ತೀರ್ಥಹಳ್ಳಿ ಮೂಲದ ವ್ಯಕ್ತಿ ಅಫ್ಘಾನ್ ನಲ್ಲಿ ಅತಂತ್ರ!
Team Udayavani, Aug 19, 2021, 7:27 PM IST
ತೀರ್ಥಹಳ್ಳಿ: ಅಫ್ಘಾನಿಸ್ತಾನ ತಾಲಿಬಾನಿಗಳ ಕೈ ವಶವಾಗುತ್ತಿದ್ದಂತೆ, ಅಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಅಲ್ಲಿ ನೆಲೆಸಿದ್ದ ವಿದೇಶಿಗರು ದೇಶ ತೊರೆಯಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಕರ್ನಾಟಕದ ಅನೇಕರು ಕೂಡ ಅಲ್ಲಿ ಸಿಲುಕಿಕೊಂಡಿದ್ದಾರೆ. ಈ ನಡುವೆ ತೀರ್ಥಹಳ್ಳಿ ಮೂಲದ ಪಾದ್ರಿ ಒಬ್ಬರು ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದು, ಇದೀಗ ಅವರಿಗೆ ಭಾರತ ಸರಕಾರದ ನೆರವು ಬೇಕಿದೆ. ರಾಜ್ಯದ ಗೃಹ ಮಂತ್ರಿಗಳಾಗಿ ತೀರ್ಥಹಳ್ಳಿ ಶಾಸಕ ಆರಗ ಅವರು ಈ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಪಟ್ಟಣದ ದೊಡ್ಡಮನೆ ಕೇರಿಯ ವಾಸಿಯಾಗಿರುವ ಫಾದರ್ ರಾಬರ್ಟ್ ತೀರ್ಥಹಳ್ಳಿ ತುಂಗಾ ಕಾಲೇಜಿನಲ್ಲಿ ಪದವಿ ಪೂರೈಸಿ ಬಳಿಕ ಕ್ರೈಸ್ತ ಗುರುವಾಗಿ ಕೆಲಸ ಮಾಡಿದ್ದರು. ಮಂಗಳೂರು, ಬೆಂಗಳೂರು ಬಳಿಕ ಸಮಾಜ ಸೇವೆಯ ಕನಸು ಹೊತ್ತು ಅಫ್ಘಾನಿಸ್ತಾನಕ್ಕೆ ಹೋಗಿದ್ದರು. ಮಧ್ಯ ಅಫ್ಘಾನಿಸ್ತಾನದ ಬಾಮಿಯಾನ್ ಪ್ರಾಂತ್ಯದ ರಾಜಧಾನಿಯಾದ ಬಾಮಿಯಾನ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 1432 ಪಾಸಿಟಿವ್ ಪ್ರಕರಣ| 1538 ಸೋಂಕಿತರು ಗುಣಮುಖ
ಇವರು ಜೆಸ್ಯೂಟ್ ಸಮುದಾಯದ ಪಾದ್ರಿಯಾಗಿ ನಾಲ್ಕು ವರ್ಷಗಳ ದೀಕ್ಷೆ ಪಡೆದಿದ್ದರು. ನಂತರ ಬೆಂಗಳೂರಿನ ಶಾಲೆಯೊಂದರಲ್ಲಿ ಸೇವೆ ಸಲ್ಲಿಸಿದರು. ಇದಾದ ನಂತರ ಅಫ್ಘಾನಿಸ್ತಾನದಲ್ಲಿ ಕ್ರೈಸ್ತಗುರುವಾಗಿ ಸೇವೆ ಸಲ್ಲಿಸಲು ತೆರಳಿದ್ದರು. ಬದಲಾದ ಅಫ್ಘಾನಿಸ್ಥಾನ ಆಡಳಿತ ವ್ಯವಸ್ಥೆ ತಾಲೀಬಾನಿಗಳ ಕೈಗೆ ಹೋಗುತ್ತಿದ್ದಂತೆ ಅಲ್ಲಿಂದ ಭಾರತ ಮೂಲದವರು ಭಾರತಕ್ಕೆ ಬರಲು ಹರ ಸಾಹಸಪಡುತ್ತಿದ್ದಾರೆ. ಅಲ್ಲಿಂದ
ಕುಟುಂಬ ಸ್ನೇಹಿತ ರೋಬ್ಬರಿಗೆ ಸಂದೇಶ ಮೂಲಕ ಪ್ರತಿಕ್ರಿಯಿಸಿದ ರೋಡ್ರಿಗಸ್ ನಾನು ಇಲ್ಲಿ ಕಷ್ಟದಲ್ಲಿದ್ದೇನೆ. ಕಾಬುಲ್ ಏರ್ಪೋರ್ಟ್ ತಲುಪಲು ಸಾಧ್ಯ ಆಗುತ್ತಿಲ್ಲ. ನಮಗೆ ದೇವರೇ ಕಾಪಾಡಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ