದ್ದಾರೆ ಎನ್ನುವ ಮಾತು ಸಾರ್ವಜನಿಕವಾಗಿ ಕೇಳಿ ಬಂದಿತ್ತು.

ಪುತ್ತಿಗೆ ಮಠದ ಸಮೀಪವಿರುವ ತುಂಗಾ ದಂಡೆಯಲ್ಲಿ, ಪ್ರತಿ ದಿನವೂ ತುಂಗಾರತಿಯು ಮುಂದುವರಿಯಿತು. ತುಂಗಾರತಿಗೆ ತಹಶೀಲ್ದಾರ್‌ ಡಾ| ಶ್ರೀಪಾದ್‌ ಅವರ ವಿಶೇಷ ಆಸಕ್ತಿ ಇತ್ತು. ತಿಂಗಳಿಗೆ ಓರ್ವ ಅರ್ಚಕರ ನೇತೃತ್ವದಲ್ಲಿ ತುಂಗಾರತಿಯು ಮುಂದುವರಿಯಲಿದ್ದು, ಊರಿನ ಜನರ, ಆಸ್ತಿಕರ ಸಹಕಾರವನ್ನು ಅರ್ಚಕ ವೃಂದದವರನ್ನು ಡಾ| ಶ್ರೀಪಾದ್‌ ಅವರು ಕೋರಿದ್ದರು. ಆದರೆ ತಾಲೂಕು ಆಡಳಿತ ಮೊದಲಿಗೆ ಇದರ ಬಗ್ಗೆ ಹೆಚ್ಚಿನ ಗಮನ ವಹಿಸಿ ನಂತರ ಇದರ ಬಗ್ಗೆ ಗಮನ ವಹಿಸದ ಕಾರಣ ಸತತವಾಗಿ 6 -8 ತಿಂಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆದುಕೊಂಡು ಬಂದಿದ್ದ ತುಂಗಾರತಿ ಕಾರ್ಯಕ್ರಮಕ್ಕೆ ಸತತ 3 ತಿಂಗಳಿನಿಂದ ಬ್ರೇಕ್‌ ಬಿದ್ದಿದೆ.

ಕಾಶಿ ದೀಕ್ಷಿತ್‌ ಅವರು ಈ ತುಂಗಾ ಆರತಿಯನ್ನು ತುಂಬಾ ಅಚ್ಚುಕಟ್ಟಾಗಿ ನಡೆಸಿಕೊಡುತ್ತಿದ್ದರು. ಆದರೆ ನಂತರದಲ್ಲಿ ತುಂಗಾರತಿ ಮಾಡಲು ತಮ್ಮ ಸಮಯ ಬಂದಾಗ ಕೆಲವೊಂದು ಅರ್ಚಕರು ಇದರ ಬಗ್ಗೆ ಆಸಕ್ತಿ ವಹಿಸಲಿಲ್ಲವೋ ಅಥವಾ ಇದಕ್ಕೆ ತಾಲೂಕು ಆಡಳಿತ ಗಮನ ವಹಿಸದೇ ನಿರ್ಲಕ್ಷ್ಯ ವಹಿಸಿತೋ ಗೊತ್ತಿಲ್ಲ. ಒಟ್ಟಿನಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದ ತೀರ್ಥಹಳ್ಳಿಯ ತುಂಗಾ ಆರತಿ ಕಾರ್ಯಕ್ರಮಕ್ಕೆ ಬ್ರೇಕ್‌ ಬಿದ್ದಿದೆ. ಮತ್ತೂಮ್ಮೆ ತೀರ್ಥಹಳ್ಳಿಯಲ್ಲಿ ತುಂಗಾ ಆರತಿ ಕಾರ್ಯಕ್ರಮ ಮುಂದುವರಿಯಲಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

-ಶ್ರೀಕಾಂತ್ ವಿ. ನಾಯಕ್

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.