ಹೆಚ್ಚುತ್ತಿದೆ ಅಕ್ರಮ ಮರಳು ದಂಧೆ

ಜನರ ನೆಮ್ಮದಿಗೂ ಭಂಗವಾಹನ ಸವಾರರು- ಪಾದಚಾರಿಗಳಿಗೂ ಸಮಸ್ಯೆ

Team Udayavani, Feb 14, 2020, 5:50 PM IST

14-February-13

ತೀರ್ಥಹಳ್ಳಿ: ತಾಲೂಕಿನಲ್ಲಿ ಸರ್ಕಾರ ನಿಗದಿ ಪಡಿಸಿರುವ ಕೆಲವು ಮರಳು ಕ್ವಾರಿಗಳು ಇನ್ನು ತೆರೆಯದಿರುವ ಕಾರಣ ಅಕ್ರಮ ಮರಳು ಲೂಟಿಕೋರರಿಗೆ ಪ್ರತಿದಿನ ಹಬ್ಬದೂಟವಾಗುತ್ತಿದೆ. ಆದರೆ ಪಾದಚಾರಿಗಳಿಗೆ, ವಾಯು ವಿಹಾರಕ್ಕೆ ಹೋಗುವವರಿಗೆ, ವಾಹನ ಸವಾರರಿಗೆ ಬೆಳಗಿನ ಮುಸುಕಿನ ಜಾವದಲ್ಲಿ ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಉದ್ಭವವಾಗಿದೆ.

ಅಕ್ರಮ ಮರಳು ದಂಧೆ ತಡೆಯಬೇಕಾದ ಅಧಿಕಾರಿಗಳು ಕಾಂಚಾಣ ಜಣ ಜಣದ ಆಟ ಕಂಡು ಜಾಣ ಮೌನ ವಹಿಸಿದ್ದಾರೆ. ಈ ಜಾಣ ಮೌನದ ಹಿಂದಿನ ಗುಟ್ಟೇನು ಎಂದು ಅಧಿಕಾರಿಗಳೇ ತಿಳಿಸಬೇಕಾಗಿದೆ. ಕಳೆದ ವರ್ಷ ಸುರಿದ ಭಾರೀ ಮಳೆಯಿಂದ ತುಂಗಾ ನದಿಯ ಅಕ್ಕಪಕ್ಕ ಭಾರೀ ಪ್ರಮಾಣದ ಮರಳು ಶೇಖರಣೆಯಾಗಿದ್ದು ಪ್ರತಿದಿನ ಹಗಲು- ರಾತ್ರಿಯೆನ್ನದೆ ತುಂಗಾ ನದಿಯ ಪಾತ್ರದಿಂದ ಹೊರಬೈಲು, ಕೌರಿಬೈಲು, ಬುಕ್ಲಾಪುರ, ಕುಶಾವತಿ, ಸಂಕದಹೊಳೆ,
ಕಿತ್ತಿನಗದ್ದೆ, ಮೇಳಿಗೆ, ರಂಜದಕಟ್ಟೆ, ಕುರುವಳ್ಳಿ ತೋಟಗಾರಿಕಾ ಇಲಾಖೆ, ಹೆಗ್ಗೇಬೈಲು, ತುಂಬಡಿ, ಹುಣಸವಳ್ಳಿಯ ನದಿ ಪಾತ್ರದಿಂದ ಅಕ್ರಮವಾಗಿ ಪಿಕಪ್‌, ಟ್ರ್ಯಾಕ್ಟರ್‌ಗಳನ್ನು ಬಳಸಿ ಮರಳು ತೆಗೆಯಲಾಗುತ್ತಿತ್ತು.

ಇದರಿಂದ ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ಆದಾಯ ಕುಂಠಿತವಾಗುತ್ತಿದೆ. ಈ ಬಗ್ಗೆ ಇತ್ತೀಚೆಗೆ ಶಿವಮೊಗ್ಗ ಕೆಡಿಪಿ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರಾದ ಈಶ್ವರಪ್ಪ ಮತ್ತು ಶಾಸಕರ ಉಪಸ್ಥಿತಿಯಲ್ಲೂ ಹಾಗೂ ತೀರ್ಥಹಳ್ಳಿ ಕೆಡಿಪಿ ಸಭೆಯಲ್ಲೂ ಬಿಸಿಬಿಸಿ ಚರ್ಚೆಯಾದರೂ ಚರ್ಚೆಯ ವಿಷಯ ಕೇವಲ ಮೀಟಿಂಗ್‌ ಹಾಗೂ ಪತ್ರಿಕೆಗಳಲ್ಲಿ ಪ್ರಕಟವಾಗಿದೆಯೇ ಹೊರತು ಅಕ್ರಮ ಮರಳು ಸಾಗಾಟ ಮಾತ್ರ ನಿಂತಿಲ್ಲ.

ಕೆಲವು ಭಾಗಗಳಲ್ಲಿ ರಾತ್ರಿ ಮರಳು ತೆಗೆಯುವುದರಿಂದ ಅದರ ಶಬ್ದದಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ ಗ್ರಾಮಸ್ಥರು ಸಂಬಂಧಪಟ್ಟ ಗ್ರಾಪಂಗಳಿಗೆ ತಿಳಿಸಿದರೂ ಸಹ ಇದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ಗ್ರಾಮಸ್ಥರು ಪೊಲೀಸ್‌, ಅರಣ್ಯ ಮತ್ತು ಗಣಿ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಇಲಾಖಾ ಅಧಿಕಾರಿಗಳೇ ಅಕ್ರಮ ದಂಧೆಕೋರರೊಂದಿಗೆ ಶಾಮೀಲಾಗಿದ್ದಾರೆಂದು ಜನರು ಅಂಗಡಿ- ಮುಂಗಟ್ಟುಗಳಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಅನೇಕ ವರ್ಷಗಳ ಹಿಂದೆ ಗಂಧ ಸಾಗಾಟದ ದಂಧೆಯಿದ್ದಾಗಲೂ ಇದೇ ರೀತಿಯಲ್ಲಿ ಜನರ ನೆಮ್ಮದಿ ಕೆಡಿಸುತ್ತಿತ್ತು. ಈಗ ಅಕ್ರಮ ಮರಳಿನ ದಂಧೆಯಾಗಿದೆ. ಆದ್ದರಿಂದ ಜನರು ಸ್ಯಾಂಡಲ್‌ ಹೋಗಿದೆ ಸ್ಯಾಂಡ್‌ ಬಂದಿದೆ ಎಂಬ ಮಾತುಗಳನ್ನಾಡುತ್ತಿದ್ದಾರೆ.

ತೀರ್ಥಹಳ್ಳಿಯಿಂದ ಪಿಕಪ್‌ ಮತ್ತು ಟ್ರ್ಯಾಕ್ಟರ್‌ ಗಳಲ್ಲಿ ಈ ದಂಧೆಕೋರರು ಒಂದು ಕಡೆ ಕಾಟಿಂಗ್‌ ಮಾಡಿ ಕಾಟಿಂಗ್‌ ಮಾಡಿದ ಮರಳನ್ನು ಟಿಪ್ಪರ್‌ ಮತ್ತು ಲಾರಿಗೆ ತುಂಬಿಕೊಂಡು ಹೋಗುತ್ತಿದ್ದಾರೆ. ಪ್ರತಿ ದಿನ ಅಕ್ರಮ ಮರಳು ಸಾಗಾಟದ ವಾಹನಗಳು ತೀರ್ಥಹಳ್ಳಿ ಪಟ್ಟಣದ ಮುಖಾಂತರ ಮಾಳೂರು ಠಾಣೆ ಹಾಗೂ ಮಂಡಗದ್ದೆ ಅರಣ್ಯ ಇಲಾಖೆ ಕಚೇರಿ ಎದುರೇ ಯಾವುದೆ ಭಯಭೀತಿ ಇಲ್ಲದೇ ಸಂಚರಿಸುತ್ತಿವೆ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ತೀರ್ಥಹಳ್ಳಿ ಮತ್ತು ಶಿವಮೊಗ್ಗದ ನಡುವಿನ ಗಾಜನೂರಿನ ಫಾರೆಸ್ಟ್‌ ಗೇಟ್‌ ಬಳಿ ಈ ಅಕ್ರಮ ಮರಳು ಸಾಗಾಟದ ಟಿಪ್ಪರ್‌ ಲಾರಿ ಹೋಗುತ್ತಿದ್ದಂತೆ ಲಾರಿಯನ್ನು ತಡೆದು ತಪಾಸಣೆ ಮಾಡದೆ ಲಾರಿಯೊಂದಕ್ಕೆ ಎರಡು ಸಾವಿರ ರೂ. ಹಣ ಪಡೆದುಕೊಂಡು ಗೇಟ್‌ನಿಂದ ಬಿಡುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಟಿಪ್ಪರ್‌ ಚಾಲಕರೊಬ್ಬರು ಮಾಹಿತಿ ನೀಡಿದ್ದಾರೆ.

ರಾತ್ರಿ ಮತ್ತು ಬೆಳಗಿನ ಹೊತ್ತು ಅಕ್ರಮ ಮರಳು ಸಾಗಾಟದ ವಾಹನಗಳು ರಸ್ತೆಯಲ್ಲಿ ಅತಿ ವೇಗ ಮತ್ತು ಪೈಪೋಟಿಯಿಂದ ಸಂಚರಿಸುತ್ತಿರುವುದರಿಂದ ಬೆಳಗಿನ ಸಮಯದಲ್ಲಿ ಓಡಾಡುವ ಪಾದಚಾರಿಗಳಿಗೆ, ವಾಹನ ಸವಾರರಿಗೆ ಕಂಟಕ ಕಟ್ಟಿಟ್ಟ ಬುತ್ತಿ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ರಕ್ಷಣಾ ಧಿಕಾರಿಗಳು ತೀರ್ಥಹಳ್ಳಿಯ ಡಿವೈಎಸ್‌ಪಿ ರವಿಕುಮಾರ್‌, ಸರ್ಕಲ್‌ ಇನ್ಸೆಪೆಕ್ಟರ್‌ ಗಣೇಶಪ್ಪ, ಸಬ್‌ ಇನ್ಸೆಪೆಕ್ಟರ್‌ ಸುಷ್ಮಾ ಅವರು ತಕ್ಷಣ ಗಮನಿಸಿ ಅಕ್ರಮ ಮರಳು ತುಂಬಿ ಅತಿ ವೇಗದ ಸಾಗಾಟಕ್ಕೆ ತಡೆ ನೀಡಲು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ವಿಶೇಷ ವರದಿ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.