ಸರ್ಕಾರಿ ಅಧಿಕಾರಿಗಳಿಗೆ ಕ್ವಾರಂಟೈನ್
Team Udayavani, Apr 24, 2020, 2:35 PM IST
ತೀರ್ಥಹಳ್ಳಿ: ಪಟ್ಟಣದ ಕುಶಾವತಿ ಚೆಕ್ಪೋಸ್ಟ್ನಲ್ಲಿ ಸರ್ಕಾರಿ ಅಧಿಕಾರಿಗಳನ್ನು ತಡೆದು ನಿಲ್ಲಿಸಿರುವುದು
ತೀರ್ಥಹಳ್ಳಿ: ತಾಲೂಕಿಗೆ ಆಗಮಿಸುವ ಎಲ್ಲಾ ಚೆಕ್ಪೋಸ್ಟ್ಗಳನ್ನು ಕ್ಷೇತ್ರದ ಶಾಸಕ ಆರಗ ಜಾನೇಂದ್ರ, ತಹಶೀಲ್ದಾರರು ಭೇಟಿ ನೀಡಿ ಪರಿಶೀಲಿಸಿದರು. ಕಟ್ಟುನಿಟ್ಟಿನ ಆದೇಶ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡದರು.
ಬಿದರುಗೋಡಿನ ವಾಹನ ತಪಾಸಣಾ ಕೇಂದ್ರದಲ್ಲಿ ಉಡುಪಿ ಜಿಲ್ಲೆಯ ವಾಹನವನ್ನು ತಡೆದು ಪುನಃ ವಾಪಸ್ ಕಳುಹಿಸಿದ ಘಟನೆಯೂ ನಡೆಯಿತು. ಬುಧವಾರ ಕುಶಾವತಿ ಚೆಕ್ಪೋಸ್ಟ್ನಲ್ಲಿ ಮಂಡ್ಯದಿಂದ ಬಂದ ತೀರ್ಥಹಳ್ಳಿಯ ಸರ್ಕಾರಿ ಅಧಿಕಾರಿಯನ್ನೇ ತಡೆದು ಇಪ್ಪತ್ತೆಂಟು ದಿನಗಳ ಹೋಂ ಕ್ವಾರಂಟೈನ್ಗೆ ಕಳುಹಿಸಲಾಗಿದೆ. ಭೂ ದಾಖಲೆಗಳ ಸಂಬಂಧಪಟ್ಟ ತೀರ್ಥಹಳ್ಳಿ ತಾಲೂಕು ಸರ್ವೆಯರ್ ಮತ್ತು ಪರ್ಯಾಯ ವೀಕ್ಷಕರನ್ನು ತಡೆದು ಹೋಂ ಕ್ವಾರಂಟೈನ್ಗೆ 28 ದಿನ ಕಳುಹಿಸಿದ್ದಾರೆ.
ಪಟ್ಟಣದ ಮೀನು ಮಾರ್ಕೆಟ್ ಹತ್ತಿರ ಖಾಸಗಿ ಬಡಾವಣೆಯೊಂದರ ಸಮೀಪ ಐವತ್ತು ಜನರ ಗುಂಪೊಂದು ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಕ್ರಿಕೆಟ್ ಆಡುತ್ತಿತ್ತು. ಆ ಗುಂಪಿನ ಮೇಲೆ ದಾಳಿ ನಡೆಸಿದ್ದು ಕ್ರಿಕೆಟ್ ಆಡುತ್ತಿದ್ದವರೆಲ್ಲರೂ ಪಲಾಯನ ಮಾಡಿದ್ದಾರೆ. ಅವರ ಕಾರು- ಬೈಕ್ಗಳನ್ನು ಸೀಜ್ ಮಾಡಿ ವಶಪಡಿಸಿಕೊಂಡಿದ್ದಾರೆ.
ಮುನ್ನೆಚ್ಚರಿಕಾ ಕ್ರಮಕ್ಕೆ ಶ್ರಮಿಸುತ್ತಿರುವ ಶಾಸಕ ಆರಗ ಜಾನೇಂದ್ರ, ತಹಶೀಲ್ದಾರ್ ಡಾ| ಶ್ರೀಪಾದ್, ಡಿವೈಎಸ್ಪಿ ಸಂತೋಷ್, ಸರ್ಕಲ್ ಇನ್ಸ್ಪೆಕ್ಟರ್ ಗಣೇಶಪ್ಪ, ಸಬ್ಇನ್ಸ್ಪೆಕ್ಟರ್ ಎಲ್ಲಪ್ಪನವರ್, ತಾಪಂ ಕಾರ್ಯ ನಿರ್ವಹಣಾ ಧಿಕಾರಿ ಆಶಾಲತಾ, ಪಪಂ ಮುಖ್ಯಾ ಧಿಕಾರಿ ಸಿ.ಡಿ. ನಾಗೇಂದ್ರ, ಕಂದಾಯ ಅ ಧಿಕಾರಿ ಮಂಜುನಾಥ್ ಮತ್ತು ತಂಡಕ್ಕೆ ಜನತೆಯಿಂದ ಅಭಿನಂದನೆಯ ಮಹಾಪೂರವೇ ಹರಿದುಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ