Tirthahalli; ಜನ ಬೀದಿಗಿಳಿದು ಚಾಟಿ ತೆಗೆದುಕೊಳ್ಳಬೇಕು : ಆರಗ ಜ್ಞಾನೇಂದ್ರ


Team Udayavani, Aug 14, 2023, 4:08 PM IST

1—–adasd-a

ತೀರ್ಥಹಳ್ಳಿ : ಬಿಟ್ಟಿ ಭಾಗ್ಯ ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದ್ದು ಅಧಿಕಾರಕ್ಕೆ ಬಂದ ಮೇಲೆ ಸರ್ಕಾರ ನೆಡೆಸಲು ಆಗುತ್ತಿಲ್ಲ. ಹಾಗಾಗಿ ಬಾಯಿಮಾತಿನಲ್ಲಿ ಅಧಿಕಾರಿಗಳಿಗೆ ವಿದ್ಯುತ್ ನಿಲ್ಲಿಸಲು ಹೇಳಿದ್ದಾರೆ ಇದರಿಂದ ಹಲವರಿಗೆ ತೊಂದರೆ ಆಗುತ್ತಿದೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸೋಮವಾರ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನೆಡೆಸಿ ಮಾತನಾಡಿ ಗಂಟೆ ಗಟ್ಟಲೆ ಲೋಡ್ ಶೇಡ್ಡಿಂಗ್ ಮಾಡುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ, ವರ್ಕ್ ಶಾಪ್ ಮಾಲಕರಿಗೆ, ಹಿಟ್ಟಿನ ಅಂಗಡಿಯವರಿಗೆ ಕೆಲಸ ನಿಲ್ಲಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಈ ರಾಜ್ಯದ ಆರ್ಥಿಕತೆ ದುಸ್ಥಿತಿಗೆ ಬರುತ್ತಿದೆ. 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿ ವಿದ್ಯುತ್ ಕಡಿತಗೊಳಿಸಿದರೆ ಉಚಿತ ವಿದ್ಯುತ್ ಕೊಡುವುದೇನು ಎಂದು ಪ್ರೆಶ್ನೆ ಮಾಡಿದರು.

ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಎಂದರು. ಕಳೆದ ತಿಂಗಳು 720 ಕೋಟಿ ಕೆ ಎಸ್ ಆರ್ ಟಿ ಸಿ ಗೆ ಕಟ್ಟಬೇಕು.120ಕೋಟಿ ಕಟ್ಟಿದ್ದಾರೆ.ಮುಂದಿನ ತಿಂಗಳಿನಿಂದ ಬಸ್ ಗಳಿಗೆ ಡೀಸೆಲ್ ಇಲ್ಲ. ನೌಕರರಿಗೆ ಸಂಬಳ ಕೊಡಲು ಆಗುವುದಿಲ್ಲ. ಇನ್ನೆರಡು ತಿಂಗಳು ಕಳೆದರೆ ಮೆಸ್ಕಾಂ ನಲ್ಲಿ ಕೆಲಸ ಮಾಡುವ ನೌಕರರಿಗೂ ಸಂಬಳ ಕೊಡಲು ಆಗುವುದಿಲ್ಲ. ಇಡೀ ದೇಶದಲ್ಲಿಯೇ ಕರ್ನಾಟಕದಲ್ಲಿ ಕಾಂಗ್ರೆಸ್ ಬಂದಿದ್ದು ಹೆಮ್ಮೆಯ ಸಂಗತಿ ಎನ್ನುತ್ತಾರೆ ಆದರೆ ಅವರ ಮುಂದಿನ ಗುರಿ ರಾಜ್ಯದ ಜನರಿಗೆ ಒಳ್ಳೆಯದು ಮಾಡುವುದಲ್ಲ ಲೋಕಸಭಾ ಚುನಾವಣೆ ಗೆಲ್ಲುವುದು ಎಂದರು.

ಇವರನ್ನು ಪ್ರಕೃತಿ ಕೂಡ ವಿರೋಧಿಸುತ್ತದೆ. ಎಲ್ಲರೂ ಯಾವಾಗಲು ಹೇಳುತ್ತಿರುತ್ತಾರೆ. ಸಿದ್ದರಾಮಯ್ಯ ಸರ್ಕಾರ ಬಂದಾಗ ಬರ. ಯಡಿಯೂರಪ್ಪ ಸರ್ಕಾರ ಬಂದಾಗ ಅತಿವೃಷ್ಟಿ, ನೆರೆ, ಸಮೃದ್ಧಿ. ಯಾಕೆ ಎಂದರೆ ಕಾಂಗ್ರೆಸ್ ನವರು ಮಾಡುವ ಅನ್ಯಾಯಕ್ಕೆ ಪ್ರಕೃತಿ ಕೂಡ ಸಿಟ್ಟಾಗಿದೆ. ಈಗ ಆಗಸ್ಟ್ ತಿಂಗಳಲ್ಲಿ ಮೇ ತಿಂಗಳ ಹಾಗೆ ಆಗಿದೆ. ಗದ್ದೆ ನಾಟಿ ಮಾಡಲು ಆಗುತ್ತಿಲ್ಲ. ನೀರಿಲ್ಲ, ವಿದ್ಯುತ್ ಇಲ್ಲ, ಸರ್ಕಾರ ನೆಡೆಸಲು ಆಗದಿದ್ದರೆ ಜನರ ಬಳಿ ಕ್ಷಮೆ ಕೇಳಿ ಹೋಗಬೇಕು. ಸರ್ಕಾರ ಹೀಗೆ ನೆಡೆಯೋದು ಹಾಗಾಗಿ ಜನ ಬೀದಿಗಿಳಿದು ಚಾಟಿ ತೆಗೆದುಕೊಳ್ಳಬೇಕು ಎಂದು ಆಕ್ರೋಶ ಭರಿತರಾಗಿ ಮಾತನಾಡಿದರು.

ನಮ್ಮ ಸರ್ಕಾರ ಇರುವಾಗ ಕಾರ್ ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿತ್ತು ಆದರೆ ಆಗ ನಾನೇ ಇದು ಆಗುವುದಿಲ್ಲ ಎಂದು ಹೇಳಿದ್ದೆ. ಸಣ್ಣ ಪುಟ್ಟ ಕೆಲಸ ಮಾಡುವವರು ಕಾರ್ ತೆಗೆದುಕೊಂಡಿರುತ್ತಾರೆ. ಅಂತವರ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಆ ಕುಟುಂಬದ ಕಥೆ ಏನು? ಹಾಗಾಗಿ ನಮ್ಮ ಸರ್ಕಾರ ಕೊಡಲೇ ಆ ಆದೇಶ ವಾಪಾಸ್ ತೆಗೆದುಕೊಂಡಿತ್ತು. ಕಾರ್ ತೆಗೆದುಕೊಂಡು ಬಾಡಿಗೆ ಹೊಡೆಯುವವರು ಇದ್ದಾರೆ. ಅವರಿಗೆ 2 ದಿನಕ್ಕೂ ಬಾಡಿಗೆ ಸಿಗಲ್ಲ ಅಂತವರ ಕುಟುಂಬದ ಕಥೆ ಏನಾಗುತ್ತೆ? ಬಡವರ ಅನ್ನವನ್ನು ಕಸಿಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಾಲೆಕೊಪ್ಪ ರಾಮಚಂದ್ರ, ಬಾಳೆಬೈಲು ರಾಘವೇಂದ್ರ, ಸಂದೇಶ್ ಜವಳಿ, ಕಾಸರವಳ್ಳಿ ಶ್ರೀನಿವಾಸ, ಸುಮಾ ರಾಮಚಂದ್ರ, ನಾಗರಾಜ್ ಶೆಟ್ಟಿ, ಕುಕ್ಕೆ ಪ್ರಶಾಂತ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.